AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Accident: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ, ತಕ್ಷಣವೇ ಹೊತ್ತಿಕೊಂಡ ಬೆಂಕಿ, ನಾಲ್ವರು ಸಜೀವ ದಹನ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ.

Maharashtra Accident: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ, ತಕ್ಷಣವೇ ಹೊತ್ತಿಕೊಂಡ ಬೆಂಕಿ, ನಾಲ್ವರು ಸಜೀವ ದಹನ
ಟ್ಯಾಂಕರ್Image Credit source: Lokmat Times
ನಯನಾ ರಾಜೀವ್
|

Updated on: Jun 13, 2023 | 2:29 PM

Share

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಇದರಿಂದಾಗಿ ಸೇತುವೆಯ ಕೆಳಗೂ ಅಪಘಾತಗಳು ಸಂಭವಿಸಿವೆ ಎಂಬ ಮಾಹಿತಿ ಕೇಳಿಬರುತ್ತಿದೆ. ಈ ಅಗ್ನಿ ಅವಘಡದಿಂದಾಗಿ ರಕ್ಷಣಾ ಕಾರ್ಯಾಚರಣೆಯು ಯುದ್ಧೋಪಾದಿಯಲ್ಲಿ ನಡೆಯುತ್ತಿದ್ದು, ಸದ್ಯ ಲೋನಾವಾಲಾ ನಗರದಿಂದ ವಾಹನ ಸಂಚಾರವನ್ನು ಬದಲಿಸಲಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಬಹುದು, ಆದ್ದರಿಂದ ರಕ್ಷಣಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ.

ಸಿಕ್ಕಿರುವ ಮಾಹಿತಿಯ ಪ್ರಕಾರ ಪುಣೆ-ಮುಂಬೈ ಹೆದ್ದಾರಿಯ ಖಂಡಾಲಾ ಘಾಟ್‌ನಲ್ಲಿರುವ ಕುನೆ ಸೇತುವೆಯ ಮೇಲೆ ಭೀಕರ ಅಪಘಾತ ಸಂಭವಿಸಿದೆ. ಕೆಮಿಕಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ಗೆ ಬೆಂಕಿ ತಗುಲಿ ಭಾರಿ ಅವಘಡ ಸಂಭವಿಸಿದೆ. ಈ ಅವಘಡದಿಂದ ಟ್ಯಾಂಕರ್‌ನಲ್ಲಿದ್ದ ಕೆಮಿಕಲ್‌ ರಸ್ತೆಗೆ ಹರಿದು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಮತ್ತಷ್ಟು ಓದಿ: ಧಾರವಾಡ: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವು

ರಾಸಾಯನಿಕ ಸೋರಿಕೆಯಿಂದ ಬೈಕ್ ಸವಾರ ರಸ್ತೆಗೆ ಬಿದ್ದಿರುವುದು ಅತ್ಯಂತ ಆಘಾತಕಾರಿ ಸಂಗತಿ. ಈ ವೇಳೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ 12 ವರ್ಷದ ಬಾಲಕನೋರ್ವ ಬಿದ್ದು ಸಾವನ್ನಪ್ಪಿದ್ದು, ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಟ್ಯಾಂಕರ್ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಅಪಘಾತದಲ್ಲಿ ಇದುವರೆಗೆ ಒಟ್ಟು 4 ಜನ ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ