AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ

ಮಹಾರಾಷ್ಟ್ರದ ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ
ಏಕನಾಥ್ ಶಿಂಧೆ
TV9 Web
| Edited By: |

Updated on:Jul 14, 2022 | 2:15 PM

Share

ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಜನರಿಗೆ ಕೊಡುಗೆ ನೀಡಿದ್ದಾರೆ. ಪೆಟ್ರೋಲ್ (Petrol Price) ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲಾಗಿದೆ ಎಂದು ಶಿಂಧೆ ಗುರುವಾರ ಘೋಷಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ  ಸಭೆ ನಂತರ ಶಿಂಧೆ ಈ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರದ (Maharashtra) ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ. ಏಕನಾಥ ಶಿಂಧೆ ಅವರ ನೂತನ ಸರ್ಕಾರ ಪೆಟ್ರೋಲ್ ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲು ನಿರ್ಧರಿಸಿದೆ ಎಂದು ಟ್ವೀಟ್ ಮಾಡಿರುವ ಫಡ್ನವಿಸ್, ಈ ನಿರ್ಧಾರದಿಂದಾಗಿ ರಾಜ್ಯ 6,000ಕೋಟಿ ಹೆಚ್ಚುವರಿ ಹೊರೆಯನ್ನು ಹೊರಲಿದೆ ಎಂದಿದ್ದಾರೆ. ಸಾಮಾನ್ಯ ನಾಗರಿಕರಿಗೆ ಸಹಾಯ ಮಾಡಲು ಇಂಧನ ಬೆಲೆ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ ನಂತರ ಮಹಾರಾಷ್ಟ್ರ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.

ಬೆಲೆ ಕಡಿಮೆ ಆದ ನಂತರ ಮುಂಬೈಯಲ್ಲಿ ಪೆಟ್ರೋಲ್ ಲೀಟರ್​​ಗೆ ₹111.35 ಇದ್ದದ್ದು ₹106.35 ರೂ ಆಗಿ ಇಳಿಕೆ ಆಗಿದೆ. ಅದೇ ವೇಳೆ ಡೀಸೆಲ್ ದರ ₹97.28 ಇದ್ದದ್ದು ₹94.28 ಆಗಿದೆ. ಪುಣೆಯಲ್ಲಿ ಪೆಟ್ರೋಲ್ ದರ ₹105.88 ಆಗಿದ್ದು ಡೀಸೆಲ್ ದರ ₹92.37 ಆಗಿದೆ. ಥಾಣೆಯಲ್ಲಿ ಪೆಟ್ರೋಲ್ ದರ ₹106.49 ಆಗಿದ್ದು ಡೀಸೆಲ್ ದರ ₹94.42 ಆಗಿದೆ.

Published On - 1:46 pm, Thu, 14 July 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ