AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Cabinet: ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ; ಬೆಳಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ

Maharashtra News: ನೂತನ ಸಚಿವ ಸಂಪುಟದಲ್ಲಿ 14 ಹೊಸ ಸಚಿವರು ಸೇರ್ಪಡೆಯಾಗಲಿದ್ದಾರೆ, ಬಿಜೆಪಿ ಮತ್ತು ಶಿವಸೇನೆಯ ತಲಾ 7 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗುವುದು ಎನ್ನಲಾಗಿದೆ.

Maharashtra Cabinet: ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ; ಬೆಳಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ
ಏಕನಾಥ್ ಶಿಂಧೆ
TV9 Web
| Updated By: ಸುಷ್ಮಾ ಚಕ್ರೆ|

Updated on:Aug 09, 2022 | 8:15 AM

Share

ಮುಂಬೈ: ಏಕನಾಥ್ ಶಿಂಧೆ (Eknath Shinde) ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ತಿಂಗಳ ನಂತರ ಇಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ನೂತನ ಸಚಿವ ಸಂಪುಟದಲ್ಲಿ 14 ಹೊಸ ಸಚಿವರು ಸೇರ್ಪಡೆಯಾಗಲಿದ್ದಾರೆ, ಬಿಜೆಪಿ ಮತ್ತು ಶಿವಸೇನೆಯ ತಲಾ 7 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗುವುದು ಎನ್ನಲಾಗಿದೆ. ಗಮನಾರ್ಹವಾಗಿ, ಸಿಎಂ ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದ ಮಹಾವಿಕಾಸ್ ಅಘಾಡಿ ಸರ್ಕಾರದಲ್ಲಿ ಸಚಿವರಾಗಿದ್ದ ಶಿವಸೇನೆಯ (Shiv Sena) ಏಕನಾಥ್ ಶಿಂಧೆ ಬಣದವರು ಕೂಡ ಇಂದು ಕ್ಯಾಬಿನೆಟ್‌ಗೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ. ಇಂದು ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಏಕನಾಥ್ ಶಿಂಧೆ ಸರ್ಕಾರದ ನೂತನ ಸಚಿವರಾಗಿ ಉದಯ್ ಸಾಮಂತ್, ಸಂದೀಪನ್ ಬುಮ್ರೆ, ದಾದಾ ಭೂಸೆ, ಗುಲಾಬ್ರಾವ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಸೇರಿದಂತೆ ಮಾಜಿ ಸಚಿವರು ಹೊಸ ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ. ಬಂಡಾಯದ ಸಂದರ್ಭದಲ್ಲಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸಿದ್ದ ಮಾಜಿ ಸಚಿವ ಪ್ರಹಾರ್ ಜನಶಕ್ತಿ ಪಕ್ಷದ ಮತ್ತೊಬ್ಬ ಮಾಜಿ ಸಚಿವ ಓಂಪ್ರಕಾಶ್ ಕಾಡು ಕೂಡ ಹೊಸ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ಇಂದು ಬೆಳಗ್ಗೆ ಮಹಾರಾಷ್ಟ್ರ ಸರ್ಕಾರದ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಶಿವಸೇನೆಯ ಏಕನಾಥ್ ಶಿಂಧೆ ಬಣದ ಶಾಸಕರು ಸಭೆ ಸೇರಲಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಷಯದ ಬಗ್ಗೆ ಮುಖ್ಯಮಂತ್ರಿಯಿಂದ ಯಾವುದೇ ಮಾಹಿತಿ ಬಂದಿಲ್ಲ. ಇಂದಿನ ಸಭೆಯ ನಂತರ ಹೆಚ್ಚಿನ ಸ್ಪಷ್ಟತೆ ಸಿಗಲಿದೆ.

ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಶಾಸಕರ ಹೆಸರನ್ನು ಸೋಮವಾರ ರಾತ್ರಿ ಅಥವಾ ಮಂಗಳವಾರದೊಳಗೆ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಸಂಜೆ ನಾಂದೇಡ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದರು.

ಉದ್ಧವ್ ಠಾಕ್ರೆ ವಿರುದ್ಧ ದಂಗೆದ್ದು ಗೋವಾಗೆ ತೆರಳಿದ್ದ ಶಿವಸೇನೆಯ ಬಂಡಾಯ ಶಾಸಕರಿಂದಾಗಿ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಬೇಕಾಯಿತು. ನಂತರ ಬಿಜೆಪಿಯ ಬೆಂಬಲದಿಂದ ಬಂಡಾಯ ಶಾಸಕರ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಹೆಚ್ಚು ಶಾಸಕ ಸ್ಥಾನವಿದ್ದರೂ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸಿಎಂ ಸ್ಥಾನವನ್ನು ಶಿವಸೇನೆಗೆ ಬಿಟ್ಟುಕೊಟ್ಟು ತಾವು ಉಪಮುಖ್ಯಮಂತ್ರಿ ಸ್ಥಾನ ಪಡೆದರು. ಸದ್ಯಕ್ಕೆ ಮಹಾರಾಷ್ಟ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಬಿಟ್ಟರೆ ಬೇರಾವ ಸಚಿವರೂ ಇಲ್ಲ. ನೂತನ ಸರ್ಕಾರ ರಚನೆಯಾಗಿ 1 ತಿಂಗಳಾಗಿರುವುದರಿಂದ ಇಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Tue, 9 August 22

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ