AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಸರ್ಕಾರಿ ಬಸ್​ಗಳಲ್ಲಿ ಹಿರಿಯ ನಾಗರಿಕರು, ಮಹಿಳೆಯರಿಗೆ ನೀಡುತ್ತಿರುವ ರಿಯಾಯಿತಿ ರದ್ದಾಗುತ್ತಾ?

ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರವು ಚುನಾವಣೆಗೆ ಮುನ್ನ ಘೋಷಿಸಿದ್ದ ಯೋಜನೆಗಳು ಸರ್ಕಾರದ ಹಣಕಾಸಿನ ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತಿವೆ. ಸಾರಿಗೆಯಲ್ಲಿ ಮಹಿಳೆಯರಿಗೆ ಅರ್ಧದಷ್ಟು ಹಾಗೂ ಹಿರಿಯನಾಗರಿಗೆ ಉಚಿತ ಪ್ರಯಾಣ ಅವಕಾಶ ಕಲ್ಪಿಸಿರುವುದರಿಂದ ಸಾರಿಗೆ ನಿಗಮಕ್ಕೆ 3 ಕೋಟಿ ರೂ. ನಷ್ಟವಾಗಿದೆ ಎಂದು ಸಚಿವ ಪ್ರತಾಪ್ ಸರ್ನಾಯಕ್ ಹೇಳಿದ್ದಾರೆ.

ಮಹಾರಾಷ್ಟ್ರದ ಸರ್ಕಾರಿ ಬಸ್​ಗಳಲ್ಲಿ ಹಿರಿಯ ನಾಗರಿಕರು, ಮಹಿಳೆಯರಿಗೆ ನೀಡುತ್ತಿರುವ ರಿಯಾಯಿತಿ ರದ್ದಾಗುತ್ತಾ?
ಮಹಾರಾಷ್ಟ್ರImage Credit source: India Today
ನಯನಾ ರಾಜೀವ್
|

Updated on: Feb 23, 2025 | 12:29 PM

Share

ಮುಂಬೈ, ಫೆಬ್ರವರಿ 23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ, ಮಹಾಮೈತ್ರಿಕೂಟ ಸರ್ಕಾರವು ಹಲವಾರು ಯೋಜನೆಗಳನ್ನು ಪ್ರಾರಂಭಿಸಿತು. ಹಲವಾರು ಸಾರ್ವಜನಿಕ ಘೋಷಣೆಗಳನ್ನು ಮಾಡಲಾಯಿತು. ಇದಾದ ನಂತರ ಕೆಲವು ಯೋಜನೆಗಳನ್ನು ಮುಂದೂಡಲಾಯಿತು. ಮಹಾರಾಷ್ಟ್ರ ಸರ್ಕಾರದ ಮಹಿಳಾ ಸಮ್ಮಾನ್ ಯೋಜನೆಯಿಂದ ಸಾರಿಗೆ ನಿಗಮಕ್ಕೆ ನಿತ್ಯ 3 ಕೋಟಿ ರೂ. ನಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ, ಎಸ್‌ಟಿ ಬಸ್‌ಗಳಲ್ಲಿ ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ರಿಯಾಯಿತಿಗಳನ್ನು ರದ್ದುಗೊಳಿಸುವ ಬಗ್ಗೆ ಚರ್ಚೆ ಪ್ರಾರಂಭವಾಗಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್, ಸರ್ಕಾರಿ ಬಸ್‌ಗಳಿಂದ ಆಗುತ್ತಿರುವ ನಷ್ಟದ ಬಗ್ಗೆ ಪ್ರಸ್ತಾಪಿಸಿದರು. ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ನೀಡಲಾಗುವ ರಿಯಾಯಿತಿಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಪಷ್ಟಪಡಿಸಿದ್ದಾರೆ.

ಎಸ್‌ಟಿ ಕಾರ್ಪೊರೇಷನ್‌ನ ಎಲ್ಲಾ ಬಸ್‌ಗಳಲ್ಲಿ ರಿಯಾಯಿತಿ ನೀಡಲಾಯಿತು. ಈಗ ನಮ್ಮ ಸಹೋದರಿಯರಿಗೆ ಶೇಕಡಾ 50 ರಷ್ಟು ರಿಯಾಯಿತಿ ಸಿಗುತ್ತಿದೆ, ಜೊತೆಗೆ ಹಿರಿಯ ನಾಗರಿಕರಿಗೆ ಬಸ್‌ಗಳಲ್ಲಿ ವಾರ್ಷಿಕ ರಿಯಾಯಿತಿಯೂ ಸಿಗುತ್ತಿದೆ. ಈ ರಿಯಾಯಿತಿಗಳಿಂದಾಗಿ ಎಸ್‌ಟಿ ಬಸ್‌ಗಳು ಪ್ರತಿದಿನ 3 ಕೋಟಿ ರೂ. ನಷ್ಟ ಅನುಭವಿಸುತ್ತಿವೆ.

ಮತ್ತಷ್ಟು ಓದಿ: ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಮಹಾರಾಷ್ಟ್ರ-ಕರ್ನಾಟಕ ನಡುವೆ ಬಸ್​ ಸೇವೆ ಸ್ಥಗಿತ

ನಾವು ಎಲ್ಲರಿಗೂ ರಿಯಾಯಿತಿಗಳನ್ನು ನೀಡುತ್ತಲೇ ಇದ್ದರೆ, ಎಸ್‌ಟಿ ನಿಗಮವನ್ನು ನಡೆಸುವುದು ಕಷ್ಟಕರವಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಹಾಗಾಗಿ ಈಗ ಅದರ ಬಗ್ಗೆ ಯೋಚಿಸಲು ಸಾಧ್ಯವಿಲ್ಲ ಎಂದು ಪ್ರತಾಪ್ ಸರ್ನಾಯಕ್ ಹೇಳಿದ್ದರು. ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದ ಅದ್ಭುತ ಗೆಲುವಿಗೆ ಈ ಯೋಜನಗಳೂ ಕೂಡ ಕಾರಣ ಎಂಬುದು ಸತ್ಯ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ