AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಕೊವಿನ್ ಆ್ಯಪ್​ ಬೇಡ.. ಪ್ರತ್ಯೇಕ ಆ್ಯಪ್​ ಬಳಕೆಗೆ ಅನುಮತಿ ನೀಡಿ’-ಕೇಂದ್ರ ಸರ್ಕಾರಕ್ಕೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮನವಿ

CoWIN ಆ್ಯಪ್​ನಲ್ಲಿ ದೋಷಗಳಿವೆ. ಅದು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹಾಗಾಗಿ ನಾವು ನಮ್ಮ ರಾಜ್ಯದಲ್ಲಿ ಬೇರೆ ಆ್ಯಪ್​​ನ್ನು ಜನರಿಗೆ ಪರಿಚಯಿಸಲು ನಿರ್ಧರಿಸಿದ್ದೇವೆ ಎಂದು ಉದ್ಧವ್​ ಠಾಕ್ರೆ ಹೇಳಿದ್ದಾರೆ.

ನಮಗೆ ಕೊವಿನ್ ಆ್ಯಪ್​ ಬೇಡ.. ಪ್ರತ್ಯೇಕ ಆ್ಯಪ್​ ಬಳಕೆಗೆ ಅನುಮತಿ ನೀಡಿ’-ಕೇಂದ್ರ ಸರ್ಕಾರಕ್ಕೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮನವಿ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
Lakshmi Hegde
|

Updated on: May 08, 2021 | 2:19 PM

Share

ಕೊರೊನಾ ಲಸಿಕೆ ಹಂಚಿಕೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ CoWIN ಆ್ಯಪ್​ ಪರಿಚಯಿಸಿದೆ. CoWIN ಮತ್ತು ಆರೋಗ್ಯ ಸೇತು ಆ್ಯಪ್​ನಲ್ಲಿ ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆಯಬೇಕು ಎಂದು ಹೇಳಿದೆ. ಹಾಗೇ, ದೇಶದ ಜನರು ಇದೆರಡು ಆ್ಯಪ್​ಗಳ ಮೂಲಕ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಹೆಚ್ಚಿನವರು CoWIN ಆ್ಯಪ್​ ಮೂಲಕ ನೋಂದಣಿ ಮಾಡಲು ಮುಂದಾಗುತ್ತಿದ್ದಾರೆ. ಹೀಗಿರುವಾಗ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನಮಗೆ ಲಸಿಕೆ ವಿತರಣೆಗೆ ಸಂಬಂಧಪಟ್ಟಂತೆ ಪ್ರತ್ಯೇಕ ಆ್ಯಪ್​ ಬಳಸಿಕೊಳ್ಳಲು ಅನುಮತಿ ನೀಡಬೇಕು ಎಂದು ಕೇಂದ್ರಸರ್ಕಾರವನ್ನು ಕೇಳಿದ್ದಾರೆ.

CoWIN ಆ್ಯಪ್​ನಲ್ಲಿ ದೋಷಗಳಿವೆ. ಅದು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹಾಗಾಗಿ ನಾವು ನಮ್ಮ ರಾಜ್ಯದಲ್ಲಿ ಬೇರೆ ಆ್ಯಪ್​​ನ್ನು ಜನರಿಗೆ ಪರಿಚಯಿಸಲು ನಿರ್ಧರಿಸಿದ್ದೇವೆ ಎಂದು ಉದ್ಧವ್​ ಠಾಕ್ರೆ ಹೇಳಿದ್ದಾರೆ. ಇದು ಕೇವಲ ಮಹಾರಾಷ್ಟ್ರ ಮುಖ್ಯಮಂತ್ರಿಯ ದೂರಲ್ಲ. ಇದನ್ನು ಡೌನ್​ಲೋಡ್ ಮಾಡಿಕೊಂಡು ಲಸಿಕೆಗಾಗಿ ಹೆಸರು ನೋಂದಣಿ ಮಾಡಿಸಿಕೊಳ್ಳಲು ಮುಂದಾದ ಅನೇಕ ಬಳಕೆದಾರರು ಆ್ಯಪ್​​ನಲ್ಲಿ ಸಮಸ್ಯೆ ಇದೆ ಎಂದು ಕಂಪ್ಲೇಂಟ್ ಮಾಡಿದ್ದಾರೆ. ನಾವು ಹೆಸರು ರಿಜಿಸ್ಟರ್ ಮಾಡಿರುತ್ತೇವೆ. ಆದರೆ ನಮ್ಮ ಅಪಾಯಿಂಟ್​ಮೆಂಟ್ ಮಿಸ್ ಆಗಿರುತ್ತದೆ. ಆದಾಗ್ಯೂ ನೀವು ಲಸಿಕೆ ಪಡೆದಿದ್ದೀರಿ ಎಂದು ನೋಟಿಫಿಕೇಶನ್ ಬರುತ್ತದೆ ಎಂದು ಹಲವರು ಹೇಳಿದ್ದಾರೆ. ಹಲವು ದೂರುಗಳು ಬಂದ ಬಳಿಕ ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ 4 ಡಿಜಿಟ್​ಗಳ ಒಂದು ಸೆಕ್ಯೂರಿಟಿ ಕೋಡ್​ನ ಫೀಚರ್​​ನ್ನು ಕೊವಿನ್​ ಪೋರ್ಟಲ್​​ನಲ್ಲಿ ಅಳವಡಿಸಿದೆ. ಹಾಗೇ ಈ ಸೆಕ್ಯೂರಿಟಿ ಕೋಡ್​ನಿಂದಾಗಿ ಆನ್​ಲೈನ್​ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ, ಅಪಾಯಿಂಟ್​ಮೆಂಟ್ ಪಡೆಯುವ ವಿಧಾನಗಳಲ್ಲಿ ದೋಷ ಕಂಡುಬರುವ ಪ್ರಮಾಣ ತುಂಬ ಕಡಿಮೆ ಆಗಲಿದೆ ಎಂದೂ ಹೇಳಿಕೊಂಡಿದೆ.

ಸದ್ಯ ದೇಶದ ಎಲ್ಲ ಕಡೆಗಳಲ್ಲೂ ಅನ್ವಯ ಆಗುವಂತೆ ಕೇಂದ್ರ ಸರ್ಕಾರ ಒಂದೇ ಆ್ಯಪ್​ನ್ನು ಬಳಕೆಗೆ ನೀಡಿದ್ದು, ಇದೀಗ ಮಹಾರಾಷ್ಟ್ರ ಮುಖ್ಯಮಂತ್ರಿ ತಾವು ಪ್ರತ್ಯೇಕ ಆ್ಯಪ್ ಬಳಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅತಿಹೆಚ್ಚಾಗಿದ್ದು, ದೇಶದಲ್ಲಿ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಶೇ.71.81ರಷ್ಟು ಮಹಾರಾಷ್ಟ್ರದಿಂದಲೇ ವರದಿಯಾಗುತ್ತಿದೆ.

ಇದನ್ನೂ ಓದಿ: ಅಮೇರಿಕಾದ ಹ್ಯಾರಿಸ್​ಬರ್ಗ್ ವಿಶ್ವವಿದ್ಯಾಲಯ ಜತೆ ಕರ್ನಾಟಕ ವಿಶ್ವವಿದ್ಯಾಲಯದ ಒಪ್ಪಂದ; ವರ್ಚುವಲ್ ಮೂಲಕ ಸಹಿ

‘ಇನ್ನು 3-4ತಿಂಗಳಲ್ಲಿ ಎಲ್ಲ ನಾಗರಿಕರಿಗೂ ಲಸಿಕೆ ಕೊಟ್ಟು ಮುಗಿಯಬೇಕು.. ’-ಉತ್ತರ ಪ್ರದೇಶ ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು