AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ

ಮಹಾರಾಷ್ಟ್ರದ ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ
ಏಕನಾಥ್ ಶಿಂಧೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 2:15 PM

Share

ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಜನರಿಗೆ ಕೊಡುಗೆ ನೀಡಿದ್ದಾರೆ. ಪೆಟ್ರೋಲ್ (Petrol Price) ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲಾಗಿದೆ ಎಂದು ಶಿಂಧೆ ಗುರುವಾರ ಘೋಷಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ  ಸಭೆ ನಂತರ ಶಿಂಧೆ ಈ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರದ (Maharashtra) ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ. ಏಕನಾಥ ಶಿಂಧೆ ಅವರ ನೂತನ ಸರ್ಕಾರ ಪೆಟ್ರೋಲ್ ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲು ನಿರ್ಧರಿಸಿದೆ ಎಂದು ಟ್ವೀಟ್ ಮಾಡಿರುವ ಫಡ್ನವಿಸ್, ಈ ನಿರ್ಧಾರದಿಂದಾಗಿ ರಾಜ್ಯ 6,000ಕೋಟಿ ಹೆಚ್ಚುವರಿ ಹೊರೆಯನ್ನು ಹೊರಲಿದೆ ಎಂದಿದ್ದಾರೆ. ಸಾಮಾನ್ಯ ನಾಗರಿಕರಿಗೆ ಸಹಾಯ ಮಾಡಲು ಇಂಧನ ಬೆಲೆ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ ನಂತರ ಮಹಾರಾಷ್ಟ್ರ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.

ಬೆಲೆ ಕಡಿಮೆ ಆದ ನಂತರ ಮುಂಬೈಯಲ್ಲಿ ಪೆಟ್ರೋಲ್ ಲೀಟರ್​​ಗೆ ₹111.35 ಇದ್ದದ್ದು ₹106.35 ರೂ ಆಗಿ ಇಳಿಕೆ ಆಗಿದೆ. ಅದೇ ವೇಳೆ ಡೀಸೆಲ್ ದರ ₹97.28 ಇದ್ದದ್ದು ₹94.28 ಆಗಿದೆ. ಪುಣೆಯಲ್ಲಿ ಪೆಟ್ರೋಲ್ ದರ ₹105.88 ಆಗಿದ್ದು ಡೀಸೆಲ್ ದರ ₹92.37 ಆಗಿದೆ. ಥಾಣೆಯಲ್ಲಿ ಪೆಟ್ರೋಲ್ ದರ ₹106.49 ಆಗಿದ್ದು ಡೀಸೆಲ್ ದರ ₹94.42 ಆಗಿದೆ.

Published On - 1:46 pm, Thu, 14 July 22

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ