AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಟಿಎಂ ದೋಚಲು ಹೋದ ಕಳ್ಳರು, ನೋಡ ನೋಡುತ್ತಲೇ ಸುಟ್ಟು ಭಸ್ಮವಾಯ್ತು 21 ಲಕ್ಷ ರೂ.

ಎಟಿಎಂ ದರೋಡೆ ಮಾಡಲು ಹೋಗಿದ್ದ ಕಳ್ಳರೆದರೇ 21 ಲಕ್ಷ ರೂ. ಹಣ ಸುಟ್ಟು ಭಸ್ಮವಾದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಗ್ಯಾಸ್ ಕಟರ್‌ನಿಂದ ಎಟಿಎಂ ದರೋಡೆ ಮಾಡಲು ಕಳ್ಳರು ಮಾಡಿದ ಪ್ರಯತ್ನದಿಂದ ಬೆಂಕಿ ಕಾಣಿಸಿಕೊಂಡು 21 ಲಕ್ಷ ರೂ. ಸುಟ್ಟು ಬೂದಿಯಾಗಿರುವ ಘಟನೆ ನಡೆದಿದೆ.

ಎಟಿಎಂ ದೋಚಲು ಹೋದ ಕಳ್ಳರು, ನೋಡ ನೋಡುತ್ತಲೇ ಸುಟ್ಟು ಭಸ್ಮವಾಯ್ತು 21 ಲಕ್ಷ ರೂ.
ಹಣImage Credit source: India Today
ನಯನಾ ರಾಜೀವ್
|

Updated on: Jan 15, 2024 | 3:00 PM

Share

ಎಟಿಎಂ ದರೋಡೆ(ATM Robbery)) ಮಾಡಲು ಹೋಗಿದ್ದ ಕಳ್ಳರೆದರೇ 21 ಲಕ್ಷ ರೂ. ಹಣ ಸುಟ್ಟು ಭಸ್ಮವಾದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಗ್ಯಾಸ್ ಕಟರ್‌ನಿಂದ ಎಟಿಎಂ ದರೋಡೆ ಮಾಡಲು ಕಳ್ಳರು ಮಾಡಿದ ಪ್ರಯತ್ನದಿಂದ ಬೆಂಕಿ ಕಾಣಿಸಿಕೊಂಡು 21 ಲಕ್ಷ ರೂ. ಸುಟ್ಟು ಬೂದಿಯಾಗಿರುವ ಘಟನೆ ನಡೆದಿದೆ.

ಜನವರಿ 13 ರ ಮುಂಜಾನೆ ಡೊಂಬಿವಾಲಿ ಟೌನ್‌ಶಿಪ್‌ನ ವಿಷ್ಣು ನಗರ ಪ್ರದೇಶದಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್‌ನ ಎಟಿಎಂ ಕಿಯೋಸ್ಕ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನವರಿ 13ರಂದು 1 ಹಾಗೂ 2 ಗಂಟೆ ನಡುವೆ ಅಪರಿಚಿತ ವ್ಯಕ್ತಿಗಳು ಎಟಿಎಂ ಕಿಯೋಸ್ಕ್​ ಮುರಿಯಲು ಮೊದಲು ಶಟರ್​ನ ಬೀಗ ಮುರಿದಿದ್ದಾರೆ. ಎಟಿಎಂ ತೆರೆಯಲು ಗ್ಯಾಸ್​ ಕಟರ್​ ಬಳಸಿದ್ದಾರೆ, ಈ ಪ್ರಕ್ರಿಯೆಯಲ್ಲಿ ಉಂಟಾದ ತೀವ್ರ ಶಾಖದಿಂದ ಬೆಂಕಿ ಹೊತ್ತಿಕೊಂಡಿತ್ತು.

ಮತ್ತಷ್ಟು ಓದಿ: ಚಿಕ್ಕಬಳ್ಳಾಪುರ: ಎಸ್​ಬಿಐ ಎಟಿಎಂಗೆ ಬೆಂಕಿ ಹಾಕಿ 20 ಲಕ್ಷ ರೂ. ಕಳ್ಳತನ; ಸ್ಥಳಕ್ಕೆ ಎಸ್ಪಿ ಭೇಟಿ

ಬೆಂಕಿ ಅವಘಡದಲ್ಲಿ ಎಟಿಎಂನ ಆಂತರಿಕ ಘಟಕಗಳಿಗೆ ತೀವ್ರ ಹಾನಿಯಾಗಿದ್ದು, ಯಂತ್ರ ಸುಟ್ಟು ಕರಕಲಾಗಿದ್ದು, ಸಂಗ್ರಹಿಸಿಟ್ಟಿದ್ದ 21,11,800 ನಗದು ಬೂದಿಯಾಗಿದೆ. ಎಟಿಎಂ ಕೇಂದ್ರವನ್ನು ನಿರ್ವಹಿಸುವ ಜವಾಬ್ದಾರಿಯುತ ಎಲೆಕ್ಟ್ರಾನಿಕ್ ಪಾವತಿ ಸಿಸ್ಟಮ್ಸ್ ಅಧಿಕಾರಿ ನೀಡಿದ ವಿವರಗಳ ಆಧಾರದ ಮೇಲೆ, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಸೆಕ್ಷನ್ 457, 380, 427 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ