AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ, ಸುಟ್ಟು ಕರಕಲಾದ ಬಸ್‌

ಮಹಾರಾಷ್ಟ್ರದ ಪುಣೆಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ ತಗುಲಿ ಪ್ರಯಾಣಿಕರ ಪ್ರಾಣಪಾಯದಿಂದ ಪಾರಾಗಿದ್ದಾರೆ ಬೆಂಕಿಯು ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಒಂದು ಬಾರಿ ಭಯಭೀತಗೊಳಿಸಿದೆ.

Maharashtra: ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ, ಸುಟ್ಟು ಕರಕಲಾದ ಬಸ್‌
Maharashtra: A fire broke out in a moving bus, the bus was gutted
TV9 Web
| Edited By: |

Updated on:Oct 13, 2022 | 11:00 AM

Share

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ ತಗುಲಿ ಪ್ರಯಾಣಿಕರ ಪ್ರಾಣಪಾಯದಿಂದ ಪಾರಾಗಿದ್ದಾರೆ ಬೆಂಕಿಯು ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಒಂದು ಬಾರಿ ಭಯಭೀತಗೊಳಿಸಿದೆ. ಆದರೆ ಯಾವುದೇ ಸಾವು- ನೋವುಗಳ ಸಂಭವಿಸಿಲ್ಲ.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬುಧವಾರ ಬಸ್‌ಗೆ ಬೆಂಕಿ ಹೊತ್ತಿಕೊಂಡಿತ್ತು, ಬಸ್‌ನಲ್ಲಿದ್ದ 27 ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಅಂಬೇಗಾಂವ್ ತಹಸಿಲ್‌ನ ಭೀಮಾಶಂಕರ ಮಾರ್ಗದಲ್ಲಿ ಬೆಳಿಗ್ಗೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ಧರಿಸಲು ಇಲ್ಲ ಅವಕಾಶ

ಮುಂಬೈ ಸಮೀಪದ ಭಿವಂಡಿಯ ಗ್ರಾಮವೊಂದರಿಂದ 27 ಪ್ರಯಾಣಿಕರನ್ನು ಹೊತ್ತ ಖಾಸಗಿ ಬಸ್ ಪುಣೆ ಜಿಲ್ಲೆಯ ಭೀಮಾಶಂಕರಕ್ಕೆ ತೆರಳುತ್ತಿತ್ತು. ಭೀಮಾಶಂಕರ ಘೋಡೆಗಾಂವ್ ರಸ್ತೆಯ ಶಿಂಧೇವಾಡಿಗೆ ಬಸ್ ಬಂದಾಗ ವಾಹನದಿಂದ ಹೊಗೆ ಬರುತ್ತಿದೆ ಎಂದು ಬೇರೆ ವಾಹನದ ಚಾಲಕ ಬಸ್ ಚಾಲಕನಿಗೆ ತಿಳಿಸಿದ್ದಾನೆ ಎಂದು ಘೋರೆಗಾಂವ್ ಪೊಲೀಸ್ ಠಾಣೆಯ ಸಹಾಯಕ ನಿರೀಕ್ಷಕ ಜೀವನ್ ಮಾನೆ ತಿಳಿಸಿದ್ದಾರೆ. ಚಾಲಕ ತಕ್ಷಣವೇ ಬಸ್ ನಿಲ್ಲಿಸಿದ ಮತ್ತು ಎಲ್ಲಾ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಯಾಣಿಕರೊಬ್ಬರು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದರು. ಎಲ್ಲರೂ ಸೇರಿ ಬೆಂಕಿ ನಂದಿಸಲು ಪ್ರಯತ್ನಿಸಲಾಯಿತು ಆದರೆ ವಾಹನವು ಬೆಂಕಿಗೆ ಆಹುತಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಸಾಮಾಗ್ರಿಗಳೂ ಬೆಂಕಿಗೆ ಆಹುತಿಯಾಗಿವೆ. ಆದರೆ, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಹೇಳಿದರು.

Published On - 11:00 am, Thu, 13 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ