AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಸಂಖ್ಯಾಬಲ: ಮ್ಯಾಜಿಕ್ ನಂಬರ್ 145 ಯಾರಿಗಿದೆ?

ಮುಂಬೈ: ಮಹಾ ಅಚ್ಚರಿ ಮತ್ತು ಶಾಕಿಂಗ್ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್​ಸಿಪಿ ಸರ್ಕಾರ ರಚಿಸಿದೆ. ಆದ್ರೆ ನೂತನ ಸರ್ಕಾರ ರಚನೆಗೆ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಬೆಂಬಲ ನೀಡಿಲ್ಲ. ನನಗೆ ಗೊತ್ತಿಲ್ಲದೆ ಸರ್ಕಾರ ರಚನೆ ಮಾಡಿದ್ದಾರೆ ಎನ್ನುತ್ತಿದ್ದಾರೆ. ಹಾಗಾದ್ರೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲು ಸಂಖ್ಯಾಬಲ ಎಷ್ಟಿರಬೇಕು? ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಎಷ್ಟು ಎನ್ನುವ ಮಾಹಿತಿ ಇಲ್ಲಿದೆ. ಮ್ಯಾಜಿಕ್ ನಂಬರ್ 145: 288 ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ 145 ಅಗತ್ಯ. […]

ಮಹಾರಾಷ್ಟ್ರ ಸಂಖ್ಯಾಬಲ:  ಮ್ಯಾಜಿಕ್ ನಂಬರ್ 145 ಯಾರಿಗಿದೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 23, 2019 | 10:52 AM

Share

ಮುಂಬೈ: ಮಹಾ ಅಚ್ಚರಿ ಮತ್ತು ಶಾಕಿಂಗ್ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್​ಸಿಪಿ ಸರ್ಕಾರ ರಚಿಸಿದೆ. ಆದ್ರೆ ನೂತನ ಸರ್ಕಾರ ರಚನೆಗೆ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಬೆಂಬಲ ನೀಡಿಲ್ಲ. ನನಗೆ ಗೊತ್ತಿಲ್ಲದೆ ಸರ್ಕಾರ ರಚನೆ ಮಾಡಿದ್ದಾರೆ ಎನ್ನುತ್ತಿದ್ದಾರೆ. ಹಾಗಾದ್ರೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರಲು ಸಂಖ್ಯಾಬಲ ಎಷ್ಟಿರಬೇಕು? ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ಎಷ್ಟು ಎನ್ನುವ ಮಾಹಿತಿ ಇಲ್ಲಿದೆ.

ಮ್ಯಾಜಿಕ್ ನಂಬರ್ 145: 288 ಕ್ಷೇತ್ರಗಳನ್ನು ಹೊಂದಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ 145 ಅಗತ್ಯ. ಆದ್ರೆ ಯಾರ ಬಳಿಯೂ ಅಷ್ಟೊಂದು ಬಹುಮತ ಇಲ್ಲ. 105 ಕ್ಷೇತ್ರಗಳನ್ನ ಗೆದ್ದು ಬಹು ದೊಡ್ಡ ಪಕ್ಷವಾಗಿ ಹೊರಬಂದಿರುವ ಬಿಜೆಪಿಗೆ 40 ಸದಸ್ಯರ ಅಗತ್ಯವಿದೆ. ಶಿವಸೇನಾ 56 ಸ್ಥಾನಗಳನ್ನು ಪಡೆದಿದ್ರೆ, ಕಾಂಗ್ರೆಸ್​ 44 ಸದಸ್ಯರನ್ನು ಹೊಂದಿದೆ. 54 ಕ್ಷೇತ್ರಗಳಲ್ಲಿ ಎನ್​ಸಿಪಿ ಗೆಲುವು ದಾಖಲಿಸಿದೆ. ಉಳಿದ 29 ಕ್ಷೇತ್ರಗಳಲ್ಲಿ ಇತರರು ಗೆಲುವು ದಾಖಲಿಸಿದ್ದಾರೆ.

ಈ ಮಧ್ಯೆ, ದಿಢೀರನೆ ಬಿಜೆಪಿಗೆ 30ಕ್ಕೂ ಹೆಚ್ಚು ಎನ್​ಸಿಪಿ ಶಾಸಕರ ಬೆಂಬಲ ದಕ್ಕಿದೆ ಎನ್ನಲಾಗಿದೆ. ಶಿವಸೇನೆಯಿಂದಲೂ ನಾಲ್ಕಾರು ಶಾಸಕರೂ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಇನ್ನು 10-15 ಪಕ್ಷೇತರ ಶಾಸಕರೂ ಬಿಜೆಪಿಗೆ ಬೆಂಬಲ ಸೂಚಿಸುವ ಸಾಧ್ಯತೆಯಿದೆ.

ನ.30ರೊಳಗೆ ಬಹುಮತ ಸಾಬೀತು! ನವೆಂಬರ್ 30ರೊಳಗೆ ಬಹುಮತ ಸಾಬೀತು ಮಾಡಲು ಕಾಲಾವಕಾಶ ನೀಡಲಾಗಿದೆ. ಬಿಜೆಪಿ 105, ಎನ್​ಸಿಪಿ 30 ಹಾಗೂ ಪಕ್ಷೇತರರು 10 ಸದಸ್ಯರು ಬೆಂಬಲಿಸಿದ್ರೆ ಒಟ್ಟು 145 ಮ್ಯಾಜಿಕ್ ನಂಬರ್ ಸಿಕ್ಕಂತಾಗುತ್ತೆ. ಆಗ ಫಡ್ನವಿಸ್ ಸರ್ಕಾರ ಸರಳ ಬಹುಮತದ ಪರೀಕ್ಷೆಯಲ್ಲಿ ಪಾಸ್ ಆಗುತ್ತೆ ಎಂದು ವಿಶ್ಲೇಷಿಸಲಾಗಿದೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ