Maharashtra: ಹುಲಿ ದಾಳಿಗೆ ಓರ್ವ ಸಾವು, ಕೋಪಗೊಂಡು ಅರಣ್ಯಾಧಿಕಾರಿ, ಭದ್ರತಾ ಸಿಬ್ಬಂದಿಯನ್ನು ಥಳಿಸಿದ ಜನ

ತಪ್ಪು ಮಾಡಿದ್ದು ಯಾರೋ, ಶಿಕ್ಷೆ ಅನುಭವಿಸಿದ್ದು ಮತ್ಯಾರೋ, ಹೌದು, ಹುಲಿಯೊಂದು ದಾಳಿ ನಡೆಸಿ ಓರ್ವ ಮೃತಪಟ್ಟಿದ್ದ ಆ ಕೋಪದಲ್ಲಿ ಜನರ ಗುಂಪೊಂದು ಅರಣ್ಯಾಧಿಕಾರಿ ಹಾಗೂ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಥಳಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

Maharashtra: ಹುಲಿ ದಾಳಿಗೆ ಓರ್ವ ಸಾವು, ಕೋಪಗೊಂಡು ಅರಣ್ಯಾಧಿಕಾರಿ, ಭದ್ರತಾ ಸಿಬ್ಬಂದಿಯನ್ನು ಥಳಿಸಿದ ಜನ
ಹುಲಿ(ಸಾಂದರ್ಭಿಕ ಚಿತ್ರ)

Updated on: Jun 29, 2023 | 11:28 AM

ತಪ್ಪು ಮಾಡಿದ್ದು ಯಾರೋ, ಶಿಕ್ಷೆ ಅನುಭವಿಸಿದ್ದು ಮತ್ಯಾರೋ, ಹೌದು, ಹುಲಿಯೊಂದು ದಾಳಿ ನಡೆಸಿ ಓರ್ವ ಮೃತಪಟ್ಟಿದ್ದ ಆ ಕೋಪದಲ್ಲಿ ಜನರ ಗುಂಪೊಂದು ಅರಣ್ಯಾಧಿಕಾರಿ ಹಾಗೂ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಥಳಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಹುಲಿಯನ್ನು ಹಿಡಿಯಲು ಸಿಬ್ಬಂದಿ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಗೆ ತಲುಪಿದ್ದರು ಈ ಸಮಯದಲ್ಲಿ ಅಧಿಕಾರಿಗಳ ಮೇಲೆ ಜನರ ಗುಂಪು ಹಲ್ಲೆ ನಡೆಸಿದೆ.

ದಾಳಿಯಲ್ಲಿ ಗಾಯಗೊಂಡಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮತ್ತು ಇಬ್ಬರು ಅರಣ್ಯ ಸಿಬ್ಬಂದಿ ನಾಗ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಭಂಡಾರದ ಪಯೋನಿ ತಹಸಿಲ್‌ನ ಖಟ್ಖೇಡಾ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಹುಲಿಯು ಈಶ್ವರ್ ಮೋಟ್‌ಘರೆ ಎಂಬ ವ್ಯಕ್ತಿಯನ್ನು ಕೊಂದಿದೆ. ಅಧಿಕಾರಿಗಳು ಮತ್ತು ಇತರ ಸಿಬ್ಬಂದಿ ಹುಲಿಯನ್ನು ಸೆರೆಹಿಡಿಯಲು ಅಲ್ಲಿಗೆ ತಲುಪಿದಾಗ, ಕೋಪಗೊಂಡ ಸ್ಥಳೀಯರು ಹಲ್ಲೆ ನಡೆಸಿದ್ದಾರೆ.

ಮತ್ತಷ್ಟು ಓದಿ: Chikkamagaluru News: ಅಸ್ಸಾಂ ಮೂಲದ ಮಹಿಳೆ ಮೇಲೆ‌ ಹುಲಿ ದಾಳಿ: ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ನಂತರ ಮಹಾರಾಷ್ಟ್ರ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಶಾಂತಗೊಳಿಸಿ ನಾಗ್ಪುರದ ಗೋರೆವಾಡ ರಕ್ಷಣಾ ಕೇಂದ್ರಕ್ಕೆ ಕಳುಹಿಸಿದ್ದಾರೆ. ಮೃತರ ಕುಟುಂಬಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) 30 ಸಾವಿರ ನಗದು ಮತ್ತು 9.70 ಲಕ್ಷ ಚೆಕ್ ನೀಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us