ಮಹಾರಾಷ್ಟ್ರ: ಸಿಎಂ ಫಡ್ನವಿಸ್ ಕಚೇರಿಗೆ ಬಾಂಬ್ ಇಡುವುದಾಗಿ ಪಾಕಿಸ್ತಾನಿ ನಂಬರ್​ನಿಂದ ಬಂತು ಕರೆ

ಮಹಾರಾಷ್ಟ್ರ ಮಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಪಾಕಿಸ್ತಾನಿ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪಾಕಿಸ್ತಾನದ ಸಂಖ್ಯೆಯಿಂದ ವರ್ಲಿ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಸಂದೇಶ ಕಳುಹಿಸಲಾಗಿದ್ದು, ಇದು ಗಂಭೀರ ಭದ್ರತಾ ಕಳವಳ ಹುಟ್ಟುಹಾಕಿದೆ.

ಮಹಾರಾಷ್ಟ್ರ: ಸಿಎಂ ಫಡ್ನವಿಸ್ ಕಚೇರಿಗೆ ಬಾಂಬ್ ಇಡುವುದಾಗಿ ಪಾಕಿಸ್ತಾನಿ ನಂಬರ್​ನಿಂದ ಬಂತು ಕರೆ
ದೇವೇಂದ್ರ ಫಡ್ನವಿಸ್
Image Credit source: Oneindia

Updated on: Feb 28, 2025 | 11:45 AM

ಮಹಾರಾಷ್ಟ್ರ, ಫೆಬ್ರವರಿ 28: ಮಹಾರಾಷ್ಟ್ರ ಮಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Devendra Fadnavis)​ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಪಾಕಿಸ್ತಾನಿ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪಾಕಿಸ್ತಾನದ ಸಂಖ್ಯೆಯಿಂದ ವರ್ಲಿ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಸಂದೇಶ ಕಳುಹಿಸಲಾಗಿದ್ದು, ಇದು ಗಂಭೀರ ಭದ್ರತಾ ಕಳವಳ ಹುಟ್ಟುಹಾಕಿದೆ.

ಮುಂಬೈ ಪೊಲೀಸರು ತ್ವರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ, ಸಂದೇಶದ ಮೂಲವನ್ನು ಪತ್ತೆಹಚ್ಚಲು ಮತ್ತು ಅದರ ವಿಶ್ವಾಸಾರ್ಹತೆಯನ್ನು ನಿರ್ಧರಿಸಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಸಿಎಂಒ ಮತ್ತು ಇತರ ಪ್ರಮುಖ ಸರ್ಕಾರಿ ಕಟ್ಟಡಗಳ ಸುತ್ತಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ತನಿಖೆ ಮುಂದುವರೆದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಮತ್ತಷ್ಟು ಓದಿ:  Schools Bomb Threat:ದೆಹಲಿ, ನೋಯ್ಡಾ ಶಾಲೆಗಳಿಗೆ ಬಾಂಬ್ ಬೆದರಿಕೆ

ಮುಂಬೈ ಸಂಚಾರ ಪೊಲೀಸರಿಗೆ ಪಾಕಿಸ್ತಾನಿ ಸಂಖ್ಯೆಯಿಂದ ವಾಟ್ಸಾಪ್‌ನಲ್ಲಿ ಈ ಬೆದರಿಕೆ ಸಂದೇಶ ಬಂದಿದೆ. ಬುಧವಾರ ಮಧ್ಯಾಹ್ನ ಸಂದೇಶ ಬಂದ ನಂತರ, ಪೊಲೀಸ್ ತನಿಖೆಯನ್ನು ಕಟ್ಟೆಚ್ಚರಗೊಳಿಸಲಾಯಿತು. ಸಂದೇಶ ಕಳುಹಿಸಿದ ವ್ಯಕ್ತಿ ತನ್ನ ಹೆಸರನ್ನು ಮಲಿಕ್ ಶಹಬಾಜ್ ಹುಮಾಯೂನ್ ರಾಜಾ ದೇವ್ ಎಂದು ಹೇಳಿದ್ದಾನೆ. ಸಂದೇಶ ಕಳುಹಿಸುತ್ತಿರುವ ವ್ಯಕ್ತಿ ಭಾರತದಿಂದ ಬಂದವನೋ ಅಥವಾ ಹೊರಗಿನಿಂದ ಬಂದವನೋ ಎಂದು ಕಂಡುಹಿಡಿಯಲು ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಳೆದ ವಾರ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಬಾಂಬ್ ಬೆದರಿಕೆ ಬಂದಿತ್ತು. ಶಿಂಧೆ ಅವರ ವಾಹನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕುವ ಈ ಇಮೇಲ್ ಅನ್ನು ಗೋರೆಗಾಂವ್ ಮತ್ತು ಜೆಜೆ ಮಾರ್ಗ್ ಪೊಲೀಸ್ ಠಾಣೆಗಳು, ಸಿಎಂಒ ಮತ್ತು ಸಚಿವಾಲಯ ಸೇರಿದಂತೆ ಹಲವಾರು ಅಧಿಕೃತ ಖಾತೆಗಳಿಗೆ ಕಳುಹಿಸಲಾಗಿದೆ.

ಆಗಸ್ಟ್ 20, 2022 ರಂದು ಕೂಡ ಪಾಕಿಸ್ತಾನಿ ಸಂಖ್ಯೆಯಿಂದ ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಆ ಸಮಯದಲ್ಲಿ ಕರೆ ಮಾಡಿದ ವ್ಯಕ್ತಿ ಮುಂಬೈನಲ್ಲಿ 26/11 ರಂತಹ ದಾಳಿಯ ಬೆದರಿಕೆ ಹಾಕಿದ್ದ. ಮೂರು ವರ್ಷಗಳ ಹಿಂದೆಯೂ ಮುಂಬೈ ಸಂಚಾರ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಒಂದು ಸಂದೇಶ ಬಂದಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us