AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Bandh: ಲಖಿಂಪುರ ಖೇರಿಯ ರೈತರ ಹತ್ಯೆ ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್

ಮಹಾರಾಷ್ಟ್ರದ ಶಿವಸೇನೆ, ಕಾಂಗ್ರೆಸ್, ಎನ್​ಸಿಪಿಯನ್ನೊಳಗೊಂಡ ಮಹಾ ವಿಕಾಸ್ ಅಘಾಡಿ ಸರ್ಕಾರ ಬಂದ್​ಗೆ ಕರೆ ನೀಡಿದ್ದು, ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ.

Maharashtra Bandh: ಲಖಿಂಪುರ ಖೇರಿಯ ರೈತರ ಹತ್ಯೆ ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್
ಮಹಾರಾಷ್ಟ್ರ ಬಂದ್
TV9 Web
| Edited By: |

Updated on:Oct 11, 2021 | 10:07 AM

Share

ಮುಂಬೈ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕಳೆದ ವಾರ ನಾಲ್ವರು ರೈತರನ್ನು ಹತ್ಯೆ ಮಾಡಲಾಗಿತ್ತು. ಇದಾದ ಬಳಿಕ ನಡೆದ ಹಿಂಸಾಚಾರದಲ್ಲಿ ಇನ್ನೂ ನಾಲ್ವರು ಸಾವನ್ನಪ್ಪಿದ್ದರು. ರೈತರ ಮೇಲೆ ನಡೆದ ಈ ದಾಳಿಯನ್ನು ವಿರೋಧಿಸಿ ಇಂದು ಮಹಾರಾಷ್ಟ್ರ ಬಂದ್​ಗೆ ಕರೆ ನೀಡಲಾಗಿದೆ. ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಇಂದು ಮಹಾರಾಷ್ಟ್ರದಲ್ಲಿ ಸಂಪೂರ್ಣ ಬಂದ್​ ಘೋಷಿಸಿದೆ. ಇಲ್ಲಿನ ಅಂಗಡಿಗಳು, ಶಾಲಾ ಕಾಲೇಜುಗಳು ಬಂದ್ ಆಗಿದ್ದು, ಹಲವು ಸಂಘಟನೆಗಳು ಕೂಡ ಬಂದ್​ಗೆ ಬೆಂಬಲ ನೀಡಿವೆ.

ಮಹಾರಾಷ್ಟ್ರದ ಶಿವಸೇನೆ, ಕಾಂಗ್ರೆಸ್, ಎನ್​ಸಿಪಿಯನ್ನೊಳಗೊಂಡ ಮಹಾ ವಿಕಾಸ್ ಅಘಾಡಿ ಸರ್ಕಾರ ಬಂದ್​ಗೆ ಕರೆ ನೀಡಿದ್ದು, ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಮೆಡಿಕಲ್ ಶಾಪ್, ಹಾಲಿನ ಅಂಗಡಿ ಸೇರಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿ, ಮಾರುಕಟ್ಟೆಯನ್ನು ಮುಚ್ಚಲಾಗಿದೆ. ಬಂದ್​ನಿಂದ ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಸರ್ಕಾರದಿಂದ 500 ಗೃಹ ರಕ್ಷಕ ದಳ, 3 ಎಸ್​ಆರ್​ಪಿಎಫ್ ತಂಡ ಮತ್ತು 700 ಇತರೆ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.

ರೈತರ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಮಹಾರಾಷ್ಟ್ರದಲ್ಲಿ ಬಂದ್ ಘೋಷಿಸಲಾಗಿದ್ದು, ಇಂದು ಸಂಜೆಯವರೆಗೂ ಮಹಾರಾಷ್ಟ್ರ ಬಹುತೇಕ ಸ್ತಬ್ಧವಾಗಲಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಬಂದ್​ ಜಾರಿಯಲ್ಲಿದ್ದು, ಪುಣೆ, ಘಟಕೋಪರ್, ಮಹೀಂ ಮುಂತಾದೆಡೆ ಅಂಗಡಿಗಳನ್ನು ಮುಚ್ಚಲಾಗಿದೆ. ಸ್ಥಳೀಯ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಕೆಲವೇ ಕೆಲವು ರೈಲುಗಳು ಮಾತ್ರ ಸಂಚರಿಸುತ್ತಿವೆ. ಮಹಾರಾಷ್ಟ್ರದ 2000ಕ್ಕೂ ಹೆಚ್ಚು ಹಣ್ಣು, ತರಕಾರಿ, ಹೂವು ಮಾರಾಟಗಾರರು ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಒತ್ತಾಯಪೂರ್ವಕವಾಗಿ ಅಂಗಡಿಗಳನ್ನು ಬಂದ್ ಮಾಡಿಸಬಾರದು ಎಂದು ಶಿವಸೇನೆ ಸರ್ಕಾರಕ್ಕೆ ಬಿಜೆಪಿ ಎಚ್ಚರಿಕೆ ನೀಡಿದೆ. ಒಂದುವೇಳೆ ಒತ್ತಾಯದಿಂದ ಅಂಗಡಿಗಳನ್ನು ಮುಚ್ಚಿಸಿದರೆ ಬಿಜೆಪಿ ಕಾರ್ಯಕರ್ತರು ಸುಮ್ಮನಿರುವುದಿಲ್ಲ ಎಂದು ಬಿಜೆಪಿ ಶಾಸಕ ನಿತೇಶ್ ರಾಣೆ ಟ್ವೀಟ್​ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Lakhimpur Kheri ಲಖಿಂಪುರ್ ಘಟನೆಯನ್ನು ಹಿಂದೂ- ಸಿಖ್ ನಡುವಿನ ಕದನ ಮಾಡಲು ಪ್ರಯತ್ನ ನಡೆಯುತ್ತಿದೆ: ವರುಣ್ ಗಾಂಧಿ

ಲಖಿಂಪುರ ಖೇರಿ ಹಿಂಸಾಚಾರ ವಿರೋಧಿಸಿ ಸರಣಿ ಆಂದೋಲನಕ್ಕೆ ಮುಂದಾದ ರೈತರು; ಅ.18ರಂದು ರೈಲು ತಡೆ ಚಳವಳಿ

Published On - 9:57 am, Mon, 11 October 21

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ