AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಶಾಲೆಯಲ್ಲಿ ಬಿಸ್ಕತ್ತು ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥ

ಶಾಲೆಯೊಂದರಲ್ಲಿ ಬಿಸ್ಕತ್ತು ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಶಾಲೆಯ ಸುಮಾರು 80 ವಿದ್ಯಾರ್ಥಿಗಳು ಪೌಷ್ಟಿಕ ಆಹಾರ ಕಾರ್ಯಕ್ರಮದ ಭಾಗವಾಗಿ ನೀಡಲಾದ ಬಿಸ್ಕತ್‌ಗಳನ್ನು ಸೇವಿಸಿದ ನಂತರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ: ಶಾಲೆಯಲ್ಲಿ ಬಿಸ್ಕತ್ತು ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥ
ವಿದ್ಯಾರ್ಥಿಗಳುImage Credit source: India Today
ನಯನಾ ರಾಜೀವ್
|

Updated on: Aug 18, 2024 | 2:08 PM

Share

ಶಾಲೆಯಲ್ಲಿ ಬಿಸ್ಕತ್ತು ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಜಿಲ್ಲಾ ಕೌನ್ಸಿಲ್ ಶಾಲೆಯ ಸುಮಾರು 80 ವಿದ್ಯಾರ್ಥಿಗಳು ಪೌಷ್ಟಿಕ ಆಹಾರ ಕಾರ್ಯಕ್ರಮದ ಭಾಗವಾಗಿ ನೀಡಲಾದ ಬಿಸ್ಕತ್‌ಗಳನ್ನು ಸೇವಿಸಿದ ನಂತರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಕೇಟ್ ಜಲಗಾಂವ್ ಗ್ರಾಮದ ಶಾಲೆಯಲ್ಲಿ ಶನಿವಾರ ಬೆಳಿಗ್ಗೆ 8.30 ರ ಸುಮಾರಿಗೆ ಬಿಸ್ಕತ್ತು ಸೇವಿಸಿದ ನಂತರ ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿತ್ತು ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಷಯ ತಿಳಿದ ಗ್ರಾಮದ ಮುಖಂಡರು ಹಾಗೂ ಅಧಿಕಾರಿಗಳು ಕೂಡಲೇ ಶಾಲೆಗೆ ಆಗಮಿಸಿ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರು. ವಿದ್ಯಾರ್ಥಿಗಳನ್ನು ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವಿವರಿಸಲಾಗಿದೆ.

ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಬಾಬಾಸಾಹೇಬ್ ಘುಘೆ ಮಾತನಾಡಿ, ಶನಿವಾರ ಬೆಳಗ್ಗೆ 8.30ರ ಸುಮಾರಿಗೆ ಬಿಸ್ಕತ್ತು ಸೇವಿಸಿದ 257 ವಿದ್ಯಾರ್ಥಿಗಳು ವಿಷಾಹಾರದ ಲಕ್ಷಣ ಕಂಡು ಬಂದಿದ್ದು, 153 ಮಂದಿಯನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಕೆಲವರಿಗೆ ಚಿಕಿತ್ಸೆ ನೀಡಲಾಗಿದೆ. ಮತ್ತು ಮನೆಗೆ ಕಳುಹಿಸಲಾಗಿದೆ ಎಂದಿದ್ದಾರೆ.

ಮತ್ತಷ್ಟು ಓದಿ:  ಚಿತ್ರದುರ್ಗ: ಮದುವೆ ಊಟ ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥ

ತೀವ್ರ ರೋಗಲಕ್ಷಣಗಳನ್ನು ಹೊಂದಿರುವ ಏಳು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಛತ್ರಪತಿ ಸಂಭಾಜಿನಗರ ಸಿವಿಲ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಘುಘೆ ಹೇಳಿದ್ದಾರೆ. ಶಾಲೆಯಲ್ಲಿ 296 ವಿದ್ಯಾರ್ಥಿಗಳಿದ್ದಾರೆ. ಮಕ್ಕಳಿಗೆ ನೀಡಲಾಗಿದ್ದ ಬಿಸ್ಕತ್ತಿನ ಬಗ್ಗೆ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?