AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆನಂದ್​ ನಿರಗುಡೆ ರಾಜೀನಾಮೆ

ಮಹಾರಾಷ್ಟ್ರ(Maharashtra)ದಲ್ಲಿ ಒಂದೆಡೆ ಮರಾಠ ಮೀಸಲಾತಿ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆನಂದ್ ನಿರಗುಡೆ ರಾಜೀನಾಮೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ವಿಧಾನಸಭೆಯಲ್ಲಿ ಮರಾಠ ಮೀಸಲಾತಿ ಕುರಿತು ಚರ್ಚೆ ನಡೆಯಲಿದೆ. ಮರಾಠ ಮೀಸಲಾತಿಗೆ ಸಹಾಯಕವಾಗುವಂತಹ ಮಾಹಿತಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಪಡೆಯುವ ರಾಜ್ಯ ಸರ್ಕಾರದ ಪ್ರಯತ್ನಗಳಿಗೆ ಅಡ್ಡಿಯಾಗಿದೆ.

ಮಹಾರಾಷ್ಟ್ರ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆನಂದ್​ ನಿರಗುಡೆ ರಾಜೀನಾಮೆ
ಆನಂದ್ ನಿರಗುಡೆImage Credit source: ABP Live
ನಯನಾ ರಾಜೀವ್
|

Updated on: Dec 12, 2023 | 11:21 AM

Share

ಮಹಾರಾಷ್ಟ್ರ(Maharashtra)ದಲ್ಲಿ ಒಂದೆಡೆ ಮರಾಠ ಮೀಸಲಾತಿ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆನಂದ್ ನಿರಗುಡೆ ರಾಜೀನಾಮೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ವಿಧಾನಸಭೆಯಲ್ಲಿ ಮರಾಠ ಮೀಸಲಾತಿ ಕುರಿತು ಚರ್ಚೆ ನಡೆಯಲಿದೆ. ಮರಾಠ ಮೀಸಲಾತಿಗೆ ಸಹಾಯಕವಾಗುವಂತಹ ಮಾಹಿತಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಪಡೆಯುವ ರಾಜ್ಯ ಸರ್ಕಾರದ ಪ್ರಯತ್ನಗಳಿಗೆ ಅಡ್ಡಿಯಾಗಿದೆ.

ಮರಾಠ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯ ವಿಚಾರಣೆ ಬಾಕಿ ಇರುವಾಗಲೇ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಕ್ಯುರೇಟಿವ್ ಅರ್ಜಿಯನ್ನು ಬೆಂಬಲಿಸಲು ಈ ಹಿಂದುಳಿದ ವರ್ಗಗಳ ಆಯೋಗದ ದತ್ತಾಂಶವನ್ನು ರಾಜ್ಯ ಸರ್ಕಾರ ನಿರೀಕ್ಷಿಸಿದೆ.

ರಾಜ್ಯ ಸರ್ಕಾರದಲ್ಲಿರುವ ಇಬ್ಬರು ಸಚಿವರು ಹಿಂದುಳಿದ ವರ್ಗಗಳ ಆಯೋಗದ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು, ರಾಜ್ಯ ಸರ್ಕಾರ ಬಯಸಿದಂತೆ ಅಂಕಿಅಂಶಗಳನ್ನು ಸಿದ್ಧಪಡಿಸುವಂತೆ ಆಯೋಗದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಸರ್ಕಾರದಲ್ಲಿ ಸಚಿವರ ಹಸ್ತಕ್ಷೇಪದಿಂದಾಗಿ ನ್ಯಾಯಮೂರ್ತಿ ಆನಂದ ನಿರಗುಡೆ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಇಬ್ಬರು ಸಚಿವರು ಯಾರು? ಈ ಬಗ್ಗೆ ಇನ್ನೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಮರಾಠಾ ಮೀಸಲಾತಿ: ಮಹಾರಾಷ್ಟ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ, ಇಲ್ಲಿದೆ ವಿವರ

ರಾಜ್ಯ ಸರ್ಕಾರದ ಮುಂದಿದೆ ಆಯೋಗ ಪುನರ್ ರಚನೆ ಸವಾಲು ಒಂದು ತಿಂಗಳೊಳಗೆ ಆಯೋಗದ ಐವರು ಸದಸ್ಯರು ರಾಜೀನಾಮೆ ನೀಡಿದ್ದಾರೆ. ಆಯೋಗದ ಇಬ್ಬರು ಸದಸ್ಯರಾದ ಬಾಲಾಜಿ ಸಾಗರ್ ಕಿಲ್ಲಾರಿಕರ್ ಮತ್ತು ಲಕ್ಷ್ಮಣ್ ಹಾಕೆ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಒತ್ತಡಕ್ಕೆ ಮಣಿದು ಆಯೋಗದ ಅಧ್ಯಕ್ಷ ಆನಂದ ನಿರಗುಡೆ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಇದರಿಂದ ಮರಾಠ ಮೀಸಲಾತಿಗೆ ಅಗತ್ಯ ಮಾಹಿತಿ ಪಡೆದು ಆಯೋಗವನ್ನು ಮರುಸಂಘಟಿಸುವ ಸವಾಲು ರಾಜ್ಯ ಸರಕಾರಕ್ಕೆ ಎದುರಾಗಲಿದೆ.

ಆಯೋಗದ ಸದಸ್ಯರ ಮೇಲೆ ಸರ್ಕಾರದಿಂದ ಒತ್ತಡ ಹಿಂದುಳಿದ ವರ್ಗಗಳ ರಾಜ್ಯ ಆಯೋಗವು ಹಿಂದುಳಿದ ಜಾತಿಗಳ ಮಾಹಿತಿಯನ್ನು ಸಂಗ್ರಹಿಸುವುದು. ಹಿಂದುಳಿದ ವರ್ಗಗಳ ರಾಜ್ಯ ಆಯೋಗವು ಸ್ವಾಯತ್ತವಾಗಿದೆ. ಆಯೋಗ ಸ್ವಾಯತ್ತತೆ ಹೊಂದಿದ್ದರೂ ಸರ್ಕಾರದಿಂದ ಮಾಹಿತಿ ನೀಡುವಂತೆ ಒತ್ತಡ ಹೇರುತ್ತಿದೆ ಎಂದು ಸದಸ್ಯರು ಹೇಳುತ್ತಾರೆ. ನಾವು ಸಮೀಕ್ಷೆಯಿಂದ ನಿಮಗೆ ಮಾಹಿತಿಯನ್ನು ನೀಡಬಹುದು, ಆದರೆ ಸರ್ಕಾರವು ನಿರೀಕ್ಷಿಸುವ ಮಾಹಿತಿಯನ್ನು ನಾವು ನೀಡಲು ಸಾಧ್ಯವಿಲ್ಲ. ನಮ್ಮಲ್ಲಿರುವ ಮಾಹಿತಿಯನ್ನಷ್ಟೇ ನೀಡಬಹುದು ಎಂದು ಆಯೋಗದ ಸದಸ್ಯರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ