AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲ್ ಟೂರಿಸಂ ಉದ್ಘಾಟಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಮಹಾತ್ಮ ಗಾಂಧಿ, ಜವಾಹರ್​ಲಾಲ್ ನೆಹರು, ಮೋತಿಲಾಲ್ ನೆಹರು, ಸರೋಜಿನಿ ನಾಯ್ಡು ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಸಹಿತ ಹಲವು ಸ್ವಾತಂತ್ರ್ಯ ಹೋರಾಟಗಾರರು ಈ ಕಾರಾಗೃಹದಲ್ಲಿ ಸೆರೆವಾಸ ಅನುಭವಿಸಿದ್ದರು.

ಜೈಲ್ ಟೂರಿಸಂ ಉದ್ಘಾಟಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
TV9 Web
| Edited By: |

Updated on:Apr 06, 2022 | 8:38 PM

Share

ಮುಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ‘ಜೈಲ್ ಟೂರಿಸಂ’ನ್ನು, ವೀಡಿಯೋ ಕಾನ್ಫೆರೆನ್ಸ್ ಮೂಲಕ ಉದ್ಘಾಟನೆ ನಡೆಸಿದ್ದಾರೆ. 72ನೇ ಗಣರಾಜ್ಯೋತ್ಸವ ದಿನ (ಜ.26) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಜೊತೆಗೆ ಜೈಲ್ ಟೂರಿಸಂ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ, ಪುಣೆಯ ಯರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲ್ ಟೂರಿಸಂನ್ನು ಆರಂಭಿಸಲಾಗಿದೆ.

ಹಲವು ಸ್ವಾತಂತ್ರ್ಯ ಚಳುವಳಿಗಾರರು ಸೆರೆವಾಸ ಅನುಭವಿಸಿದ್ದ ಜೈಲು ಇದಾಗಿದೆ. ಮಹಾತ್ಮ ಗಾಂಧಿ, ಜವಾಹರ್​ಲಾಲ್ ನೆಹರು, ಮೋತಿಲಾಲ್ ನೆಹರು, ಸರೋಜಿನಿ ನಾಯ್ಡು ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಸಹಿತ ಹಲವು ಸ್ವಾತಂತ್ರ್ಯ ಹೋರಾಟಗಾರರು ಈ ಕಾರಾಗೃಹದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಈ ಕಾರಾಗೃಹ ಪ್ರವಾಸೋದ್ಯಮದ ಉದ್ಘಾಟನೆಯನ್ನು ಗೆನ್ಬಾ ಸೋಪನ್​ರಾವ್ ಮೋಜ್ ವಿದ್ಯಾಲಯದ 10 ಮಂದಿ ವಿದ್ಯಾರ್ಥಿಗಳು ನೆರವೇರಿಸಿದ್ದಾರೆ. ಜೊತೆಗೆ, ಮೂವರು ಶಿಕ್ಷಕಕರೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಜೊತೆಗೆ, ಕಾರಾಗೃಹದ ಮೊದಲ ಪ್ರವಾಸಿಗರಾಗಿ ಅವರು ಸ್ಥಳಕ್ಕೆ ಭೇಟಿನೀಡಿದ್ದಾರೆ.

ನಾವು ಇತಿಹಾಸದ ವಿವಿಧ ಘಟನೆಗಳಿಗೆ ಸಾಕ್ಷಿಯಾಗಿದ್ದ ಸೆರೆಮನೆಗೆ ಭೇಟಿ ನೀಡಿದ್ದೇವೆ. ಮಹಾತ್ಮ ಗಾಂಧಿ, ನೆಹರು ಸೆರೆವಾಸ ಮಾಡಿದ್ದ ಜೈಲು ಮತ್ತು ಮರಣದಂಡನೆ ವಿಧಿಸುತ್ತಿದ್ದ ಸ್ಥಳ ಸಂದರ್ಶಿಸಿದ್ಧೇವೆ. ಮಕ್ಕಳಿಗೆ ಪಾಠ ಮಾಡುವ ವಿಚಾರಗಳ ಸ್ಥಳಕ್ಕೆ ಪ್ರತ್ಯಕ್ಷ ಭೇಟಿ ಕೊಟ್ಟದ್ದು ಒಳ್ಳೆಯ ಅನುಭವ ಎಂದು ಕಾರಾಗೃಹಕ್ಕೆ ಭೇಟಿ ಕೊಟ್ಟ ಶಿಕ್ಷಕಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

ಗಡಿ ವಿವಾದ ಕುರಿತು ಮಹಾರಾಷ್ಟ್ರ ಸರ್ಕಾರದಿಂದ ಪುಸ್ತಕ ಬಿಡುಗಡೆ.. ಫಡ್ನವೀಸ್ ಸಹ ಭಾಗಿ: ತಾರಕಕ್ಕೇರುತ್ತ ಅಸಮಾಧಾನ?

Published On - 1:14 pm, Wed, 27 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ