AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಎಂದೂ ದಲಿತರು, ಹಿಂದುಳಿದ ವರ್ಗಗಳ ಪ್ರಗತಿಗೆ ಅವಕಾಶ ನೀಡಿರಲಿಲ್ಲ: ನರೇಂದ್ರ ಮೋದಿ

ಬಿಜೆಪಿ ನೀಡಿರುವ ಪ್ರಣಾಳಿಕೆಯೇ ಮಹಾರಾಷ್ಟ್ರ ಅಭಿವೃದ್ಧಿ ಗ್ಯಾರಂಟಿ ಇದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಪುಣೆಯಲ್ಲಿ ರೋಡ್​ ಶೋನಲ್ಲಿ ಪಾಲ್ಗೊಂಡು ಪ್ರಧಾನಿ ಮೋದಿ ಮಾತನಾಡಿದರು.

ಕಾಂಗ್ರೆಸ್ ಎಂದೂ ದಲಿತರು, ಹಿಂದುಳಿದ ವರ್ಗಗಳ ಪ್ರಗತಿಗೆ ಅವಕಾಶ ನೀಡಿರಲಿಲ್ಲ: ನರೇಂದ್ರ ಮೋದಿ
ನರೇಂದ್ರ ಮೋದಿImage Credit source: Hindustan Times
ನಯನಾ ರಾಜೀವ್
|

Updated on:Nov 12, 2024 | 2:50 PM

Share

ಹಿಂದುಳಿದ ವರ್ಗಗಳನ್ನು ಕಾಂಗ್ರೆಸ್ ಪಕ್ಷವು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ, ಎಂದೂ ದಲಿತರು, ಹಿಂದುಳಿದ ವರ್ಗಗಳ ಪ್ರಗತಿಗೆ ಪಕ್ಷ ಅವಕಾಶ ನೀಡಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಪುಣೆಯಲ್ಲಿ ರೋಡ್​ ಶೋನಲ್ಲಿ ಪಾಲ್ಗೊಂಡು ಪ್ರಧಾನಿ ಮೋದಿ ಮಾತನಾಡಿದರು.

ಮಹಾರಾಷ್ಟ್ರದ ಕ್ಷಿಪ್ರ ಅಭಿವೃದ್ಧಿಯು ಅಘಾಡಿ ಜನರ ಕೈಯಲ್ಲಿಲ್ಲ, ಅಭಿವೃದ್ಧಿಗೆ ಬ್ರೇಕ್​ ಹಾಕುವಲ್ಲಿ ಅವರು ಪಿಎಚ್​ಡಿ ಮಾಡಿದ್ದಾರೆ.ನಿಮ್ಮ ಒಗ್ಗಟ್ಟು ಒಡೆದರೆ ಬುಡಕಟ್ಟು ಸಮಾಜ ತನ್ನ ಅಸ್ಮಿತೆ ಮತ್ತು ಶಕ್ತಿಯನ್ನು ಕಳೆದುಕೊಳ್ಳುತ್ತದೆ ಎಂದರು. ಈ ಷಡ್ಯಂತ್ರಕ್ಕೆ ನಾವು ಬಲಿಯಾಗುವುದು ಬೇಡ, ನಾವು ಒಗ್ಗಟ್ಟಾಗಿ ಉಳಿಯಬೇಕು, ಆಗ ಎಲ್ಲರೂ ಸುರಕ್ಷಿತವಾಗಿರುತ್ತೇವೆ ಎಂದರು.

ನಿಮ್ಮ ಮೀಸಲಾತಿಯನ್ನು ಮೊದಲು ಕಾಂಗ್ರೆಸ್​ ಕಿತ್ತುಕೊಳ್ಳಲಿದ್ದು, ಕಾಂಗ್ರೆಸ್‌ನ ರಾಜಮನೆತನದವರು ಈ ದೇಶವನ್ನು ಆಳಲು ಹುಟ್ಟಿದವರು ಎಂಬ ಮನಸ್ಥಿತಿ ಯಾವಾಗಲೂ ಇದೆ. ಆದ್ದರಿಂದಲೇ ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ದಲಿತರು, ಹಿಂದುಳಿದವರು, ಆದಿವಾಸಿಗಳು ಮುಂದೆ ಹೋಗಲು ಬಿಡಲಿಲ್ಲ ಎಂದು ಹೇಳಿದರು. ಬಿಜೆಪಿ ನೀಡಿರುವ ಪ್ರಣಾಳಿಕೆಯೇ ಮಹಾರಾಷ್ಟ್ರ ಅಭಿವೃದ್ಧಿ ಗ್ಯಾರಂಟಿ ಇದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮತ್ತಷ್ಟು ಓದಿ: ಮಹಾರಾಷ್ಟ್ರ ಚುನಾವಣೆ: ಮಹಾ ವಿಕಾಸ್ ಅಘಾಡಿ ಜತೆ ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್

ಮಹಾರಾಷ್ಟ್ರ ಸಮೃದ್ಧಗೊಳ್ಳಬೇಕಿದ್ದರೆ ರೈತರ ಏಳಿಗೆಯಾಗಬೇಕು, ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳ ದೊಡ್ಡ ಷಡ್ಯಂತ್ರದ ಬಗ್ಗೆ ನಾನು ಇಂದು ನಿಮಗೆ ಎಚ್ಚರಿಕೆ ನೀಡುತ್ತಿದ್ದೇನೆ. ನಮ್ಮ ದೇಶದಲ್ಲಿ ಬುಡಕಟ್ಟು ಸಮುದಾಯದ ಜನಸಂಖ್ಯೆಯು ಸುಮಾರು 10% ರಷ್ಟಿದೆ.

ಕಾಂಗ್ರೆಸ್ ಈಗ ಬುಡಕಟ್ಟು ಸಮಾಜವನ್ನು ಜಾತಿಗಳಾಗಿ ವಿಭಜಿಸುವ ಮೂಲಕ ದುರ್ಬಲಗೊಳಿಸಲು ಬಯಸಿದೆ.ನಮ್ಮ ಬುಡಕಟ್ಟು ಸಹೋದರರು ಎಸ್‌ಟಿ ಎಂಬ ಗುರುತನ್ನು ಕಳೆದುಕೊಳ್ಳಬೇಕೆಂದು ಕಾಂಗ್ರೆಸ್ ಬಯಸುತ್ತದೆ ಎಂದರು.

ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ರಾಜ್ಯದ ಮತಗಳನ್ನು ಎಣಿಕೆ ಮಾಡಲಾಗುತ್ತದೆ. 2019ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 105, ಶಿವಸೇನೆ 56, ಕಾಂಗ್ರೆಸ್ 44. 2014ರಲ್ಲಿ ಬಿಜೆಪಿ 122, ಶಿವಸೇನೆ 63, ಕಾಂಗ್ರೆಸ್ 42 ಸ್ಥಾನ ಗಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:44 pm, Tue, 12 November 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್