AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ನಾಸಿಕ್​ನ ಹೆದ್ದಾರಿಯಲ್ಲಿ ಕಾರು ಕಂಟೇನರ್​ಗೆ ಡಿಕ್ಕಿ, 5 ಮಂದಿ ಸಾವು

ನಾಸಿಕ್‌ನ ಮನ್ಮಾಡ್-ಯೇವಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಭೀಕರ ಅಪಘಾತ(Accident) ಸಂಭವಿಸಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಕಾರು ಮತ್ತು ಕಂಟೈನರ್ ಮುಖಾಮುಖಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಕೈ ರೈಲ್ವೆ ಮೇಲ್ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ರೋಹಿತ್ ಧನವತೆ, ಶ್ರೇಯಸ್ ಧನವತೆ, ಲಲಿತ್ ಸೋನಾವಾನೆ, ಗಣೇಶ್ ಸೋನಾವಾನೆ ಮತ್ತು ಪ್ರತೀಕ್ ನಾಯಕ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ನಾಸಿಕ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರ: ನಾಸಿಕ್​ನ ಹೆದ್ದಾರಿಯಲ್ಲಿ ಕಾರು ಕಂಟೇನರ್​ಗೆ ಡಿಕ್ಕಿ, 5 ಮಂದಿ ಸಾವು
ಅಪಘಾತImage Credit source: ABP Live
ನಯನಾ ರಾಜೀವ್
|

Updated on: Nov 27, 2023 | 9:11 AM

Share

ನಾಸಿಕ್‌ನ ಮನ್ಮಾಡ್-ಯೇವಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಭೀಕರ ಅಪಘಾತ(Accident) ಸಂಭವಿಸಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಕಾರು ಮತ್ತು ಕಂಟೈನರ್ ಮುಖಾಮುಖಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಕೈ ರೈಲ್ವೆ ಮೇಲ್ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ರೋಹಿತ್ ಧನವತೆ, ಶ್ರೇಯಸ್ ಧನವತೆ, ಲಲಿತ್ ಸೋನಾವಾನೆ, ಗಣೇಶ್ ಸೋನಾವಾನೆ ಮತ್ತು ಪ್ರತೀಕ್ ನಾಯಕ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ನಾಸಿಕ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಐವರು ಯುವಕರು ಮನ್ಮಾಡ್ ಸಮೀಪದ ಕುಂದಲ್‌ಗಾಂವ್‌ನ ಮಹಸೋಬಾ ದೇವಸ್ತಾನದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಊರಿಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ತೀವ್ರವಾಗಿ ಜಖಂಗೊಂಡಿದೆ. ಮೃತದೇಹಗಳನ್ನು ಮನ್ಮಾಡ್‌ನ ಉಪಜಿಲಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಕಾರು ಮಹಾರಾಷ್ಟ್ರದ ನೋಂದಣಿ ಫಲಕವನ್ನು ಹೊಂದಿತ್ತು.

ಸಂಜೆ 4 ರಿಂದ 5 ರ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಏನು ಕಾರಣ ಎನ್ನುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ರಸ್ತೆ ಮಧ್ಯದಲ್ಲಿಯೇ ಅಪಘಾತ ಸಂಭವಿಸಿದ್ದು, ಸಂಚಾರಕ್ಕೆ ಅಡ್ಡಿ ಉಂಟಾಯಿತು. ಧಾರಾಕಾರ ಮಳೆ ಹಾಗೂ ಕತ್ತಲೆಯಿಂದಾಗಿ ಪರಿಹಾರ ಕಾರ್ಯ ಕೈಗೊಳ್ಳಲು ಹಾಗೂ ವಾಹನ ತೆಗೆಯಲು ತೊಂದರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೇರಳ: ಎರಡು ಕೆಎಸ್​ಆರ್​ಟಿಸಿ ಬಸ್​ಗಳ​ ನಡುವೆ ಅಪಘಾತ, 30ಮಂದಿಗೆ ಗಾಯ

ಈ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಅಪಾರ ಜನ ಜಮಾಯಿಸಿದ್ದರು. ಜುಲೈನಲ್ಲಿ ಮಹಾರಾಷ್ಟ್ರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ 25 ಜನರು ಸಾವನ್ನಪ್ಪಿದರು ಮತ್ತು 8 ಮಂದಿ ಗಾಯಗೊಂಡಿದ್ದರು. ಬುಲ್ಧಾನಾದಲ್ಲಿ ಬಸ್‌ನ ಟೈರ್ ಒಡೆದು ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ.

ಬಸ್ ಯವತ್ಮಾಲ್ ನಿಂದ ಪುಣೆಗೆ ಹೋಗುತ್ತಿತ್ತು. ರಾತ್ರಿ 2 ಗಂಟೆಗೆ ಅಪಘಾತ ಸಂಭವಿಸಿತ್ತು. ರಾಜ್ಯದ ಮಡ್ಕಿ ಗ್ರಾಮದಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಕಾರು 200 ಅಡಿ ಆಳದ ಕಂದಕಕ್ಕೆ ಬಿದ್ದು ತೆಲಂಗಾಣದ 4 ಜನರು ಸಾವನ್ನಪ್ಪಿದ್ದರು.

ಅಧ್ಯಯನದ ಪ್ರಕಾರ ಮಹಾರಾಷ್ಟ್ರದಲ್ಲಿ ಕಳೆದ 3 ವರ್ಷಗಳಲ್ಲಿ ರಸ್ತೆ ಅಪಘಾತಗಳಿಂದ ಸಾವನ್ನಪ್ಪಿದವರ ಸಂಖ್ಯೆ 2,000 ಕ್ಕಿಂತ ಹೆಚ್ಚಾಗಿದೆ. 2022 ರಲ್ಲಿ ರಾಜ್ಯದಲ್ಲಿ ಒಟ್ಟು 14,883 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. ಇದು 2019 ರಲ್ಲಿ 12,788 ಸಾವುಗಳಿಗೆ ಹೋಲಿಸಿದರೆ 2,095 ಏರಿಕೆಯಾಗಿದೆ. 2022 ರಲ್ಲಿ 33,069 ರಸ್ತೆ ಅಪಘಾತಗಳು 2019 ರಲ್ಲಿ 32,925 ಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಸಂಭವಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?