AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Accident: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ, ತಕ್ಷಣವೇ ಹೊತ್ತಿಕೊಂಡ ಬೆಂಕಿ, ನಾಲ್ವರು ಸಜೀವ ದಹನ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ.

Maharashtra Accident: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ, ತಕ್ಷಣವೇ ಹೊತ್ತಿಕೊಂಡ ಬೆಂಕಿ, ನಾಲ್ವರು ಸಜೀವ ದಹನ
ಟ್ಯಾಂಕರ್Image Credit source: Lokmat Times
ನಯನಾ ರಾಜೀವ್
|

Updated on: Jun 13, 2023 | 2:29 PM

Share

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ಕ್ಷಣಮಾತ್ರದಲ್ಲೇ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಇದರಿಂದಾಗಿ ಸೇತುವೆಯ ಕೆಳಗೂ ಅಪಘಾತಗಳು ಸಂಭವಿಸಿವೆ ಎಂಬ ಮಾಹಿತಿ ಕೇಳಿಬರುತ್ತಿದೆ. ಈ ಅಗ್ನಿ ಅವಘಡದಿಂದಾಗಿ ರಕ್ಷಣಾ ಕಾರ್ಯಾಚರಣೆಯು ಯುದ್ಧೋಪಾದಿಯಲ್ಲಿ ನಡೆಯುತ್ತಿದ್ದು, ಸದ್ಯ ಲೋನಾವಾಲಾ ನಗರದಿಂದ ವಾಹನ ಸಂಚಾರವನ್ನು ಬದಲಿಸಲಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಬಹುದು, ಆದ್ದರಿಂದ ರಕ್ಷಣಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ.

ಸಿಕ್ಕಿರುವ ಮಾಹಿತಿಯ ಪ್ರಕಾರ ಪುಣೆ-ಮುಂಬೈ ಹೆದ್ದಾರಿಯ ಖಂಡಾಲಾ ಘಾಟ್‌ನಲ್ಲಿರುವ ಕುನೆ ಸೇತುವೆಯ ಮೇಲೆ ಭೀಕರ ಅಪಘಾತ ಸಂಭವಿಸಿದೆ. ಕೆಮಿಕಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್ ಗೆ ಬೆಂಕಿ ತಗುಲಿ ಭಾರಿ ಅವಘಡ ಸಂಭವಿಸಿದೆ. ಈ ಅವಘಡದಿಂದ ಟ್ಯಾಂಕರ್‌ನಲ್ಲಿದ್ದ ಕೆಮಿಕಲ್‌ ರಸ್ತೆಗೆ ಹರಿದು ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಮತ್ತಷ್ಟು ಓದಿ: ಧಾರವಾಡ: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಟ್ಯಾಂಕರ್‌ನಲ್ಲಿದ್ದ ಓರ್ವ ಸಾವು

ರಾಸಾಯನಿಕ ಸೋರಿಕೆಯಿಂದ ಬೈಕ್ ಸವಾರ ರಸ್ತೆಗೆ ಬಿದ್ದಿರುವುದು ಅತ್ಯಂತ ಆಘಾತಕಾರಿ ಸಂಗತಿ. ಈ ವೇಳೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ 12 ವರ್ಷದ ಬಾಲಕನೋರ್ವ ಬಿದ್ದು ಸಾವನ್ನಪ್ಪಿದ್ದು, ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಟ್ಯಾಂಕರ್ ಚಾಲಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿವೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಅಪಘಾತದಲ್ಲಿ ಇದುವರೆಗೆ ಒಟ್ಟು 4 ಜನ ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ