AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; 99 ಅಭ್ಯರ್ಥಿಗಳ ಹೆಸರು ಘೋಷಣೆ

Maharashtra assembly elections, BJP first list release: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ 99 ಅಭ್ಯರ್ಥಿಗಳಿರುವ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನಾಗಪುರ್ ಸೌತ್ ವೆಸ್ಟ್ ಕ್ಷೇತ್ರದಿಂದ ದೇವೇಂದ್ರ ಫಡ್ನವಿಸ್ ಮತ್ತೆ ಸ್ಪರ್ಧಿಸುತ್ತಿದ್ಧಾರೆ. 2013ರಿಂದಲೂ ಅವರು ಈ ಕ್ಷೇತ್ರದಲ್ಲಿ ಶಾಸಕರಾಗಿದ್ದಾರೆ. ನವೆಂಬರ್ 20ರಂದು ಮತದಾನವಾಗಲಿದ್ದು, 23ಕ್ಕೆ ಮತ ಎಣಿಕೆ ನಡೆಯಲಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; 99 ಅಭ್ಯರ್ಥಿಗಳ ಹೆಸರು ಘೋಷಣೆ
ದೇವೇಂದ್ರ ಫಡ್ನವಿಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 20, 2024 | 4:22 PM

Share

ಮುಂಬೈ, ಅಕ್ಟೋಬರ್ 20: ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 99 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. 288 ಸ್ಥಾನಗಳಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ, ಶಿವಸೇನಾ (ಶಿಂದೆ ಬಣ) ಮತ್ತು ಎನ್​ಸಿಪಿ (ಅಜಿತ್ ಪವಾರ್) ಪಕ್ಷಗಳು ಮಹಾಯುತಿ ಮೈತ್ರಿಕೂಟವಾಗಿ ಕಣಕ್ಕಿಳಿದಿವೆ. ಈ 288 ಸ್ಥಾನಗಳ ಪೈಕಿ 260 ಸ್ಥಾನಗಳಿಗೆ ಈ ಮೈತ್ರಿಕೂಟ ಪಕ್ಷಗಳ ಮಧ್ಯೆ ಸೀಟು ಹಂಚಿಕೆ ಆಗಿದೆ. ಇನ್ನುಳಿದ 28 ಸ್ಥಾನಗಳಿಗೆ ಮಾತುಕತೆ ನಡೆಯುತ್ತಿದೆ.

ಮೂಲಗಳ ಪ್ರಕಾರ 260 ಸ್ಥಾನಗಳಲ್ಲಿ ಬಿಜೆಪಿಗೆ 142 ಕ್ಷೇತ್ರಗಳು ಹೋಗಿವೆ. ಶಿವಸೇನಾ ಮತ್ತು ಎನ್​ಸಿಪಿ ಪಕ್ಷಗಳಿಗೆ ಕ್ರಮವಾಗಿ 66 ಮತ್ತು 52 ಕ್ಷೇತ್ರಗಳು ಸಿಕ್ಕಿವೆ ಎನ್ನಲಾಗಿದೆ. ಇನ್ನುಳಿದ 28 ಕ್ಷೇತ್ರಗಳನ್ನೂ ಶೀಘ್ರದಲ್ಲೇ ಹಂಚಿಕೆ ಮಾಡುವ ಸಾಧ್ಯತೆ ಇದೆ.

ಬಿಜೆಪಿ ಸದ್ಯ 99 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈ ಪೈಕಿ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನಾಗಪುರ್ ಸೌತ್ ವೆಸ್ಟ್ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ್ ಬವಾನ್​ಕುಲೆ ಅವರು ಕಾಮಠಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸಚಿವರಾದ ಗಿರೀಶ್ ಮಹಾಜನ್ ಅವರಿಗೆ ಜಾಮ್ನರ್, ಸುಧೀರ್ ಮುಂಗಾಂತಿವಾರ್ ಅವರಿಗೆ ಬಲ್ಲಾರ್​ಪುರ್, ಶ್ರೀಜಯ ಅಶೋಕ್ ಚವಾಣ್ ಅವರಿಗೆ ಭೋಕರ್, ಆಶೀಶ್ ಶೆಲಾರ್ ಅವರಿಗೆ ವಾಂದ್ರೆ ವೆಸ್ಟ್, ಮಂಗಲ್ ಪ್ರಭಾತ್ ಲೋಧಾ ಅವರಿಗೆ ಮಲಬಾರ್ ಹಿಲ್, ರಾಹುಲ್ ನರ್ವೇಕರ್ ಅವರಿಗೆ ಕೊಲಾಬ, ಛತ್ರಪತಿ ಶಿವೇಂದ್ರ ರಾಜೇ ಭೋಸಲೆ ಅವರಿಗೆ ಸತಾರ ಕ್ಷೇತ್ರದ ಟಿಕೆಟ್ ಸಿಕ್ಕಿದೆ.

ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಹೆಚ್ಚಳ, ಹೆಚ್ಚು ಮಕ್ಕಳನ್ನು ಹೊಂದುವಂತೆ ಯುವಕರಿಗೆ ಚಂದ್ರಬಾಬು ನಾಯ್ಡು ಸಲಹೆ

ಚಿಖಲೀ ಕ್ಷೇತ್ರಕ್ಕೆ ಶ್ವೇತಾ ವಿದ್ಯಾಧರ್ ಮಹಾಲೆ, ಫುಲಂಬರಿ ಕ್ಷೇತ್ರಕ್ಕೆ ಅನುರಾಧಾತಾಯ್ ಅತುಲ್ ಚವಾನ್, ಜಿಂತೂರ್ ಕ್ಷೇತ್ರಕ್ಕೆ ಮೇಘನಾ ಬೋರ್ಡಿಕರ್, ಬೋಕರ್ ಕ್ಷೇತ್ರ್ಕಕೆ ಶ್ರೀವಿಜಯಾ ಅಶೋಕ್ ಚವಾಣ್ ಅವರಿಗೂ ಟಿಕೆಟ್ ಸಿಕ್ಕಿದೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಿಗೆ ಒಟ್ಟಿಗೆ ಈ ಬಾರಿ ವಿಧಾನಸಭಾ ಚುನಾವಣೆಗಳಾಗುತ್ತಿವೆ. ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನವಾಗಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಮತ್ತು 20, ಎರಡು ಹಂತದಲ್ಲಿ ಮತದಾನವಾಗುತ್ತಿದೆ. ನವೆಂಬರ್ 23ರಂದು ಎರಡೂ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಇದರ ಜೊತೆಗೆ, ಮೂರು ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ದೇಶದ ವಿವಿಧೆಡೆ ಖಾಲಿ ಇರುವ 47ಕ್ಕೂ ಹೆಚ್ಚು ವಿಧಾನಸಭಾ ಸ್ಥಾನಗಳಿಗೂ ಉಪಚುನಾವಣೆಗಳು ನಡೆಯುತ್ತಿವೆ.

ಇದನ್ನೂ ಓದಿ: ಪ್ರಧಾನಿ ಮೋದಿ ಕಾರ್ಯ ಮೆಚ್ಚಿ, 100 ರೂ. ಕಳುಹಿಸಿದ ಒಡಿಶಾ ಮಹಿಳೆ, ಮೋದಿ ಭಾವುಕ ಪೋಸ್ಟ್​

288 ಸ್ಥಾನಗಳಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಿಜೆಪಿ, ಎನ್​ಸಿಪಿ, ಶಿವಸೇನಾ ಪಕ್ಷಗಳ ಮೈತ್ರಿಕೂಟ ಅಧಿಕಾರದಲ್ಲಿದೆ. ಶಿವಸೇನೆಯ ಏಕನಾಥ್ ಶಿಂದೆ ಸಿಎಂ ಆಗಿದ್ದರೆ, ಬಿಜೆಪಿಯ ದೇವೇಂದ್ರ ಫಡ್ನವಿಸ್ ಡಿಸಿಎಂ ಆಗಿದ್ದಾರೆ. ಬಿಜೆಪಿ 102, ಎನ್​ಸಿಪಿ 40 ಮತ್ತು ಶಿವಸೇನಾ 38 ಶಾಸಕರನ್ನು ಹೊಂದಿವೆ. ಅತ್ತ, ಉದ್ಧವ್ ಠಾಕ್ರೆ ಬಣದ ಶಿವಸೇನಾ, ಶರದ್ ಪವಾರ್ ಬಣದ ಎನ್​ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸೇರಿ ಮತ್ತೊಂದು ಮೈತ್ರಿ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Sun, 20 October 24

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ