AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Bandh: ಲಖಿಂಪುರ ಖೇರಿಯ ರೈತರ ಹತ್ಯೆ ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್

ಮಹಾರಾಷ್ಟ್ರದ ಶಿವಸೇನೆ, ಕಾಂಗ್ರೆಸ್, ಎನ್​ಸಿಪಿಯನ್ನೊಳಗೊಂಡ ಮಹಾ ವಿಕಾಸ್ ಅಘಾಡಿ ಸರ್ಕಾರ ಬಂದ್​ಗೆ ಕರೆ ನೀಡಿದ್ದು, ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ.

Maharashtra Bandh: ಲಖಿಂಪುರ ಖೇರಿಯ ರೈತರ ಹತ್ಯೆ ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್
ಮಹಾರಾಷ್ಟ್ರ ಬಂದ್
TV9 Web
| Edited By: |

Updated on:Oct 11, 2021 | 10:07 AM

Share

ಮುಂಬೈ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕಳೆದ ವಾರ ನಾಲ್ವರು ರೈತರನ್ನು ಹತ್ಯೆ ಮಾಡಲಾಗಿತ್ತು. ಇದಾದ ಬಳಿಕ ನಡೆದ ಹಿಂಸಾಚಾರದಲ್ಲಿ ಇನ್ನೂ ನಾಲ್ವರು ಸಾವನ್ನಪ್ಪಿದ್ದರು. ರೈತರ ಮೇಲೆ ನಡೆದ ಈ ದಾಳಿಯನ್ನು ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್​ಗೆ ಕರೆ ನೀಡಲಾಗಿದೆ. ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಇಂದು ಮಹಾರಾಷ್ಟ್ರದಲ್ಲಿ ಸಂಪೂರ್ಣ ಬಂದ್​ ಘೋಷಿಸಿದೆ. ಇಲ್ಲಿನ ಅಂಗಡಿಗಳು, ಶಾಲಾ ಕಾಲೇಜುಗಳು ಬಂದ್ ಆಗಿದ್ದು, ಹಲವು ಸಂಘಟನೆಗಳು ಕೂಡ ಬಂದ್​ಗೆ ಬೆಂಬಲ ನೀಡಿವೆ.

ಮಹಾರಾಷ್ಟ್ರದ ಶಿವಸೇನೆ, ಕಾಂಗ್ರೆಸ್, ಎನ್​ಸಿಪಿಯನ್ನೊಳಗೊಂಡ ಮಹಾ ವಿಕಾಸ್ ಅಘಾಡಿ ಸರ್ಕಾರ ಬಂದ್​ಗೆ ಕರೆ ನೀಡಿದ್ದು, ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಮೆಡಿಕಲ್ ಶಾಪ್, ಹಾಲಿನ ಅಂಗಡಿ ಸೇರಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿ, ಮಾರುಕಟ್ಟೆಯನ್ನು ಮುಚ್ಚಲಾಗಿದೆ. ಬಂದ್​ನಿಂದ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಸರ್ಕಾರದಿಂದ 500 ಗೃಹ ರಕ್ಷಕ ದಳ, 3 ಎಸ್​ಆರ್​ಪಿಎಫ್ ತಂಡ ಮತ್ತು 700 ಇತರೆ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.

ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಮಹಾರಾಷ್ಟ್ರದಲ್ಲಿ ಬಂದ್ ಘೋಷಿಸಲಾಗಿದ್ದು, ಇಂದು ಸಂಜೆಯವರೆಗೂ ಮಹಾರಾಷ್ಟ್ರ ಬಹುತೇಕ ಸ್ತಬ್ಧವಾಗಲಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಬಂದ್​ ಜಾರಿಯಲ್ಲಿದ್ದು, ಪುಣೆ, ಘಟಕೋಪರ್, ಮಹೀಂ ಮುಂತಾದೆಡೆ ಅಂಗಡಿಗಳನ್ನು ಮುಚ್ಚಲಾಗಿದೆ. ಸ್ಥಳೀಯ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಕೆಲವೇ ಕೆಲವು ರೈಲುಗಳು ಮಾತ್ರ ಸಂಚರಿಸುತ್ತಿವೆ. ಮಹಾರಾಷ್ಟ್ರದ 2000ಕ್ಕೂ ಹೆಚ್ಚು ಹಣ್ಣು, ತರಕಾರಿ, ಹೂವು ಮಾರಾಟಗಾರರು ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಒತ್ತಾಯಪೂರ್ವಕವಾಗಿ ಅಂಗಡಿಗಳನ್ನು ಬಂದ್ ಮಾಡಿಸಬಾರದು ಎಂದು ಶಿವಸೇನೆ ಸರ್ಕಾರಕ್ಕೆ ಬಿಜೆಪಿ ಎಚ್ಚರಿಕೆ ನೀಡಿದೆ. ಒಂದುವೇಳೆ ಒತ್ತಾಯದಿಂದ ಅಂಗಡಿಗಳನ್ನು ಮುಚ್ಚಿಸಿದರೆ ಬಿಜೆಪಿ ಕಾರ್ಯಕರ್ತರು ಸುಮ್ಮನಿರುವುದಿಲ್ಲ ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಟ್ವೀಟ್​ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Lakhimpur Kheri ಲಖಿಂಪುರ್ ಘಟನೆಯನ್ನು ಹಿಂದೂ- ಸಿಖ್ ನಡುವಿನ ಕದನ ಮಾಡಲು ಪ್ರಯತ್ನ ನಡೆಯುತ್ತಿದೆ: ವರುಣ್ ಗಾಂಧಿ

ಲಖಿಂಪುರ ಖೇರಿ ಹಿಂಸಾಚಾರ ವಿರೋಧಿಸಿ ಸರಣಿ ಆಂದೋಲನಕ್ಕೆ ಮುಂದಾದ ರೈತರು; ಅ.18ರಂದು ರೈಲು ತಡೆ ಚಳವಳಿ

Published On - 9:57 am, Mon, 11 October 21

Follow Us
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ