AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಸಂಖ್ಯಾಬಲ: ಮ್ಯಾಜಿಕ್ ನಂಬರ್ 145 ಯಾರಿಗಿದೆ?

ಮುಂಬೈ: ಮಹಾ ಅಚ್ಚರಿ ಮತ್ತು ಶಾಕಿಂಗ್ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್​ಸಿಪಿ ಸರ್ಕಾರ ರಚಿಸಿದೆ. ಆದ್ರೆ ನೂತನ ಸರ್ಕಾರ ರಚನೆಗೆ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಬೆಂಬಲ ನೀಡಿಲ್ಲ. ನನಗೆ ಗೊತ್ತಿಲ್ಲದೆ ಸರ್ಕಾರ ರಚನೆ ಮಾಡಿದ್ದಾರೆ ಎನ್ನುತ್ತಿದ್ದಾರೆ. ಹಾಗಾದ್ರೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲು ಸಂಖ್ಯಾಬಲ ಎಷ್ಟಿರಬೇಕು? ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಎಷ್ಟು ಎನ್ನುವ ಮಾಹಿತಿ ಇಲ್ಲಿದೆ. ಮ್ಯಾಜಿಕ್ ನಂಬರ್ 145: 288 ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ 145 ಅಗತ್ಯ. […]

ಮಹಾರಾಷ್ಟ್ರ ಸಂಖ್ಯಾಬಲ:  ಮ್ಯಾಜಿಕ್ ನಂಬರ್ 145 ಯಾರಿಗಿದೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 23, 2019 | 10:52 AM

Share

ಮುಂಬೈ: ಮಹಾ ಅಚ್ಚರಿ ಮತ್ತು ಶಾಕಿಂಗ್ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್​ಸಿಪಿ ಸರ್ಕಾರ ರಚಿಸಿದೆ. ಆದ್ರೆ ನೂತನ ಸರ್ಕಾರ ರಚನೆಗೆ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಬೆಂಬಲ ನೀಡಿಲ್ಲ. ನನಗೆ ಗೊತ್ತಿಲ್ಲದೆ ಸರ್ಕಾರ ರಚನೆ ಮಾಡಿದ್ದಾರೆ ಎನ್ನುತ್ತಿದ್ದಾರೆ. ಹಾಗಾದ್ರೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲು ಸಂಖ್ಯಾಬಲ ಎಷ್ಟಿರಬೇಕು? ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಎಷ್ಟು ಎನ್ನುವ ಮಾಹಿತಿ ಇಲ್ಲಿದೆ.

ಮ್ಯಾಜಿಕ್ ನಂಬರ್ 145: 288 ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ 145 ಅಗತ್ಯ. ಆದ್ರೆ ಯಾರ ಬಳಿಯೂ ಅಷ್ಟೊಂದು ಬಹುಮತ ಇಲ್ಲ. 105 ಕ್ಷೇತ್ರಗಳನ್ನ ಗೆದ್ದು ಬಹು ದೊಡ್ಡ ಪಕ್ಷವಾಗಿ ಹೊರಬಂದಿರುವ ಬಿಜೆಪಿಗೆ 40 ಸದಸ್ಯರ ಅಗತ್ಯವಿದೆ. ಶಿವಸೇನಾ 56 ಸ್ಥಾನಗಳನ್ನು ಪಡೆದಿದ್ರೆ, ಕಾಂಗ್ರೆಸ್​ 44 ಸದಸ್ಯರನ್ನು ಹೊಂದಿದೆ. 54 ಕ್ಷೇತ್ರಗಳಲ್ಲಿ ಎನ್​ಸಿಪಿ ಗೆಲುವು ದಾಖಲಿಸಿದೆ. ಉಳಿದ 29 ಕ್ಷೇತ್ರಗಳಲ್ಲಿ ಇತರರು ಗೆಲುವು ದಾಖಲಿಸಿದ್ದಾರೆ.

ಈ ಮಧ್ಯೆ, ದಿಢೀರನೆ ಬಿಜೆಪಿಗೆ 30ಕ್ಕೂ ಹೆಚ್ಚು ಎನ್​ಸಿಪಿ ಶಾಸಕರ ಬೆಂಬಲ ದಕ್ಕಿದೆ ಎನ್ನಲಾಗಿದೆ. ಶಿವಸೇನೆಯಿಂದಲೂ ನಾಲ್ಕಾರು ಶಾಸಕರೂ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಇನ್ನು 10-15 ಪಕ್ಷೇತರ ಶಾಸಕರೂ ಬಿಜೆಪಿಗೆ ಬೆಂಬಲ ಸೂಚಿಸುವ ಸಾಧ್ಯತೆಯಿದೆ.

ನ.30ರೊಳಗೆ ಬಹುಮತ ಸಾಬೀತು! ನವೆಂಬರ್ 30ರೊಳಗೆ ಬಹುಮತ ಸಾಬೀತು ಮಾಡಲು ಕಾಲಾವಕಾಶ ನೀಡಲಾಗಿದೆ. ಬಿಜೆಪಿ 105, ಎನ್​ಸಿಪಿ 30 ಹಾಗೂ ಪಕ್ಷೇತರರು 10 ಸದಸ್ಯರು ಬೆಂಬಲಿಸಿದ್ರೆ ಒಟ್ಟು 145 ಮ್ಯಾಜಿಕ್ ನಂಬರ್ ಸಿಕ್ಕಂತಾಗುತ್ತೆ. ಆಗ ಫಡ್ನವಿಸ್ ಸರ್ಕಾರ ಸರಳ ಬಹುಮತದ ಪರೀಕ್ಷೆಯಲ್ಲಿ ಪಾಸ್ ಆಗುತ್ತೆ ಎಂದು ವಿಶ್ಲೇಷಿಸಲಾಗಿದೆ.

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು