ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ, ಗೃಹ ಖಾತೆ ಬಿಜೆಪಿಯೇ ಉಳಿಸಿಕೊಳ್ಳುವ ಸಾಧ್ಯತೆ

Maharashtra Cabinet Expansion:ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ತಮ್ಮ ಸಂಪುಟವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ ಮತ್ತು ಕಂದಾಯ ಖಾತೆಗಳನ್ನು ಉಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಪಕ್ಷವು ಶಿವಸೇನೆಗೆ ನಗರಾಭಿವೃದ್ಧಿ ಖಾತೆಯನ್ನು ಹಂಚಬಹುದು ಮತ್ತು ಹಣಕಾಸು ಖಾತೆಯನ್ನು ಉಳಿಸಿಕೊಳ್ಳಬಹುದು.  ಫಡ್ನವಿಸ್ ಡಿಸೆಂಬರ್ 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಇಬ್ಬರೂ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ, ಗೃಹ ಖಾತೆ ಬಿಜೆಪಿಯೇ ಉಳಿಸಿಕೊಳ್ಳುವ ಸಾಧ್ಯತೆ
ದೇವೇಂದ್ರ ಫಡ್ನವಿಸ, ಅಜಿತ್ ಪವಾರ್, ಏಕನಾಥ್ ಶಿಂಧೆ
Image Credit source: Mint

Updated on: Dec 15, 2024 | 9:27 AM

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ತಮ್ಮ ಸಂಪುಟವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ ಮತ್ತು ಕಂದಾಯ ಖಾತೆಗಳನ್ನು ಉಳಿಸಿಕೊಳ್ಳಬಹುದು ಎಂದು ಹೇಳಲಾಗುತ್ತಿದೆ.
ಪಕ್ಷವು ಶಿವಸೇನೆಗೆ ನಗರಾಭಿವೃದ್ಧಿ ಖಾತೆಯನ್ನು ಹಂಚಬಹುದು ಮತ್ತು ಹಣಕಾಸು ಖಾತೆಯನ್ನು ಉಳಿಸಿಕೊಳ್ಳಬಹುದು.  ಫಡ್ನವಿಸ್ ಡಿಸೆಂಬರ್ 5 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಇಬ್ಬರೂ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಸೋಮವಾರದಿಂದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದ ಮುನ್ನಾದಿನದಂದು ನಾಗ್ಪುರದಲ್ಲಿ ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇದಕ್ಕೂ ಮುನ್ನ ದೇವೇಂದ್ರ ಫಡ್ನವಿಸ್ ಮತ್ತು ಏಕನಾಥ್ ಶಿಂಧೆ ನಡುವೆ ಸಭೆ ನಡೆದಿದ್ದು, ಸಚಿವ ಸಂಪುಟ ವಿಸ್ತರಣೆ ಕುರಿತು ಇಬ್ಬರೂ ಮಹಾಯುತಿ ನಾಯಕರು ಚರ್ಚಿಸಿದ್ದಾರೆ.

43 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ 
ಟಿವಿ9 ನೆಟ್‌ವರ್ಕ್ ಮೂಲಗಳ ಪ್ರಕಾರ, 43 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಚಂದ್ರಶೇಖರ್ ಬಾವಂಕುಳೆ, ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗಂತಿವಾರ್, ಗಿರೀಶ್ ಮಹಾಜನ್, ರವೀಂದ್ರ ಚವ್ಹಾಣ್, ಪ್ರವೀಣ್ ದಾರೇಕರ್, ಮಂಗಲ್ ಪ್ರಭಾತ್ ಲೋಧಾ, ಬಾಬನರಾವ್ ಲೋನಿಕರ್, ಪಂಕಜಾ ಮುಂಡೆ, ಆಶಿಶ್ ಶೇಲಾರ್ ಅಥವಾ ಯೋಗೇಶ್ ಸಾಗರ್ ಅವರಿಗೆ ಅವಕಾಶ ಸಿಗಬಹುದು.

ಮತ್ತಷ್ಟು ಓದಿ: ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಸೂತ್ರ, ಯಾರಿಗೆ ಯಾವ ಖಾತೆ ಸಿಗಬಹುದು?

ಸಂಭಾಜಿ ನಿಲಂಗೇಕರ್, ಜಯಕುಮಾರ್ ರಾವಲ್, ಶಿವೇಂದ್ರರಾಜೇ ಭೋಸಲೆ, ನಿತೇಶ್ ರಾಣೆ, ವಿಜಯಕುಮಾರ್ ಗವಿತ್, ದೇವಯಾನಿ ಫರಾಂಡೆ ಅಥವಾ ರಾಹುಲ್ ಅಹೆರ್, ರಾಹುಲ್ ಕುಲ್, ಮಾಧುರಿ ಮಿಸಾಲ್, ಸಂಜಯ್ ಕುಟೆ ಮತ್ತು ಗೋಪಿಚಂದ್ ಪಡಲ್ಕರ್ ಅವರಿಗೆ ಸಚಿವ ಸ್ಥಾನ ನೀಡಬಹುದು ಎಂದು ಹೇಳಲಾಗುತ್ತಿದೆ.

ನವೆಂಬರ್ 20 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶವು ನವೆಂಬರ್ 23 ರಂದು ಪ್ರಕಟವಾಯಿತು.
ರಾಜ್ಯದಲ್ಲಿ 288 ಸ್ಥಾನಗಳ ಪೈಕಿ 230 ಸ್ಥಾನಗಳನ್ನು ಗೆದ್ದು ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬಂದಿದೆ. ಮಹಾಮೈತ್ರಿಕೂಟದ ಭಾಗವಾಗಿದ್ದ ಬಿಜೆಪಿ 132 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 57 ಸ್ಥಾನಗಳನ್ನು ಗೆದ್ದಿದ್ದರೆ, ಅಜಿತ್ ಪವಾರ್ ಅವರ ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us