AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Assembly Election: ಮಹಾರಾಷ್ಟ್ರದಲ್ಲಿ 28 ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿದ ಕಾಂಗ್ರೆಸ್​

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ಬಿಜೆಪಿಯಂತೆಯೇ ಕಾಂಗ್ರೆಸ್​ ಕೂಡ ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಾಗಿ ಮಹಾರಾಷ್ಟ್ರ ಕಾಂಗ್ರೆಸ್ 28 ಬಂಡಾಯ ಅಭ್ಯರ್ಥಿಗಳನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಿದೆ.

Maharashtra Assembly Election: ಮಹಾರಾಷ್ಟ್ರದಲ್ಲಿ 28 ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿದ ಕಾಂಗ್ರೆಸ್​
ಕಾಂಗ್ರೆಸ್​Image Credit source: The daily Guardian
ನಯನಾ ರಾಜೀವ್
|

Updated on: Nov 11, 2024 | 8:08 AM

Share

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ಬಿಜೆಪಿಯಂತೆಯೇ ಕಾಂಗ್ರೆಸ್​ ಕೂಡ ಬಂಡಾಯ ಅಭ್ಯರ್ಥಿಗಳನ್ನು ಅಮಾನತುಗೊಳಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಾಗಿ ಮಹಾರಾಷ್ಟ್ರ ಕಾಂಗ್ರೆಸ್ 28 ಬಂಡಾಯ ಅಭ್ಯರ್ಥಿಗಳನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಿದೆ.

ನವೆಂಬರ್ 20 ರಂದು ನಡೆಯಲಿರುವ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿಯ ಅಧಿಕೃತ ಅಭ್ಯರ್ಥಿಗಳ ವಿರುದ್ಧ 22 ವಿಧಾನಸಭಾ ಕ್ಷೇತ್ರಗಳ ಈ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಾಜಿ ಸಚಿವ ರಾಜೇಂದ್ರ ಮುಲಾಕ್ (ರಾಮ್‌ಟೆಕ್ ಕ್ಷೇತ್ರ), ಯಜ್ಞವಲ್ಕ್ ಜಿಚ್ಕರ್ (ಕಟೋಲ್), ಕಮಲ್ ವ್ಯಾವಾರೆ (ಕಸ್ಬಾ), ಮನೋಜ್ ಶಿಂಧೆ (ಕೊಪ್ರಿ ಪಚ್ಪಖಾಡಿ), ಮತ್ತು ಆಬಾ ಬಾಗುಲ್ (ಪಾರ್ವತಿ) ಸೇರಿದಂತೆ ಪ್ರಮುಖ ನಾಯಕರು ಕ್ರಮ ಎದುರಿಸಿದ್ದಾರೆ.

ಎಐಸಿಸಿ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರ ನಿರ್ದೇಶನದ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಹೇಳಿಕೆ ತಿಳಿಸಿದೆ. ಎಐಸಿಸಿ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರ ಸೂಚನೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಹೇಳಿಕೆ ತಿಳಿಸಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿತ್ತು.

ಮತ್ತಷ್ಟು ಓದಿ: ಮಹಾರಾಷ್ಟ್ರ ಚುನಾವಣೆ: ಮಹಾ ವಿಕಾಸ್ ಅಘಾಡಿ ಜತೆ ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಳೆ ಉಪಸ್ಥಿತಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಪ್ರಣಾಳಿಕೆಯ ಪ್ರಮುಖ ಅಂಶಗಳು ಪ್ರಣಾಳಿಕೆಯ ಮುಖ್ಯಾಂಶಗಳು ಮಹಾಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 3,000 ರೂ. ಪ್ರಣಾಳಿಕೆಯು ಮಹಾರಾಷ್ಟ್ರದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಭರವಸೆ ನೀಡುತ್ತದೆ. MVA ಸರ್ಕಾರವು ಜಾತಿ ಗಣತಿಯನ್ನು ನಡೆಸುತ್ತದೆ ಮತ್ತು ಮೀಸಲಾತಿ ಮೇಲಿನ 50% ಮಿತಿಯನ್ನು ತೆಗೆದುಹಾಕುತ್ತದೆ.

ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ 4,000 ಸ್ಟೈಫಂಡ್ ನೀಡುವುದಾಗಿಯೂ ಭರವಸೆ ನೀಡಲಾಗಿದೆ. 3 ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ರೈತರಿಗೆ 50,000 ಪ್ರೋತ್ಸಾಹ ಧನ ಸಿಗಲಿದೆ.

ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ರಾಜ್ಯದ ಮತಗಳ ಎಣಿಕೆ ನಡೆಯಲಿದೆ. 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56, ಕಾಂಗ್ರೆಸ್ 44. 2014ರಲ್ಲಿ ಬಿಜೆಪಿ 122, ಶಿವಸೇನೆ 63, ಕಾಂಗ್ರೆಸ್ 42 ಸ್ಥಾನ ಗಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್