AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಸಮೃದ್ಧಿ ಎಕ್ಸ್​ಪ್ರೆಸ್​ ವೇನಲ್ಲಿ 2022ರಿಂದೀಚೆಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 88

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್​ಪ್ರೆಸ್​ ವೇನದಲ್ಲಿ 2022ರಿಂದೀಚೆಗೆ ಸಂಭವಿಸಿದ ಅಪಘಾತದಲ್ಲಿ 88 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

Maharashtra: ಸಮೃದ್ಧಿ ಎಕ್ಸ್​ಪ್ರೆಸ್​ ವೇನಲ್ಲಿ 2022ರಿಂದೀಚೆಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 88
ಎಕ್ಸ್​ಪ್ರೆಸ್​ ವೇImage Credit source: Hindustan Times
ನಯನಾ ರಾಜೀವ್
|

Updated on: Jul 02, 2023 | 12:52 PM

Share

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್​ಪ್ರೆಸ್​ ವೇನದಲ್ಲಿ 2022ರಿಂದೀಚೆಗೆ ಸಂಭವಿಸಿದ ಅಪಘಾತದಲ್ಲಿ 88 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಶನಿವಾರ ಖಾಸಗಿ ಬಸ್​ವೊಂದು ಡಿವೈಡರ್​ಗೆ ಡಿಕ್ಕಿ ಹೊಡೆದು 25 ಮಂದಿ ಸಜೀವ ದಹನವಾದ ಘಟನೆ ಬಳಿಕ ಈ ವರದಿ ಬಂದಿದೆ. ಚತುಷ್ಪಥ ರಸ್ತೆಯಲ್ಲಿ ಹೆಚ್ಚಿನ ಅಪಘಾತಗಳಿಗೆ ಹೈವೇ ಹಿಪ್ನೋಸಿಸ್ ಕಾರಣ ಎನ್ನಲಾಗುತ್ತಿದೆ. ಅದನ್ನು ಮನಸ್ಸಿನ ಡ್ರೀಮ್ ಲೈನ್ ಸ್ಥಿತಿ ಎಂದು ಕರೆಯುತ್ತಾರೆ.

ಒಂದೇ ರೀತಿಯ ರಸ್ತೆಯಲ್ಲಿ ಒಂದು ಹಂತದ ಡ್ರೈವಿಂಗ್‌ನ ಬಳಿಕ ಮೆದುಳಿನ ಒಂದು ಭಾಗ ಕಾರ್ಯಪ್ರವೃತ್ತವಾಗಿರುತ್ತದೆ. ಆಗ ಕೈ ಸ್ಟೇರಿಂಗ್‌ನಲ್ಲಿರುತ್ತೆ, ಕಣ್ಣು ರಸ್ತೆ ಮೇಲೆ ನೆಟ್ಟಿರುತ್ತೆ. ಆದರೆ ಮೆದುಳಿನ ಉಳಿದರ್ಧ ಭಾಗ ನಿದ್ರೆಗೆ ಜಾರಿರುತ್ತದೆ. ಜಗತ್ತಿನಲ್ಲಿ ಅತಿ ಹೆಚ್ಚು ಅಪಘಾತಗಳಿಗೆ ಈ ಮನಸ್ಥಿತಿಯೇ ಕಾರಣವಾಗಿರುತ್ತದೆ. ಒಂದೊಮ್ಮೆ ನಿಮಗೆ ನಿದ್ರೆ ಬರುತ್ತಿದೆ ಎಂದೆನಿಸಿದರೆ ಹೈವೇ ಡ್ರೈವಿಂಗ್ ಅವಾಯ್ಡ್​ ಮಾಡಲೇಬೇಕು.

ಮತ್ತಷ್ಟು ಓದಿ: Maharashtra Bus Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಡಿವೈಡರ್​ಗೆ ಡಿಕ್ಕಿಯಾದ ಬಸ್;​​ ಬೆಂಕಿ ತಗುಲಿ 25 ಪ್ರಯಾಣಿಕರು ಸಜೀವ ದಹನ

ಕಳೆದ ವರ್ಷ ಡಿಸೆಂಬರ್​ನಿಂದ ನಾಗ್ಪುರ-ಮುಂಬೈ ಎಕ್ಸ್​ಪ್ರೆಸ್​ ವೇಯನ್ನು ಭಾಗಶಃ ತೆರೆದಿದ್ದರಿಂದ ಒಟ್ಟು 39 ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಎಕ್ಸ್‌ಪ್ರೆಸ್‌ವೇಯಲ್ಲಿ 616 ಸಣ್ಣ ಮತ್ತು ದೊಡ್ಡ ಅಪಘಾತಗಳು ಸಂಭವಿಸಿವೆ, ಇದರಲ್ಲಿ 656 ಜನರಿಗೆ ಗಂಭೀರ ಮತ್ತು ಸಣ್ಣ ಪುಟ್ಟ ಗಾಯಗಳಾಗಿವೆ.

ಹೆಚ್ಚಿನ ಅಪಘಾತಗಳು ಅತಿಯಾದ ವೇಗ, ಚಾಲಕರು ಚಕ್ರದಲ್ಲಿ ನಿದ್ರಿಸುವುದು ಮತ್ತು ಟೈರ್ ಸ್ಫೋಟದಂತಹ ಕಾರಣಗಳಿಂದ ಸಂಭವಿಸಿದೆ. 2022 ರಲ್ಲಿ ಮಹಾರಾಷ್ಟ್ರದಾದ್ಯಂತ 15,224 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ಮಹಾರಾಷ್ಟ್ರದ ಬುಲ್ಧಾನದಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ(Accident) ನಡೆದಿದೆ. ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್, ಬುಲ್ಧಾನ ಜಿಲ್ಲೆಯ ಸಿಂಧಖೇಡ್‌ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ ಡಿವೈಡರ್​ಗೆ ಡಿಕ್ಕಿಯಾಗಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದ್ದು, 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ಇನ್ನು ಬಸ್​ ಅಪಘಾತವಾದಾಗ ಎಲ್ಲಾ ಪ್ರಯಾಣಿಕರು ಮಲಗಿಕೊಂಡಿದ್ದು, ಎನಾಗುತ್ತಿದೆ ಎನ್ನುವಷ್ಟರಲ್ಲೇ ಬೆಂಕಿ ಹೊತ್ತಿಕೊಂಡಿದೆ. ಸುಮಾರು 25 ಪ್ರಯಾಣಿಕರು ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಪೊಲೀಸ್-ಆಡಳಿತ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?