AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಟ-ಮಂತ್ರ ಮಾಡುತ್ತಿದ್ದಾರೆಂಬ ಅನುಮಾನದಲ್ಲಿ 77 ವರ್ಷದ ಮಹಿಳೆಗೆ ಬಲವಂತವಾಗಿ ಮೂತ್ರ ಕುಡಿಸಿದ ಜನರು

ಮಹಾರಾಷ್ಟ್ರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಇಲ್ಲಿನ ಅಮರಾವತಿಯಲ್ಲಿ ಮಾಟಮಂತ್ರದ ಅನುಮಾನದ ಮೇಲೆ 77 ವರ್ಷದ ಮಹಿಳೆಯನ್ನು ಥಳಿಸಿ, ಆಕೆಗೆ ಬಲವಂತವಾಗಿ ಮೂತ್ರ ಕುಡಿಸಲಾಗಿದೆ. ಡಿಸೆಂಬರ್ 30ರಂದು ಈ ಘಟನೆ ನಡೆದಿದ್ದರೂ, ಈ ತಿಂಗಳ ಆರಂಭದಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು. ಸಂತ್ರಸ್ತೆಯ ಮಗ ಮತ್ತು ಸೊಸೆ ಶುಕ್ರವಾರ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮಾಟ-ಮಂತ್ರ ಮಾಡುತ್ತಿದ್ದಾರೆಂಬ ಅನುಮಾನದಲ್ಲಿ 77 ವರ್ಷದ ಮಹಿಳೆಗೆ ಬಲವಂತವಾಗಿ ಮೂತ್ರ ಕುಡಿಸಿದ ಜನರು
Harassment
ಸುಷ್ಮಾ ಚಕ್ರೆ
|

Updated on: Jan 18, 2025 | 7:30 PM

Share

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಾಟಮಂತ್ರ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ 77 ವರ್ಷದ ಮಹಿಳೆಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಲಾಗಿದೆ. ಬಳಿಕ ಕಬ್ಬಿಣದ ರಾಡ್‌ನಿಂದ ಹೊಡೆಯಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಡಿಸೆಂಬರ್ 30ರಂದು ಈ ಘಟನೆ ನಡೆದಿದ್ದರೂ ಈ ತಿಂಗಳ ಆರಂಭದಲ್ಲಿ ಪೊಲೀಸ್ ದೂರು ದಾಖಲಾಗಿದ್ದು, ಶುಕ್ರವಾರ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ಚಿಕಲ್ದಾರಾ ತಾಲೂಕಿನ ರೆತ್ಯಾಖೇಡ ಗ್ರಾಮದ ನಿವಾಸಿ ಎಂದು ಪೊಲೀಸರು ಹೇಳಿದ್ದಾರೆ.

ಡಿಸೆಂಬರ್ 30ರಂದು ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆಕೆಯ ನೆರೆಹೊರೆಯವರು ಆಕೆಯನ್ನು ಹಿಡಿದು ಆಕೆ ಮಾಟಮಂತ್ರ ಮಾಡುತ್ತಿದ್ದಾಳೆಂದು ಆರೋಪಿಸಿ ಕಟ್ಟಿಹಾಕಿದ್ದಾರೆ. ಬಳಿಕ, ಗ್ರಾಮಸ್ಥರು ಸಂತ್ರಸ್ತೆಯನ್ನು ಮರದ ಕೋಲಿನಿಂದ ಹೊಡೆದು, ಕಪಾಳಮೋಕ್ಷ ಮಾಡಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆಕೆಯ ಕೈ ಮತ್ತು ಕಾಲುಗಳ ಮೇಲೆ ಬಿಸಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಲಾಗಿದೆ.

ಇದನ್ನೂ ಓದಿ: ಗುಜರಾತ್: ಹೆಂಡತಿ, ಮಗುವನ್ನು ಕೊಂದು, ಪೋಷಕರ ಮೇಲೆ ಹಲ್ಲೆ ನಡೆಸಿ, ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ದೂರಿನ ಪ್ರಕಾರ, ಆ ಮಹಿಳೆಗೆ ಮೂತ್ರ ಕುಡಿಯಲು ಮತ್ತು ನಾಯಿಯ ಮಲ ಸೇವಿಸಲು ಒತ್ತಾಯಿಸಲಾಯಿತು. ನಂತರ ಆಕೆಯ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಯಿತು. ಕೆಲಸಕ್ಕೆ ಹೋಗಿದ್ದ ಆ ಮಹಿಳೆಯ ಮಗ ಮತ್ತು ಸೊಸೆ ಮನೆಗೆ ಬಂದಾಗ ಈ ವಿಷಯ ಗೊತ್ತಾಯಿತು. ಅವರು ಜನವರಿ 5ರಂದು ಪೊಲೀಸ್ ದೂರು ದಾಖಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!