AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Accident: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ, ತಕ್ಷಣವೇ ಹೊತ್ತಿಕೊಂಡ ಬೆಂಕಿ, ನಾಲ್ವರು ಸಜೀವ ದಹನ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ.

Maharashtra Accident: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ, ತಕ್ಷಣವೇ ಹೊತ್ತಿಕೊಂಡ ಬೆಂಕಿ, ನಾಲ್ವರು ಸಜೀವ ದಹನ
ಟ್ಯಾಂಕರ್Image Credit source: Lokmat Times
ನಯನಾ ರಾಜೀವ್
|

Updated on: Jun 13, 2023 | 2:29 PM

Share

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಇದರಿಂದಾಗಿ ಸೇತುವೆಯ ಕೆಳಗೂ ಅಪಘಾತಗಳು ಸಂಭವಿಸಿವೆ ಎಂಬ ಮಾಹಿತಿ ಕೇಳಿಬರುತ್ತಿದೆ. ಈ ಅಗ್ನಿ ಅವಘಡದಿಂದಾಗಿ ರಕ್ಷಣಾ ಕಾರ್ಯಾಚರಣೆಯು ಯುದ್ಧೋಪಾದಿಯಲ್ಲಿ ನಡೆಯುತ್ತಿದ್ದು, ಸದ್ಯ ಲೋನಾವಾಲಾ ನಗರದಿಂದ ವಾಹನ ಸಂಚಾರವನ್ನು ಬದಲಿಸಲಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಬಹುದು, ಆದ್ದರಿಂದ ರಕ್ಷಣಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ.

ಸಿಕ್ಕಿರುವ ಮಾಹಿತಿಯ ಪ್ರಕಾರ ಪುಣೆ-ಮುಂಬೈ ಹೆದ್ದಾರಿಯ ಖಂಡಾಲಾ ಘಾಟ್‌ನಲ್ಲಿರುವ ಕುನೆ ಸೇತುವೆಯ ಮೇಲೆ ಭೀಕರ ಅಪಘಾತ ಸಂಭವಿಸಿದೆ. ಕೆಮಿಕಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ಗೆ ಬೆಂಕಿ ತಗುಲಿ ಭಾರಿ ಅವಘಡ ಸಂಭವಿಸಿದೆ. ಈ ಅವಘಡದಿಂದ ಟ್ಯಾಂಕರ್‌ನಲ್ಲಿದ್ದ ಕೆಮಿಕಲ್‌ ರಸ್ತೆಗೆ ಹರಿದು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಮತ್ತಷ್ಟು ಓದಿ: ಧಾರವಾಡ: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವು

ರಾಸಾಯನಿಕ ಸೋರಿಕೆಯಿಂದ ಬೈಕ್ ಸವಾರ ರಸ್ತೆಗೆ ಬಿದ್ದಿರುವುದು ಅತ್ಯಂತ ಆಘಾತಕಾರಿ ಸಂಗತಿ. ಈ ವೇಳೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ 12 ವರ್ಷದ ಬಾಲಕನೋರ್ವ ಬಿದ್ದು ಸಾವನ್ನಪ್ಪಿದ್ದು, ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಟ್ಯಾಂಕರ್ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಅಪಘಾತದಲ್ಲಿ ಇದುವರೆಗೆ ಒಟ್ಟು 4 ಜನ ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ