AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಚುನಾವಣೆ: 40 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ

ಸೀಟು ಹಂಚಿಕೆ ಕುರಿತು ಮಹಾಯುತಿ ಮಿತ್ರಪಕ್ಷಗಳ ನಡುವೆ ನಡೆಯುತ್ತಿರುವ ಜಗಳದ ನಡುವೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದ ವಿರುದ್ಧವಾಗಿದ್ದ 37 ವಿಧಾನಸಭಾ ಕ್ಷೇತ್ರಗಳಲ್ಲಿ 40 ನಾಯಕರು ಮತ್ತು ಪದಾಧಿಕಾರಿಗಳನ್ನು ಉಚ್ಚಾಟಿಸಿದೆ. ಭಾರತೀಯ ಜನತಾ ಪಕ್ಷದಲ್ಲಿ (ಬಿಜೆಪಿ) ಪದಾಧಿಕಾರಿ ಹುದ್ದೆಯನ್ನು ಹೊಂದಿದ್ದರೂ, ನೀವು ಪಕ್ಷದ ಶಿಸ್ತು ಉಲ್ಲಂಘಿಸುವ ಕೆಲಸ ಮಾಡಿದ್ದೀರಿ. ಇಂತಹ ಕ್ರಮಗಳು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಮತ್ತು ನಿಮ್ಮನ್ನು ತಕ್ಷಣ ಪಕ್ಷದಿಂದ ಹೊರಹಾಕಲಾಗುತ್ತಿದೆ ಎಂದು ಬಿಜೆಪಿ ತಿಳಿಸಿದೆ.

ಮಹಾರಾಷ್ಟ್ರ ಚುನಾವಣೆ: 40 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಬಿಜೆಪಿImage Credit source: Getty Images
ನಯನಾ ರಾಜೀವ್
|

Updated on: Nov 06, 2024 | 9:59 AM

Share

ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಮಹತ್ವದ ಕ್ರಮ ಕೈಗೊಂಡಿದೆ. ಪಕ್ಷವು 37 ವಿವಿಧ ವಿಧಾನಸಭಾ ಕ್ಷೇತ್ರಗಳಿಂದ 40 ಕಾರ್ಯಕರ್ತರು, ನಾಯಕರನ್ನು ಉಚ್ಚಾಟಿಸಿದೆ. ಈ ಹಿಂದೆ ಉದ್ಧವ್ ಠಾಕ್ರೆ ಕೂಡ ಶಿವಸೇನೆ-ಯುಬಿಟಿ ಬಂಡಾಯವೆದ್ದವರ ವಿರುದ್ಧ ಕ್ರಮ ಕೈಗೊಂಡಿದ್ದರು. ಪಕ್ಷ ವಿರೋಧಿ ಕ್ರಮದಲ್ಲಿ 5 ನಾಯಕರನ್ನು ಉದ್ಧವ್ ಠಾಕ್ರೆ ಉಚ್ಚಾಟಿಸಿದ್ದರು. ಅವರಲ್ಲಿ ಮಾಜಿ ಭಿವಂಡಿ ಶಾಸಕರಾದ ರೂಪೇಶ್ ಮ್ಹಾತ್ರೆ, ವಿಶ್ವಾಸ್ ನಾಂದೇಕರ್, ಚಂದ್ರಕಾಂತ್ ಘುಗುಲ್, ಸಂಜಯ್ ಅವರಿ ಮತ್ತು ಪ್ರಸಾದ್ ಠಾಕ್ರೆ ಇದ್ದರು.

ಬಂಡಾಯಗಾರರ ವಿರುದ್ಧ ಎಲ್ಲ ಪಕ್ಷಗಳೂ ಕಠಿಣ ನಿಲುವು ತಳೆಯುತ್ತಿವೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ದಿನಗಳು ಸಮೀಪಿಸುತ್ತಿವೆ. ಅದೇ ರೀತಿ ನಾಯಕರ ಬಂಡಾಯದ ದನಿಯೂ ಎದ್ದಿದೆ. ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾಮೈತ್ರಿಕೂಟದ ನಾಯಕರಿಗೆ ಬಂಡಾಯವೆದ್ದವರು ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಸೂಚನೆ ನೀಡಿದ್ದರು.

ಮಹಾರಾಷ್ಟ್ರದಲ್ಲಿ ಚುನಾವಣೆ ಯಾವಾಗ? ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 20 ರಂದು ಮತದಾನ ನಡೆಯುತ್ತಿದೆ. ಈ ಸೀಟುಗಳ ಫಲಿತಾಂಶ ನವೆಂಬರ್ 23 ರಂದು ಪ್ರಕಟವಾಗಲಿದೆ. ಈ ಬಾರಿ ಬಿಜೆಪಿ ಗರಿಷ್ಠ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎರಡನೆಯದು ಕಾಂಗ್ರೆಸ್ ನಂತರ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ನಾಲ್ಕನೇ ಸ್ಥಾನದಲ್ಲಿದ್ದರೆ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಎನ್‌ಸಿಪಿ ಆರನೇ ಸ್ಥಾನದಲ್ಲಿದೆ.

ಮತ್ತಷ್ಟು ಓದಿ: ‘ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ’; ಮಹಾರಾಷ್ಟ್ರ ಚುನಾವಣೆಗೂ ಮುನ್ನ ಶರದ್ ಪವಾರ್ ಮಹತ್ವದ ಘೋಷಣೆ

ಮಹಾರಾಷ್ಟ್ರದಲ್ಲಿ ಎಷ್ಟು ವಿಧಾನಸಭಾ ಕ್ಷೇತ್ರಗಳಿವೆ? ಮಹಾರಾಷ್ಟ್ರದಲ್ಲಿ ಒಟ್ಟು 288 ವಿಧಾನಸಭಾ ಸ್ಥಾನಗಳಿದ್ದು, ಬಹುಮತಕ್ಕೆ 145 ಸ್ಥಾನಗಳ ಅಗತ್ಯವಿದೆ. 2019 ರ ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56, ಎನ್‌ಸಿಪಿ 54, ಕಾಂಗ್ರೆಸ್ 44 ಮತ್ತು ಇತರರು 29 ಸ್ಥಾನಗಳನ್ನು ಗೆದ್ದಿದ್ದಾರೆ. ಮಹಾರಾಷ್ಟ್ರದಲ್ಲಿ 9 ಕೋಟಿ 63 ಲಕ್ಷ ಮತದಾರರು ಇರಲಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದರು. ಇಲ್ಲಿ 5 ಕೋಟಿ ಪುರುಷ ಮತದಾರರಿದ್ದಾರೆ. ಇಲ್ಲಿನ ಒಂದು ಲಕ್ಷ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಮಹಾರಾಷ್ಟ್ರದಲ್ಲಿ ಪ್ರತಿ ಬೂತ್‌ನಲ್ಲಿ ಸುಮಾರು 960 ಮತದಾರರಿದ್ದಾರೆ. ಮುಂಬೈನಲ್ಲಿ ಮತದಾನ ಕೇಂದ್ರಗಳನ್ನು ಹೆಚ್ಚಿಸಲಾಗಿದೆ.

ಕೊಲ್ಹಾಪುರ ಉತ್ತರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಜಂಟಿಯಾಗಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?