ಮಹಾರಾಷ್ಟ್ರ, ಗುಜರಾತ್​ನಲ್ಲಿ ಸಾವಿನ ಪ್ರಮಾಣ ಅತ್ಯಧಿಕ

ನವದೆಹಲಿ: ಪೆಡಂಭೂತದಂತೆ ಕಾಡುತ್ತಿರುವ ಕೊರೊನಾ ವೈರಸ್ ದಿನೇ ದಿನೆ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಬಲಿ ಸಾವಿರದ ಗಡಿ ದಾಟಿದೆ. ಅದರಲ್ಲೂ ಮಹಾರಾಷ್ಟ್ರ, ಗುಜರಾತ್​ನಲ್ಲಿ ಕೊರೊನಾ ಸಾವಿನ ಪ್ರಮಾಣ ಹೆಚ್ಚಿದೆ. ದೇಶದ ಶೇ60ರಷ್ಟು ಕೊರೊನಾ ಸೊಂಕಿತರ ಸಾವು ಈ ಎರಡು ರಾಜ್ಯಗಳಲ್ಲಿ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 50 ಮಂದಿ ಮೃತಪಟ್ಟಿದ್ದಾರೆ. ಅಹಮದಾಬಾದ್​ನಲ್ಲಿ ನಿನ್ನೆ 19 ಮಂದಿ ಮೃತಪಟ್ಟಿದ್ದಾರೆ. ಮುಂಬೈ ನಗರದಲ್ಲಿ 24 ಗಂಟೆಗಳಲ್ಲಿ 25 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು […]

ಮಹಾರಾಷ್ಟ್ರ, ಗುಜರಾತ್​ನಲ್ಲಿ ಸಾವಿನ ಪ್ರಮಾಣ ಅತ್ಯಧಿಕ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​

Updated on: Apr 29, 2020 | 11:15 AM

ನವದೆಹಲಿ: ಪೆಡಂಭೂತದಂತೆ ಕಾಡುತ್ತಿರುವ ಕೊರೊನಾ ವೈರಸ್ ದಿನೇ ದಿನೆ ತನ್ನ ಅಟ್ಟಹಾಸವನ್ನು ಮೆರೆಯುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಬಲಿ ಸಾವಿರದ ಗಡಿ ದಾಟಿದೆ. ಅದರಲ್ಲೂ ಮಹಾರಾಷ್ಟ್ರ, ಗುಜರಾತ್​ನಲ್ಲಿ ಕೊರೊನಾ ಸಾವಿನ ಪ್ರಮಾಣ ಹೆಚ್ಚಿದೆ. ದೇಶದ ಶೇ60ರಷ್ಟು ಕೊರೊನಾ ಸೊಂಕಿತರ ಸಾವು ಈ ಎರಡು ರಾಜ್ಯಗಳಲ್ಲಿ ದಾಖಲಾಗಿದೆ.

ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 50 ಮಂದಿ ಮೃತಪಟ್ಟಿದ್ದಾರೆ. ಅಹಮದಾಬಾದ್​ನಲ್ಲಿ ನಿನ್ನೆ 19 ಮಂದಿ ಮೃತಪಟ್ಟಿದ್ದಾರೆ. ಮುಂಬೈ ನಗರದಲ್ಲಿ 24 ಗಂಟೆಗಳಲ್ಲಿ 25 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು 1,007 ಜನರು ಮೃತಪಟ್ಟಿದ್ದಾರೆ. ಅದರಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ 583 ಮಂದಿ ಬಲಿಯಾಗಿದ್ದಾರೆ.

ಮಾರ್ಕೆಟ್​ಗೆ ವಕ್ಕರಿಸಿದ ಕೊರೊನಾ:
ದೆಹಲಿ ಆಜಾದ್ ಪುರ್ ಸಬ್ಜಿ ಮಾರ್ಕೆಟ್​ಗೆ ಕೊರೊನಾ ವಕ್ಕರಿಸಿದೆ. ಹೋಲ್ ಸೇಲ್ ತರಕಾರಿ ಮಾರ್ಕೆಟ್​ನಲ್ಲಿನ 11 ವ್ಯಾಪಾರಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹಾಗೂ ಮುಂಬೈ ಎಪಿಎಂಸಿ ಮಾರುಕಟ್ಟೆಯಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ ಸೋಂಕು ತಗುಲಿದ್ದು, ಇದುವರೆಗೆ ಎಪಿಎಂಸಿಯಲ್ಲಿ 10 ಮಂದಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us