ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಕಾರಿನ ಮೇಲೆ ಕಲ್ಲು ತೂರಾಟ, ಹಣೆಗೆ ಗಾಯ

ಕಟೋಲ್‌ನಲ್ಲಿ ಶರದ್ ಪವಾರ್ ಬಣದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಅನಿಲ್ ದೇಶಮುಖ್ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ದೇಶಮುಖ್ ಅವರ ತಲೆಗೆ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಘಟನೆ ನಡೆದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಳಿ ನಡೆಸಿದವರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಕಾರಿನ ಮೇಲೆ ಕಲ್ಲು ತೂರಾಟ, ಹಣೆಗೆ ಗಾಯ
ಅನಿಲ್ ದೇಶಮುಖ್
Image Credit source: The Hindu

Updated on: Nov 19, 2024 | 8:00 AM

ಕಟೋಲ್‌ನಲ್ಲಿ ಶರದ್ ಪವಾರ್ ಬಣದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಅನಿಲ್ ದೇಶಮುಖ್ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದ್ದರು. ದೇಶಮುಖ್ ಅವರ ತಲೆಗೆ ಗಾಯವಾಗಿದ್ದು, ರಕ್ತಸ್ರಾವವಾಗಿದೆ. ಘಟನೆ ನಡೆದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಳಿ ನಡೆಸಿದವರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.

ಸೋಮವಾರ (ನವೆಂಬರ್ 18) ಮಹಾರಾಷ್ಟ್ರ ಚುನಾವಣಾ ಪ್ರಚಾರದ ಕೊನೆಯ ದಿನವಾಗಿತ್ತು. ಸಂಜೆ ಐದು ಗಂಟೆಗೆ ಪ್ರಚಾರ ಕೊನೆಗೊಂಡಿತು. ದೇಶ್‌ಮುಖ್ ಅವರು ಕಟೋಲ್‌ನಿಂದ ನಾಗ್ಪುರ ನಗರಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ಅವರ ಬೆಂಗಾವಲು ವಾಹನದ ಮೇಲೆ ಅಪರಿಚಿತರು ದಾಳಿ ನಡೆಸಿದ್ದಾರೆ. ಮಾಜಿ ಗೃಹ ಸಚಿವರು ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅವರ ಕಾರಿನ ಕಿಟಕಿ ತೆರೆದಿತ್ತು ಎಂದು ಹೇಳಲಾಗುತ್ತಿದೆ.

ದೇಶಮುಖ್ ಅವರ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎನ್​ಸಿಪಿ ಎಕ್ಸ್​ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಪ್ರಜಾಪ್ರಭುತ್ವ ನಾಶವಾಗುತ್ತಿದೆ. ಇದಕ್ಕೆ ಉದಾಹರಣೆ ಇಂದು ರಾಜ್ಯದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಮೇಲೆ ನಡೆದ ದಾಳಿ ಎಂದು ಎನ್​ಸಿಪಿ ಹೇಳಿದೆ.

ಮತ್ತಷ್ಟು ಓದಿ: ಮಹಾರಾಷ್ಟ್ರದಲ್ಲಿ ನಡೆಯಬೇಕಿದ್ದ ನಾಲ್ಕು ಚುನಾವಣಾ ರ್‍ಯಾಲಿಗಳ ರದ್ದುಗೊಳಿಸಿದ ಅಮಿತ್ ಶಾ

ಈ ಬಾರಿ ಶರದ್ ಪವಾರ್ ಅವರು ಕಟೋಲ್ ನಿಂದ ಅನಿಲ್ ದೇಶಮುಖ್ ಬದಲಿಗೆ ತಮ್ಮ ಪುತ್ರ ಸಲೀಲ್ ದೇಶಮುಖ್ ಅವರನ್ನು ಕಣಕ್ಕಿಳಿಸಿದ್ದಾರೆ. ಅವರ ಪರ ಪ್ರಚಾರ ಮುಗಿಸಿ ಹಿಂತಿರುಗುತ್ತಿದ್ದರು.

2019 ರ ಚುನಾವಣೆಯಲ್ಲಿ ಅನಿಲ್ ದೇಶಮುಖ್ ಅವರು ಬಿಜೆಪಿ ಅಭ್ಯರ್ಥಿ ಠಾಕೂರ್ ಚರಣ್ ಸಿಂಗ್ ಅವರನ್ನು ಸೋಲಿಸಿದ್ದರು. ಬಿಜೆಪಿ ಮತ್ತೊಮ್ಮೆ ಠಾಕೂರ್ ಚರಣ್ ಸಿಂಗ್ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಮಾಡಿದೆ.

ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ರಾಜ್ಯದ ಮತಗಳ ಎಣಿಕೆ ನಡೆಯಲಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಮಹಾರಾಷ್ಟ್ರದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಬಿಜೆಪಿ ಉತ್ಸುಕವಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 7:58 am, Tue, 19 November 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us