ಮಹಾರಾಷ್ಟ್ರದಲ್ಲಿ ಮಿನಿ ಬಸ್ ಕಂಟೈನರ್​ಗೆ ಡಿಕ್ಕಿ ಹೊಡೆದು 12 ಮಂದಿ ಸಾವು, 23 ಜನರಿಗೆ ಗಾಯ

|

Updated on: Oct 15, 2023 | 9:17 AM

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಮುಂಜಾನೆ ವೇಗವಾಗಿ ಬಂದ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ. ಖಾಸಗಿ ಬಸ್‌ನಲ್ಲಿ 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮಿನಿ ಬಸ್ ಕಂಟೈನರ್​ಗೆ ಡಿಕ್ಕಿ ಹೊಡೆದು 12 ಮಂದಿ ಸಾವು, 23 ಜನರಿಗೆ ಗಾಯ
ಪ್ರಾತಿನಿಧಿಕ ಚಿತ್ರ
Follow us on

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಮುಂಜಾನೆ ವೇಗವಾಗಿ ಬಂದ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ. ಖಾಸಗಿ ಬಸ್‌ನಲ್ಲಿ 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ ಎಕ್ಸ್‌ಪ್ರೆಸ್‌ವೇಯ ವೈಜಾಪುರ ಪ್ರದೇಶದಲ್ಲಿ ಮಧ್ಯರಾತ್ರಿ 12.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು.

ಬಸ್ ಚಾಲಕ ಚಕ್ರಗಳ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾನೆ. ಇದರಿಂದ ಕಂಟೇನರ್‌ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹನ್ನೆರಡು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಐವರು ಪುರುಷರು, ಆರು ಮಹಿಳೆಯರು ಮತ್ತು ಓರ್ವ ಅಪ್ರಾಪ್ತ ಬಾಲಕಿ ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ವಿಜಯನಗರ: 2 ಲಾರಿ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಒಂದೇ ಕುಟುಂಬದ 7 ಜನ ಸ್ಥಳದಲ್ಲೇ ಸಾವು

23 ಮಂದಿ ಗಾಯಗೊಂಡಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:17 am, Sun, 15 October 23