ಮಹಾರಾಷ್ಟ್ರ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆನಂದ್​ ನಿರಗುಡೆ ರಾಜೀನಾಮೆ

ಮಹಾರಾಷ್ಟ್ರ(Maharashtra)ದಲ್ಲಿ ಒಂದೆಡೆ ಮರಾಠ ಮೀಸಲಾತಿ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆನಂದ್ ನಿರಗುಡೆ ರಾಜೀನಾಮೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ವಿಧಾನಸಭೆಯಲ್ಲಿ ಮರಾಠ ಮೀಸಲಾತಿ ಕುರಿತು ಚರ್ಚೆ ನಡೆಯಲಿದೆ. ಮರಾಠ ಮೀಸಲಾತಿಗೆ ಸಹಾಯಕವಾಗುವಂತಹ ಮಾಹಿತಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಪಡೆಯುವ ರಾಜ್ಯ ಸರ್ಕಾರದ ಪ್ರಯತ್ನಗಳಿಗೆ ಅಡ್ಡಿಯಾಗಿದೆ.

ಮಹಾರಾಷ್ಟ್ರ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆನಂದ್​ ನಿರಗುಡೆ ರಾಜೀನಾಮೆ
ಆನಂದ್ ನಿರಗುಡೆ
Image Credit source: ABP Live

Updated on: Dec 12, 2023 | 11:21 AM

ಮಹಾರಾಷ್ಟ್ರ(Maharashtra)ದಲ್ಲಿ ಒಂದೆಡೆ ಮರಾಠ ಮೀಸಲಾತಿ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಆನಂದ್ ನಿರಗುಡೆ ರಾಜೀನಾಮೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ವಿಧಾನಸಭೆಯಲ್ಲಿ ಮರಾಠ ಮೀಸಲಾತಿ ಕುರಿತು ಚರ್ಚೆ ನಡೆಯಲಿದೆ. ಮರಾಠ ಮೀಸಲಾತಿಗೆ ಸಹಾಯಕವಾಗುವಂತಹ ಮಾಹಿತಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಪಡೆಯುವ ರಾಜ್ಯ ಸರ್ಕಾರದ ಪ್ರಯತ್ನಗಳಿಗೆ ಅಡ್ಡಿಯಾಗಿದೆ.

ಮರಾಠ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯ ವಿಚಾರಣೆ ಬಾಕಿ ಇರುವಾಗಲೇ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಕ್ಯುರೇಟಿವ್ ಅರ್ಜಿಯನ್ನು ಬೆಂಬಲಿಸಲು ಈ ಹಿಂದುಳಿದ ವರ್ಗಗಳ ಆಯೋಗದ ದತ್ತಾಂಶವನ್ನು ರಾಜ್ಯ ಸರ್ಕಾರ ನಿರೀಕ್ಷಿಸಿದೆ.

ರಾಜ್ಯ ಸರ್ಕಾರದಲ್ಲಿರುವ ಇಬ್ಬರು ಸಚಿವರು ಹಿಂದುಳಿದ ವರ್ಗಗಳ ಆಯೋಗದ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು, ರಾಜ್ಯ ಸರ್ಕಾರ ಬಯಸಿದಂತೆ ಅಂಕಿಅಂಶಗಳನ್ನು ಸಿದ್ಧಪಡಿಸುವಂತೆ ಆಯೋಗದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಸರ್ಕಾರದಲ್ಲಿ ಸಚಿವರ ಹಸ್ತಕ್ಷೇಪದಿಂದಾಗಿ ನ್ಯಾಯಮೂರ್ತಿ ಆನಂದ ನಿರಗುಡೆ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಇಬ್ಬರು ಸಚಿವರು ಯಾರು? ಈ ಬಗ್ಗೆ ಇನ್ನೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಮರಾಠಾ ಮೀಸಲಾತಿ: ಮಹಾರಾಷ್ಟ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ, ಇಲ್ಲಿದೆ ವಿವರ

ರಾಜ್ಯ ಸರ್ಕಾರದ ಮುಂದಿದೆ ಆಯೋಗ ಪುನರ್ ರಚನೆ ಸವಾಲು
ಒಂದು ತಿಂಗಳೊಳಗೆ ಆಯೋಗದ ಐವರು ಸದಸ್ಯರು ರಾಜೀನಾಮೆ ನೀಡಿದ್ದಾರೆ. ಆಯೋಗದ ಇಬ್ಬರು ಸದಸ್ಯರಾದ ಬಾಲಾಜಿ ಸಾಗರ್ ಕಿಲ್ಲಾರಿಕರ್ ಮತ್ತು ಲಕ್ಷ್ಮಣ್ ಹಾಕೆ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಒತ್ತಡಕ್ಕೆ ಮಣಿದು ಆಯೋಗದ ಅಧ್ಯಕ್ಷ ಆನಂದ ನಿರಗುಡೆ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಇದರಿಂದ ಮರಾಠ ಮೀಸಲಾತಿಗೆ ಅಗತ್ಯ ಮಾಹಿತಿ ಪಡೆದು ಆಯೋಗವನ್ನು ಮರುಸಂಘಟಿಸುವ ಸವಾಲು ರಾಜ್ಯ ಸರಕಾರಕ್ಕೆ ಎದುರಾಗಲಿದೆ.

ಆಯೋಗದ ಸದಸ್ಯರ ಮೇಲೆ ಸರ್ಕಾರದಿಂದ ಒತ್ತಡ
ಹಿಂದುಳಿದ ವರ್ಗಗಳ ರಾಜ್ಯ ಆಯೋಗವು ಹಿಂದುಳಿದ ಜಾತಿಗಳ ಮಾಹಿತಿಯನ್ನು ಸಂಗ್ರಹಿಸುವುದು. ಹಿಂದುಳಿದ ವರ್ಗಗಳ ರಾಜ್ಯ ಆಯೋಗವು ಸ್ವಾಯತ್ತವಾಗಿದೆ. ಆಯೋಗ ಸ್ವಾಯತ್ತತೆ ಹೊಂದಿದ್ದರೂ ಸರ್ಕಾರದಿಂದ ಮಾಹಿತಿ ನೀಡುವಂತೆ ಒತ್ತಡ ಹೇರುತ್ತಿದೆ ಎಂದು ಸದಸ್ಯರು ಹೇಳುತ್ತಾರೆ.
ನಾವು ಸಮೀಕ್ಷೆಯಿಂದ ನಿಮಗೆ ಮಾಹಿತಿಯನ್ನು ನೀಡಬಹುದು, ಆದರೆ ಸರ್ಕಾರವು ನಿರೀಕ್ಷಿಸುವ ಮಾಹಿತಿಯನ್ನು ನಾವು ನೀಡಲು ಸಾಧ್ಯವಿಲ್ಲ. ನಮ್ಮಲ್ಲಿರುವ ಮಾಹಿತಿಯನ್ನಷ್ಟೇ ನೀಡಬಹುದು ಎಂದು ಆಯೋಗದ ಸದಸ್ಯರು ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us