AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಮ್​ವೀರ್ ಸಿಂಗ್ ಪತ್ರ ಅಧಿಕೃತ ಮೈಲ್ ವಿಳಾಸದಿಂದ ಬಂದಿಲ್ಲ, ಅವರ ಸಹಿಯೂ ಇರಲಿಲ್ಲ: ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ

ಹೊಸ ಇಮೈಲ್ ವಿಳಾಸವನ್ನು ಪರಿಶೀಲಿಸಬೇಕಾಗಿದೆ. ಮಹಾರಾಷ್ಟ್ರ ಗೃಹ ಸಚಿವಾಲಯ ಈ ಬಗ್ಗೆ ಪರಮ್​ವೀರ್ ಸಿಂಗ್​ರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.

ಪರಮ್​ವೀರ್ ಸಿಂಗ್ ಪತ್ರ ಅಧಿಕೃತ ಮೈಲ್ ವಿಳಾಸದಿಂದ ಬಂದಿಲ್ಲ, ಅವರ ಸಹಿಯೂ ಇರಲಿಲ್ಲ: ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ
ಅನಿಲ್ ದೇಶ್​ಮುಖ್ ಹಾಗೂ ಪರಮ್​ವೀರ್ ಸಿಂಗ್
TV9 Web
| Edited By: |

Updated on:Apr 06, 2022 | 7:09 PM

Share

ಮುಂಬೈ: ಪರಮ್​ವೀರ್ ಸಿಂಗ್ ಪತ್ರ ಇಂದು (ಮಾರ್ಚ್ 20) ಸಂಜೆ 4.37ಕ್ಕೆ ಬೇರೆ ಮೈಲ್ ವಿಳಾಸದಿಂದ ಬಂದಿದೆ. ಪರಮ್​ವೀರ್ ಸಿಂಗ್ ಅಧಿಕೃತ ಮೈಲ್ ವಿಳಾಸದ ಬದಲಾಗಿ ಬೇರೆ ವಿಳಾಸದಿಂದ ಬಂದಿದೆ. ಹಾಗೂ ಪತ್ರದಲ್ಲಿ ಪರಮ್​ವೀರ್ ಸಿಂಗ್ ಸಹಿ ಕೂಡ ಇರಲಿಲ್ಲ. ಹೊಸ ಇಮೈಲ್ ವಿಳಾಸವನ್ನು ಪರಿಶೀಲಿಸಬೇಕಾಗಿದೆ. ಮಹಾರಾಷ್ಟ್ರ ಗೃಹ ಸಚಿವಾಲಯ ಈ ಬಗ್ಗೆ ಪರಮ್​ವೀರ್ ಸಿಂಗ್​ರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಅವರು ಅಮಾನತು ಆಗಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರಿಗೆ ಪ್ರತೀ ತಿಂಗಳು 100 ಕೋಟಿ ದಂಡ ಸಂಗ್ರಹಿಸುವಂತೆ ಒತ್ತಡ ಹೇರಿದ್ದರು ಎಂದು ಆರೋಪಿಸಿ ಮುಂಬೈ ಮಾಜಿ ಪೊಲೀಸ್ ಆಯುಕ್ತ ಹಾಗೂ ಹಾಲಿ ಕಮಾಂಡೆಂಟ್ ಜನರಲ್ ಆಫ್ ಹೋಮ್ ಗಾರ್ಡ್ಸ್ ಆಗಿರುವ ಪರಮ್​ವೀರ್ ಸಿಂಗ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದಿದ್ದ ಪತ್ರ ಇಂದು (ಮಾರ್ಚ್ 20) ಸಂಜೆ ಸಂಚಲನ ಸೃಷ್ಟಿಸಿತ್ತು. ಇದೀಗ ಪತ್ರಕ್ಕೆ ಸಂಬಂಧಿಸಿದ ಪ್ರಕರಣ ಮತ್ತೊಂದು ಆಯಾಮ ಪಡೆದುಕೊಂಡಿದೆ. ಪರಮ್​ವೀರ್ ಸಿಂಗ್ ಪತ್ರದ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಹೊರಟಿದೆ.

ಪತ್ರದ ಕುರಿತು ಪ್ರತಿಕ್ರಿಯಿಸಿದ್ದ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕರೂ ಆಗಿರುವ ದೇವೇಂದ್ರ ಫಡ್ನವಿಸ್, ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದರು.

ಮತ್ತೊಂದೆಡೆ, ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್​ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ. ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.

ಪರಮ್​ವೀರ್ ಸಿಂಗ್ ಪತ್ರದ ಸಂಪೂರ್ಣ ವಿವರ ಇಲ್ಲಿದೆ: ಪರಮ್​ವೀರ್ ಸಿಂಗ್ ಉದ್ಧವ್ ಠಾಕ್ರೆಗೆ ಬರೆದ ಪತ್ರ

ಇದನ್ನೂ ಓದಿ: ಮಹಾರಾಷ್ಟ್ರ ಗೃಹ ಸಚಿವರ ರಾಜೀನಾಮೆಗೆ ದೇವೇಂದ್ರ ಫಡ್ನವಿಸ್ ಒತ್ತಾಯ; ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್

Published On - 11:07 pm, Sat, 20 March 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ