AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ನಿಲುವು ಖಂಡಿಸಿ ಗಡಿ ಬಗ್ಗೆ ನಿರ್ಣಯ ಮಂಡಿಸಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ

Karnataka Maharashtra Border Row ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ನಿರ್ಣಯವನ್ನು ಕರ್ನಾಟಕ ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿದ ಕೆಲವೇ ದಿನಗಳ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಕರ್ನಾಟಕದ "ಮರಾಠಿ ವಿರೋಧಿ" ನಿಲುವನ್ನು ಖಂಡಿಸಿದ್ದು ರಾಜ್ಯ ವಿಧಾನಸಭೆಯಲ್ಲಿ ಇದೇ ರೀತಿಯ ನಿರ್ಣಯವನ್ನು ಮಂಡಿಸಿದ್ದಾರೆ

ಕರ್ನಾಟಕದ ನಿಲುವು ಖಂಡಿಸಿ ಗಡಿ ಬಗ್ಗೆ ನಿರ್ಣಯ ಮಂಡಿಸಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ
ಅಮಿತ್ ಶಾ ಜತೆ ಏಕನಾಥ್ ಶಿಂಧೆ ಮತ್ತು ಬೊಮ್ಮಾಯಿ
TV9 Web
| Edited By: |

Updated on:Dec 27, 2022 | 2:25 PM

Share

ಮುಂಬೈ: ರಾಜ್ಯದ ಹಿತಾಸಕ್ತಿಗಳನ್ನು ಕಾಪಾಡಲು ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ (Border Row) ನಿರ್ಣಯವನ್ನು ಕರ್ನಾಟಕ (Karnataka) ವಿಧಾನಸಭೆಯು ಸರ್ವಾನುಮತದಿಂದ ಅಂಗೀಕರಿಸಿದ ಕೆಲವೇ ದಿನಗಳ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರು ಕರ್ನಾಟಕದ “ಮರಾಠಿ ವಿರೋಧಿ” ನಿಲುವನ್ನು ಖಂಡಿಸಿದ್ದು ರಾಜ್ಯ ವಿಧಾನಸಭೆಯಲ್ಲಿ ಇದೇ ರೀತಿಯ ನಿರ್ಣಯವನ್ನು ಮಂಡಿಸಿದ್ದಾರೆ. ಇದೂ ಸಹ ಸರ್ವಾನುಮತದಿಂದ ಅಂಗೀಕಾರವಾಗಿದೆ. ಮುಂದಿನ ವರ್ಷ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಧ್ಯಪ್ರವೇಶದ ಹೊರತಾಗಿಯೂ ಬಿಜೆಪಿ ಆಡಳಿತವಿರುವ ಎರಡೂ ರಾಜ್ಯಗಳ ನಡುವಿನ ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳುವ ನಿರೀಕ್ಷೆಯಿದೆ. ಅಲ್ಲಿ ಮರಾಠಿ ಮಾತನಾಡುವ 865 ಗ್ರಾಮಗಳಿವೆ, ಈ ಗ್ರಾಮಗಳ ಇಂಚಿಂಚನ್ನೂ ಬಿಡದೆ ಅವುಗಳನ್ನು ಮಹಾರಾಷ್ಟ್ರಕ್ಕೆ ತರಬೇಕು. ಸುಪ್ರೀಂಕೋರ್ಟ್ ಏನು ಕೇಳುತ್ತದೆಯೋ ಅದನ್ನು ಮಹಾರಾಷ್ಟ್ರ ಸರ್ಕಾರ ಮಾಡುತ್ತದೆ ಎಂದು ನಿರ್ಣಯದಲ್ಲಿ ಹೇಳಿದೆ. ಬೆಳಗಾವಿ, ಕಾರವಾರ, ಬೀದರ್, ನಿಪ್ಪಾಣಿ,ಭಾಲ್ಕಿಯ ಪ್ರತಿಯೊಂದು ಇಂಚನ್ನೂ ಮಹಾರಾಷ್ಟ್ರದ ಭಾಗವನ್ನಾಗಿ ಮಾಡಲಾಗುವುದು ಎಂದು ನಿರ್ಣಯದಲ್ಲಿ ಒತ್ತಿ ಹೇಳಲಾಗಿದೆ.

ಮಹಾರಾಷ್ಟ್ರ ಸೃಷ್ಟಿಸಿರುವ ಗಡಿ ವಿವಾದವನ್ನು ಕರ್ನಾಟಕ ಗುರುವಾರ ಖಂಡಿಸಿತ್ತು. ಕರ್ನಾಟಕದ ಭೂಮಿ, ನೀರು, ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಗೆ ಸಂಬಂಧಿಸಿದಂತೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ.ಕರ್ನಾಟಕದ ಜನತೆ ಮತ್ತು ಸದಸ್ಯರ (ವಿಧಾನಸಭಾ) ಭಾವನೆಗಳು ಕೂಡಾ ಇದೇ ಆಗಿದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ನಾವೆಲ್ಲರೂ ಒಗ್ಗಟ್ಟಿನಿಂದ ಸಾಂವಿಧಾನಿಕ ಮತ್ತು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧರಾಗಿದ್ದೇವೆ ಎಂದು ಕರ್ನಾಟಕ ಹೇಳಿದೆ.

ಮಹಾರಾಷ್ಟ್ರದವರು ಅನಗತ್ಯವಾಗಿ ಸೃಷ್ಟಿಸಿರುವ ಗಡಿ ವಿವಾದಗಳನ್ನು ಖಂಡಿಸಿ ಈ ಸದನವು ರಾಜ್ಯದ ಹಿತಾಸಕ್ತಿ ಕಾಪಾಡಲು ಬದ್ಧವಾಗಿದೆ ಎಂಬ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ ಅವರು ಕಳೆದ ವಾರ ಮಂಡಿಸಿದ ನಿರ್ಣಯದಲ್ಲಿ ಹೇಳಲಾಗಿದೆ.

ಇದನ್ನೂ ಓದಿ:Nasal Vaccine Price: ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆಗೆ ಬೆಲೆ ನಿಗದಿ: ಸರ್ಕಾರಿ, ಖಾಸಗಿ ಆಸ್ಪತ್ರೆ ದರ ವಿವರ

ಗೃಹ ಸಚಿವ ಅಮಿತ್ ಶಾ ಅವರೊಂದಿಗಿನ ಸಭೆಯಲ್ಲಿ ಎರಡೂ ರಾಜ್ಯಗಳು ಶಾಂತಿ ಕಾಪಾಡಲು ಒಪ್ಪಿಕೊಂಡಿವೆ ಎಂದು ಕರ್ನಾಟಕ ಮುಖ್ಯಮಂತ್ರಿ ಈ ಹಿಂದೆ ಹೇಳಿದ್ದರು.

ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದವು 1956 ರ ರಾಜ್ಯ ಮರುಸಂಘಟನೆ ಕಾಯಿದೆಯ ಅನುಷ್ಠಾನಕ್ಕೆ ಹೋಗುತ್ತದೆ. ಆಗಿನ ಮಹಾರಾಷ್ಟ್ರ ಸರ್ಕಾರವು ಕರ್ನಾಟಕದೊಂದಿಗೆ ತನ್ನ ಗಡಿಯನ್ನು ಮರುಹೊಂದಿಸುವಂತೆ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಎರಡೂ ರಾಜ್ಯಗಳಿಂದ ನಾಲ್ವರು ಸದಸ್ಯರ ಸಮಿತಿ ರಚಿಸಲಾಗಿತ್ತು. ಮಹಾರಾಷ್ಟ್ರ ಸರ್ಕಾರವು 260 ಪ್ರಧಾನವಾಗಿ ಕನ್ನಡ ಮಾತನಾಡುವ ಗ್ರಾಮಗಳನ್ನು ವರ್ಗಾಯಿಸಲು ತನ್ನ ಇಚ್ಛೆಯನ್ನು ವ್ಯಕ್ತಪಡಿಸಿತ್ತು, ಆದರೆ ಕರ್ನಾಟಕವು ಈ ಪ್ರಸ್ತಾಪವನ್ನು ತಿರಸ್ಕರಿಸಿತು.

ನಂತರ ಎರಡೂ ಸರ್ಕಾರಗಳು ಈ ವಿಷಯವನ್ನು ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದವು. ಆದರೆ, ಈ ವಿಷಯ ಇನ್ನೂ ಇತ್ಯರ್ಥವಾಗಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:54 pm, Tue, 27 December 22

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?