AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ

ಮಹಾರಾಷ್ಟ್ರದ ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್​ ದರ ಪ್ರತಿ ಲೀಟರ್​ಗೆ ₹5, ಡೀಸೆಲ್​ ದರ ಲೀಟರ್​ಗೆ ₹3 ಇಳಿಕೆ
ಏಕನಾಥ್ ಶಿಂಧೆ
TV9 Web
| Edited By: |

Updated on:Jul 14, 2022 | 2:15 PM

Share

ಮಹಾರಾಷ್ಟ್ರದಲ್ಲಿ ಇಂಧನ ಬೆಲೆ ಇಳಿಕೆ ಮಾಡುವ ಮೂಲಕ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಜನರಿಗೆ ಕೊಡುಗೆ ನೀಡಿದ್ದಾರೆ. ಪೆಟ್ರೋಲ್ (Petrol Price) ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲಾಗಿದೆ ಎಂದು ಶಿಂಧೆ ಗುರುವಾರ ಘೋಷಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ  ಸಭೆ ನಂತರ ಶಿಂಧೆ ಈ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರದ (Maharashtra) ಜನರಿಗೆ ಮತ್ತು ಮರಾಠಿ ಮನೂಗಳಿಗೆ ಇದೊಂದು ದೊಡ್ಡ ನೆಮ್ಮದಿ ಎಂದು ಶಿಂಧೆಯವರ ಘೋಷಣೆಯನ್ನು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಶ್ಲಾಘಿಸಿದ್ದಾರೆ. ಏಕನಾಥ ಶಿಂಧೆ ಅವರ ನೂತನ ಸರ್ಕಾರ ಪೆಟ್ರೋಲ್ ಲೀಟರ್ ಗೆ 5 ಮತ್ತು ಡೀಸೆಲ್ ಲೀಟರ್ ಗೆ 3 ರೂ ಕಡಿತ ಮಾಡಲು ನಿರ್ಧರಿಸಿದೆ ಎಂದು ಟ್ವೀಟ್ ಮಾಡಿರುವ ಫಡ್ನವಿಸ್, ಈ ನಿರ್ಧಾರದಿಂದಾಗಿ ರಾಜ್ಯ 6,000ಕೋಟಿ ಹೆಚ್ಚುವರಿ ಹೊರೆಯನ್ನು ಹೊರಲಿದೆ ಎಂದಿದ್ದಾರೆ. ಸಾಮಾನ್ಯ ನಾಗರಿಕರಿಗೆ ಸಹಾಯ ಮಾಡಲು ಇಂಧನ ಬೆಲೆ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ ನಂತರ ಮಹಾರಾಷ್ಟ್ರ ಸಿಎಂ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.

ಬೆಲೆ ಕಡಿಮೆ ಆದ ನಂತರ ಮುಂಬೈಯಲ್ಲಿ ಪೆಟ್ರೋಲ್ ಲೀಟರ್​​ಗೆ ₹111.35 ಇದ್ದದ್ದು ₹106.35 ರೂ ಆಗಿ ಇಳಿಕೆ ಆಗಿದೆ. ಅದೇ ವೇಳೆ ಡೀಸೆಲ್ ದರ ₹97.28 ಇದ್ದದ್ದು ₹94.28 ಆಗಿದೆ. ಪುಣೆಯಲ್ಲಿ ಪೆಟ್ರೋಲ್ ದರ ₹105.88 ಆಗಿದ್ದು ಡೀಸೆಲ್ ದರ ₹92.37 ಆಗಿದೆ. ಥಾಣೆಯಲ್ಲಿ ಪೆಟ್ರೋಲ್ ದರ ₹106.49 ಆಗಿದ್ದು ಡೀಸೆಲ್ ದರ ₹94.42 ಆಗಿದೆ.

Published On - 1:46 pm, Thu, 14 July 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ