AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಇನ್ನು 6 ತಿಂಗಳು ಮಾಸ್ಕ್ ಕಡ್ಡಾಯ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ರೋಗ ಬರುವ ಮುನ್ನವೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ. ಕನಿಷ್ಠ 6 ತಿಂಗಳುಗಳವರೆಗೆ ಸಾರ್ವಜನಿಕ ಪ್ರದೇಶಗಳಲ್ಲಿ ವ್ಯವಹರಿಸುವಾಗ ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದ್ದಾರೆ ಉದ್ಧವ್ ಠಾಕ್ರೆ

ಮಹಾರಾಷ್ಟ್ರದಲ್ಲಿ ಇನ್ನು 6 ತಿಂಗಳು ಮಾಸ್ಕ್ ಕಡ್ಡಾಯ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಉದ್ದವ್​ ಠಾಕ್ರೆ
ರಶ್ಮಿ ಕಲ್ಲಕಟ್ಟ
| Edited By: |

Updated on: Dec 20, 2020 | 3:50 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಮುಂದಿನ 6 ತಿಂಗಳುಗಳವರೆಗೆ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಭಾನುವಾರ ಆರೆ ಮೆಟ್ರೊ ಕಾರ್ ಶೆಡ್ ಯೋಜನೆ ಮತ್ತು ಕೋವಿಡ್-19 ಪ್ರಕರಣಗಳ ಬಗ್ಗೆ ಮಾತನಾಡಿದ ಅವರು ತಜ್ಞರು ಲಾಕ್ ಡೌನ್ ಅಥವಾ ರಾತ್ರಿ ಕರ್ಫ್ಯೂ ಹೇರಿಕೆಗೆ ಸಹಮತ ಸೂಚಿಸಿದ್ದಾರೆ. ಆದರೆ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಅಲ್ಲದೇ ಇದ್ದರೂ ಕೋವಿಡ್ ನಿಯಂತ್ರಣದಲ್ಲಿರುವ ಕಾರಣ ಈ ರೀತಿಯ ನಿರ್ಬಂಧಗಳು ಬೇಡ ಎಂಬುದು ನನ್ನ ಅಭಿಪ್ರಾಯ ಎಂದಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿವೆ. ಶನಿವಾರ ಮಹಾರಾಷ್ಟ್ರದಲ್ಲಿ 3,940 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಒಂದೇ ದಿನ 74 ಸಾವು ಸಂಭವಿಸಿದೆ

ಜನವರಿಫೆಬ್ರುವರಿ ತಿಂಗಳಲ್ಲಿ ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಯಾವುದೇ ಕಾರಣಕ್ಕೂ ಕೋವಿಡ್ ವಿರುದ್ಧದ ಹೋರಾಟವನ್ನು ಕಡಿಮೆ ಮಾಡಬೇಡಿ ಎಂದು ಸರ್ಕಾರ ಆಡಳಿತ ಸಂಸ್ಥೆಗಳಿಗೆ ಸುತ್ತೋಲೆ ಕಳುಹಿಸಿತ್ತು. ಆದಾಗ್ಯೂ, ಬ್ರಿಟನ್ ಮತ್ತು ಇತರ ಐರೋಪ್ಯ ರಾಷ್ಟ್ರಗಳಲ್ಲಿ ಎರಡನೇ ಅಲೆ ಬಂದಿದ್ದರೂ ಭಾರತಕ್ಕೆ ಕೋವಿಡ್ 2ನೇ ಅಲೆ ಬರುವ ಸಾಧ್ಯತೆ ಇಲ್ಲ ಎಂದು ತಜ್ಞರು ಹೇಳಿದ್ದಾರೆ.

ರೋಗ ಬರುವ ಮುನ್ನವೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ. ಕನಿಷ್ಠ 6 ತಿಂಗಳುಗಳವರೆಗೆ ಸಾರ್ವಜನಿಕ ಪ್ರದೇಶಗಳಲ್ಲಿ ವ್ಯವಹರಿಸುವಾಗ ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದ್ದಾರೆ ಠಾಕ್ರೆ.

ನವೆಂಬರ್ 28ರಂದು ರಾಜ್ಯ ಸರ್ಕಾರ ಒಂದು ವರ್ಷ ಪೂರ್ತಿಗೊಳಿಸಿತ್ತು. ನಮ್ಮ ಸರ್ಕಾರ ಪತನ ಆಗುತ್ತದೆ ಎಂದು ತುಂಬಾ ಜನರು ಅಂದುಕೊಂಡಿದ್ದರು. ಆದರೆ ಸರ್ಕಾರ ಒಂದು ವರ್ಷ ಪೂರ್ಣಗೊಳಿಸುವುದರ ಜತೆಗೆ ಹಲವಾರು ಸಂದಿಗ್ಧ ಪರಿಸ್ಥಿತಿಗಳನ್ನೂ ಎದುರಿಸಿದೆ ಎಂದು ಠಾಕ್ರೆ ಹೇಳಿದ್ದಾರೆ.

ಕೊರೊನಾ ಲಸಿಕೆ ಸ್ವೀಕರಿಸಲು ಮುಸ್ಲಿಂ ಮುಖಂಡರ ಹಿಂದೇಟು: ಶುರುವಾಗಿದೆ ವಿಜ್ಞಾನ-ಧಾರ್ಮಿಕ ಜಿಜ್ಞಾಸೆ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್