AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ

ಮಹಾರಾಷ್ಟ್ರದ ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ
ಏಕನಾಥ್ ಶಿಂಧೆ
TV9 Web
| Edited By: |

Updated on:Jul 14, 2022 | 2:15 PM

Share

ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಜನರಿಗೆ ಕೊಡುಗೆ ನೀಡಿದ್ದಾರೆ. ಪೆಟ್ರೋಲ್ (Petrol Price) ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲಾಗಿದೆ ಎಂದು ಶಿಂಧೆ ಗುರುವಾರ ಘೋಷಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ  ಸಭೆ ನಂತರ ಶಿಂಧೆ ಈ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರದ (Maharashtra) ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ. ಏಕನಾಥ ಶಿಂಧೆ ಅವರ ನೂತನ ಸರ್ಕಾರ ಪೆಟ್ರೋಲ್ ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲು ನಿರ್ಧರಿಸಿದೆ ಎಂದು ಟ್ವೀಟ್ ಮಾಡಿರುವ ಫಡ್ನವಿಸ್, ಈ ನಿರ್ಧಾರದಿಂದಾಗಿ ರಾಜ್ಯ 6,000ಕೋಟಿ ಹೆಚ್ಚುವರಿ ಹೊರೆಯನ್ನು ಹೊರಲಿದೆ ಎಂದಿದ್ದಾರೆ. ಸಾಮಾನ್ಯ ನಾಗರಿಕರಿಗೆ ಸಹಾಯ ಮಾಡಲು ಇಂಧನ ಬೆಲೆ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ ನಂತರ ಮಹಾರಾಷ್ಟ್ರ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.

ಬೆಲೆ ಕಡಿಮೆ ಆದ ನಂತರ ಮುಂಬೈಯಲ್ಲಿ ಪೆಟ್ರೋಲ್ ಲೀಟರ್​​ಗೆ ₹111.35 ಇದ್ದದ್ದು ₹106.35 ರೂ ಆಗಿ ಇಳಿಕೆ ಆಗಿದೆ. ಅದೇ ವೇಳೆ ಡೀಸೆಲ್ ದರ ₹97.28 ಇದ್ದದ್ದು ₹94.28 ಆಗಿದೆ. ಪುಣೆಯಲ್ಲಿ ಪೆಟ್ರೋಲ್ ದರ ₹105.88 ಆಗಿದ್ದು ಡೀಸೆಲ್ ದರ ₹92.37 ಆಗಿದೆ. ಥಾಣೆಯಲ್ಲಿ ಪೆಟ್ರೋಲ್ ದರ ₹106.49 ಆಗಿದ್ದು ಡೀಸೆಲ್ ದರ ₹94.42 ಆಗಿದೆ.

Published On - 1:46 pm, Thu, 14 July 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ