AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಕಲ್ಯಾಣ್ ರೈಲ್ವೇ ನಿಲ್ದಾಣದಲ್ಲಿ 54 ಡಿಟೋನೇಟರ್‌ಗಳು ಪತ್ತೆ

ಸೆಂಟ್ರಲ್ ರೈಲ್ವೇ (ಸಿಆರ್) ಮಾರ್ಗದಲ್ಲಿ ಸಾಮಾನ್ಯವಾಗಿ ಜನಸಂದಣಿ ಇರುವ ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 1 ನಲ್ಲಿ ಬಿದ್ದಿರುವ ಪೆಟ್ಟಿಗೆಗಳು ಸಿಕ್ಕಿವೆ.ಬಿಡಿಡಿಎಸ್ ತಂಡವು ಪೆಟ್ಟಿಗೆಗಳನ್ನು ಕಸ್ಟಡಿಗೆ ತೆಗೆದುಕೊಂಡಿತು. ಅವುಗಳನ್ನು ತೆರೆದಾಗ ಅವುಗಳಲ್ಲಿ 54 ಡಿಟೋನೇಟರ್‌ಗಳು (ಸಣ್ಣ ಪ್ರಮಾಣದ ಸ್ಫೋಟಕವನ್ನು ಒಳಗೊಂಡಿರುವ ಸಾಧನ) ಕಂಡುಬಂದಿವೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಹಾರಾಷ್ಟ್ರದ ಕಲ್ಯಾಣ್ ರೈಲ್ವೇ ನಿಲ್ದಾಣದಲ್ಲಿ 54 ಡಿಟೋನೇಟರ್‌ಗಳು ಪತ್ತೆ
ಡಿಟೋನೇಟರ್‌
ರಶ್ಮಿ ಕಲ್ಲಕಟ್ಟ
|

Updated on:Feb 21, 2024 | 8:13 PM

Share

ಮುಂಬೈ ಫೆಬ್ರುವರಿ 21: ಮಹಾರಾಷ್ಟ್ರದ (Maharashtra) ಥಾಣೆ ಜಿಲ್ಲೆಯ ಕಲ್ಯಾಣ್ ರೈಲ್ವೇ ನಿಲ್ದಾಣದ (Kalyan railway station) ಪ್ಲಾಟ್‌ಫಾರ್ಮ್‌ನಲ್ಲಿ ಬುಧವಾರ ಎರಡು ಬಾಕ್ಸ್‌ಗಳಲ್ಲಿ 50 ಕ್ಕೂ ಹೆಚ್ಚು ಡಿಟೋನೇಟರ್‌ಗಳು (detonators) ಪತ್ತೆಯಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೆಂಟ್ರಲ್ ರೈಲ್ವೇ (ಸಿಆರ್) ಮಾರ್ಗದಲ್ಲಿ ಸಾಮಾನ್ಯವಾಗಿ ಜನಸಂದಣಿ ಇರುವ ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 1 ನಲ್ಲಿ ಬಿದ್ದಿರುವ ಪೆಟ್ಟಿಗೆಗಳನ್ನು ಜಿಆರ್‌ಪಿ ಗಮನಿಸಿದೆ ಎಂದು ಅಧಿಕಾರಿ ಹೇಳಿದರು. ನಂತರ ಶ್ವಾನ ದಳ ಮತ್ತು ಬಾಂಬ್ ಪತ್ತೆ ಮತ್ತು ವಿಲೇವಾರಿ ಸ್ಕ್ವಾಡ್ (ಬಿಡಿಡಿಎಸ್) ಸಿಬ್ಬಂದಿಯನ್ನು ತಕ್ಷಣವೇ ಸ್ಥಳಕ್ಕೆ ಕರೆಸಲಾಯಿತು.

ಬಿಡಿಡಿಎಸ್ ತಂಡವು ಪೆಟ್ಟಿಗೆಗಳನ್ನು ಕಸ್ಟಡಿಗೆ ತೆಗೆದುಕೊಂಡಿತು. ಅವುಗಳನ್ನು ತೆರೆದಾಗ ಅವುಗಳಲ್ಲಿ 54 ಡಿಟೋನೇಟರ್‌ಗಳು (ಸಣ್ಣ ಪ್ರಮಾಣದ ಸ್ಫೋಟಕವನ್ನು ಒಳಗೊಂಡಿರುವ ಸಾಧನ) ಕಂಡುಬಂದಿವೆ ಎಂದು ಅವರು ಹೇಳಿದರು.

ಅವರು ಇನ್ನೂ ಪ್ರಕರಣ ದಾಖಲಿಸಿಕೊಳ್ಳದಿದ್ದರೂ ಕಲ್ಯಾಣ್ ಜಿಆರ್‌ಪಿ ತನಿಖೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಡಿಟೋನೇಟರ್‌ಗಳು ಪತ್ತೆಯಾದ ಸ್ಥಳಕ್ಕೆ ಥಾಣೆ ನಗರ ಪೊಲೀಸರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಸಾಮಾನ್ಯವಾಗಿ, ಥಾಣೆ ಜಿಲ್ಲೆಯಲ್ಲಿ ಅಕ್ರಮವಾಗಿ ಕೆರೆಗಳಲ್ಲಿ ಮೀನು ಹಿಡಿಯಲು ಮತ್ತು ಕ್ವಾರಿಗಳಲ್ಲಿ ಬ್ಲಾಸ್ಟಿಂಗ್ ಕಾರ್ಯಾಚರಣೆಗಳನ್ನು ನಡೆಸಲು ಡಿಟೋನೇಟರ್‌ಗಳನ್ನು ಬಳಸಲಾಗುತ್ತದೆ.

ಇದನ್ನೂ ಓದಿ: ವೈಎಸ್‌ಆರ್‌ಸಿಪಿಗೆ ಸಂಸದ ವಿಪಿಆರ್ ರಾಜೀನಾಮೆ; ಟಿಡಿಪಿ ಸೇರುವ ಸಾಧ್ಯತೆ

ಡಿಟೋನೇಟರ್‌ಗಳನ್ನು ನೀರಿನ ಮೂಲಕ ಆಘಾತ ತರಂಗಗಳನ್ನು ಕಳುಹಿಸಲು ಬಳಸಲಾಗುತ್ತದೆ. ಈ ಮೂಲಕ ಮೀನುಗಳನ್ನು ಕೊಲ್ಲಲಾಗುತ್ತದೆ. ಮುಂಬೈ ನಗರದ ಹೊರವಲಯದಲ್ಲಿರುವ ಕಲ್ಯಾಣ್ ರೈಲು ನಿಲ್ದಾಣವು ದೂರದ ಮತ್ತು ಉಪನಗರ ರೈಲುಗಳ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತದೆ ಮತ್ತು ಸಾಮಾನ್ಯವಾಗಿ ತುಂಬಾ ಜನದಟ್ಟಣೆಯಿಂದ ಕೂಡಿರುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Wed, 21 February 24

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್