AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eknath Shinde: ಪ್ರಜ್ಞೆ ತಪ್ಪಿದ ಮಹಿಳಾ ಕಾನ್​ಸ್ಟೆಬಲ್​ಗೆ ಸಹಾಯ ಮಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ; ವಿಡಿಯೋ ವೈರಲ್

ಮಹಿಳಾ ಕಾನ್​ಸ್ಟೆಬಲ್ ಮೂರ್ಛೆ ತಪ್ಪಿ ಬೀಳುವುದನ್ನು ನೋಡಿದ ಏಕನಾಥ್ ಶಿಂಧೆ, ಕೂಡಲೇ ಅತ್ತ ಹೋಗಿ, ಆಕೆಗೆ ನೀರು, ಕುರ್ಚಿ ನೀಡಿ ಆಸ್ಪತ್ರೆಗೆ ದಾಖಲಿಸಲು ತನ್ನ ಸಿಬ್ಬಂದಿಗೆ ಸೂಚಿಸಿದ್ದಾರೆ.

Eknath Shinde: ಪ್ರಜ್ಞೆ ತಪ್ಪಿದ ಮಹಿಳಾ ಕಾನ್​ಸ್ಟೆಬಲ್​ಗೆ ಸಹಾಯ ಮಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ; ವಿಡಿಯೋ ವೈರಲ್
ಮಹಿಳಾ ಕಾನ್​ಸ್ಟೇಬಲ್​ಗೆ ಸಹಾಯ ಮಾಡಿದ ಸಿಎಂ ಏಕನಾಥ್ ಶಿಂಧೆImage Credit source: NDTV
TV9 Web
| Edited By: |

Updated on:Jul 07, 2022 | 1:22 PM

Share

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಥಾಣೆ ಕಲೆಕ್ಟರ್ ಕಚೇರಿಗೆ ಹೋಗಿದ್ದಾಗ ಅಲ್ಲಿ ಕರ್ತವ್ಯದಲ್ಲಿದ್ದ ಥಾಣೆ ಪೊಲೀಸ್ ಕಮಿಷನರೇಟ್‌ನ ಮಹಿಳಾ ಕಾನ್‌ಸ್ಟೆಬಲ್ ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ನೋಡಿ, ಕೂಡಲೇ ಆಕೆಗೆ ಏನಾಗಿದೆ ಎಂದು ವಿಚಾರಿಸಿದ್ದಾರೆ. ಆ ಮಹಿಳಾ ಕಾನ್​ಸ್ಟೆಬಲ್ ಸಹಾಯಕ್ಕೆ ಧಾವಿಸಿದ ಸಿಎಂ ಏಕನಾಥ್ ಶಿಂಧೆ ಆಕೆಯನ್ನು ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡಿದ್ದಾರೆ.

ಮಹಿಳಾ ಕಾನ್​ಸ್ಟೆಬಲ್ ಮೂರ್ಛೆ ತಪ್ಪಿ ಬೀಳುವುದನ್ನು ನೋಡಿದ ಏಕನಾಥ್ ಶಿಂಧೆ, ಕೂಡಲೇ ಅತ್ತ ಹೋಗಿ, ಆಕೆಗೆ ನೀರು, ಕುರ್ಚಿ ನೀಡಿ ಆಸ್ಪತ್ರೆಗೆ ದಾಖಲಿಸಲು ತನ್ನ ಸಿಬ್ಬಂದಿಗೆ ಸೂಚಿಸಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜನಸಂದಣಿಯಲ್ಲಿ ಮಹಿಳಾ ಕಾನ್‌ಸ್ಟೇಬಲ್ ಅಸ್ವಸ್ಥಗೊಂಡು ಬಿದ್ದು, ಆಕೆಯ ಕೈ ಮತ್ತು ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೆಳಗೆ ಬಿದ್ದಿದ್ದ ಆಕೆಗೆ ಏಳಲು ಸಹಾಯ ಮಾಡಿದ ಸಿಎಂ ಶಿಂಧೆ ಕುರ್ಚಿ ನೀಡಿ, ನೀರು ಕೊಟ್ಟು ಉಪಚರಿಸಿದ್ದಾರೆ. ಬಳಿಕ ಆಸ್ಪತ್ರೆಗೂ ಕಳುಹಿಸಿದ್ದಾರೆ.

ಇದನ್ನೂ ಓದಿ: Maharashtra Rain: ಮಹಾರಾಷ್ಟ್ರದ ಥಾಣೆಯಲ್ಲಿ ಪ್ರವಾಹ ಭೀತಿ; ಸಿಎಂ ಏಕನಾಥ್ ಶಿಂಧೆ ಮನೆ ಆವರಣಕ್ಕೂ ನುಗ್ಗಿದ ಮಳೆ ನೀರು

ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಗಾಯಗೊಂಡಿದ್ದ ಮಹಿಳಾ ಕಾನ್​ಸ್ಟೆಬಲ್​ರನ್ನು ಚಿಕಿತ್ಸೆಗಾಗಿ ಥಾಣೆಯ ಖಾಸಗಿ ಆಸ್ಪತ್ರೆಗೆ ಕಳುಹಿಸಲು ಸಿಎಂ ಶಿಂಧೆ ವ್ಯವಸ್ಥೆ ಮಾಡಿದ್ದಾರೆ. ನಿನ್ನೆ ಥಾಣೆ ಕಲೆಕ್ಟರೇಟ್‌ನಲ್ಲಿ ಸಿಎಂ ಏಕನಾಥ್ ಶಿಂಧೆ ಸಭೆ ನಡೆಸಿ ವಾಪಾಸ್ ತೆರಳುವಾಗ ಮಹಿಳಾ ಕಾನ್​ಸ್ಟೆಬಲ್ ಅನಾರೋಗ್ಯದಿಂದ ಕೆಳಗೆ ಬಿದ್ದಿದ್ದರು.

ಹಿಂದಿನ ಉದ್ಧವ್ ಠಾಕ್ರೆ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯ ಎದ್ದ ನಂತರ ಏಕನಾಥ್ ಶಿಂಧೆ ಕಳೆದ ವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಬಿಜೆಪಿಯ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಬಂಡಾಯ ಶಿವಸೇನೆ ಬಣವನ್ನು ಬೆಂಬಲಿಸಿದ್ದರು. ಅವರ ಬೆಂಬಲದಿಂದ ಸರ್ಕಾರ ರಚಿಸಿದ ಶಿಂಧೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

Published On - 1:19 pm, Thu, 7 July 22

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​