AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ

ಮಹಾರಾಷ್ಟ್ರದ ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ
ಏಕನಾಥ್ ಶಿಂಧೆ
TV9 Web
| Edited By: |

Updated on:Jul 14, 2022 | 2:15 PM

Share

ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಜನರಿಗೆ ಕೊಡುಗೆ ನೀಡಿದ್ದಾರೆ. ಪೆಟ್ರೋಲ್ (Petrol Price) ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲಾಗಿದೆ ಎಂದು ಶಿಂಧೆ ಗುರುವಾರ ಘೋಷಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ  ಸಭೆ ನಂತರ ಶಿಂಧೆ ಈ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರದ (Maharashtra) ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ. ಏಕನಾಥ ಶಿಂಧೆ ಅವರ ನೂತನ ಸರ್ಕಾರ ಪೆಟ್ರೋಲ್ ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲು ನಿರ್ಧರಿಸಿದೆ ಎಂದು ಟ್ವೀಟ್ ಮಾಡಿರುವ ಫಡ್ನವಿಸ್, ಈ ನಿರ್ಧಾರದಿಂದಾಗಿ ರಾಜ್ಯ 6,000ಕೋಟಿ ಹೆಚ್ಚುವರಿ ಹೊರೆಯನ್ನು ಹೊರಲಿದೆ ಎಂದಿದ್ದಾರೆ. ಸಾಮಾನ್ಯ ನಾಗರಿಕರಿಗೆ ಸಹಾಯ ಮಾಡಲು ಇಂಧನ ಬೆಲೆ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ ನಂತರ ಮಹಾರಾಷ್ಟ್ರ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.

ಬೆಲೆ ಕಡಿಮೆ ಆದ ನಂತರ ಮುಂಬೈಯಲ್ಲಿ ಪೆಟ್ರೋಲ್ ಲೀಟರ್​​ಗೆ ₹111.35 ಇದ್ದದ್ದು ₹106.35 ರೂ ಆಗಿ ಇಳಿಕೆ ಆಗಿದೆ. ಅದೇ ವೇಳೆ ಡೀಸೆಲ್ ದರ ₹97.28 ಇದ್ದದ್ದು ₹94.28 ಆಗಿದೆ. ಪುಣೆಯಲ್ಲಿ ಪೆಟ್ರೋಲ್ ದರ ₹105.88 ಆಗಿದ್ದು ಡೀಸೆಲ್ ದರ ₹92.37 ಆಗಿದೆ. ಥಾಣೆಯಲ್ಲಿ ಪೆಟ್ರೋಲ್ ದರ ₹106.49 ಆಗಿದ್ದು ಡೀಸೆಲ್ ದರ ₹94.42 ಆಗಿದೆ.

Published On - 1:46 pm, Thu, 14 July 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ