AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಕೊವಿನ್ ಆ್ಯಪ್​ ಬೇಡ.. ಪ್ರತ್ಯೇಕ ಆ್ಯಪ್​ ಬಳಕೆಗೆ ಅನುಮತಿ ನೀಡಿ’-ಕೇಂದ್ರ ಸರ್ಕಾರಕ್ಕೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮನವಿ

CoWIN ಆ್ಯಪ್​ನಲ್ಲಿ ದೋಷಗಳಿವೆ. ಅದು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹಾಗಾಗಿ ನಾವು ನಮ್ಮ ರಾಜ್ಯದಲ್ಲಿ ಬೇರೆ ಆ್ಯಪ್​​ನ್ನು ಜನರಿಗೆ ಪರಿಚಯಿಸಲು ನಿರ್ಧರಿಸಿದ್ದೇವೆ ಎಂದು ಉದ್ಧವ್​ ಠಾಕ್ರೆ ಹೇಳಿದ್ದಾರೆ.

ನಮಗೆ ಕೊವಿನ್ ಆ್ಯಪ್​ ಬೇಡ.. ಪ್ರತ್ಯೇಕ ಆ್ಯಪ್​ ಬಳಕೆಗೆ ಅನುಮತಿ ನೀಡಿ’-ಕೇಂದ್ರ ಸರ್ಕಾರಕ್ಕೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮನವಿ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
Lakshmi Hegde
|

Updated on: May 08, 2021 | 2:19 PM

Share

ಕೊರೊನಾ ಲಸಿಕೆ ಹಂಚಿಕೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ CoWIN ಆ್ಯಪ್​ ಪರಿಚಯಿಸಿದೆ. CoWIN ಮತ್ತು ಆರೋಗ್ಯ ಸೇತು ಆ್ಯಪ್​ನಲ್ಲಿ ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆಯಬೇಕು ಎಂದು ಹೇಳಿದೆ. ಹಾಗೇ, ದೇಶದ ಜನರು ಇದೆರಡು ಆ್ಯಪ್​ಗಳ ಮೂಲಕ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಹೆಚ್ಚಿನವರು CoWIN ಆ್ಯಪ್​ ಮೂಲಕ ನೋಂದಣಿ ಮಾಡಲು ಮುಂದಾಗುತ್ತಿದ್ದಾರೆ. ಹೀಗಿರುವಾಗ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನಮಗೆ ಲಸಿಕೆ ವಿತರಣೆಗೆ ಸಂಬಂಧಪಟ್ಟಂತೆ ಪ್ರತ್ಯೇಕ ಆ್ಯಪ್​ ಬಳಸಿಕೊಳ್ಳಲು ಅನುಮತಿ ನೀಡಬೇಕು ಎಂದು ಕೇಂದ್ರಸರ್ಕಾರವನ್ನು ಕೇಳಿದ್ದಾರೆ.

CoWIN ಆ್ಯಪ್​ನಲ್ಲಿ ದೋಷಗಳಿವೆ. ಅದು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹಾಗಾಗಿ ನಾವು ನಮ್ಮ ರಾಜ್ಯದಲ್ಲಿ ಬೇರೆ ಆ್ಯಪ್​​ನ್ನು ಜನರಿಗೆ ಪರಿಚಯಿಸಲು ನಿರ್ಧರಿಸಿದ್ದೇವೆ ಎಂದು ಉದ್ಧವ್​ ಠಾಕ್ರೆ ಹೇಳಿದ್ದಾರೆ. ಇದು ಕೇವಲ ಮಹಾರಾಷ್ಟ್ರ ಮುಖ್ಯಮಂತ್ರಿಯ ದೂರಲ್ಲ. ಇದನ್ನು ಡೌನ್​ಲೋಡ್ ಮಾಡಿಕೊಂಡು ಲಸಿಕೆಗಾಗಿ ಹೆಸರು ನೋಂದಣಿ ಮಾಡಿಸಿಕೊಳ್ಳಲು ಮುಂದಾದ ಅನೇಕ ಬಳಕೆದಾರರು ಆ್ಯಪ್​​ನಲ್ಲಿ ಸಮಸ್ಯೆ ಇದೆ ಎಂದು ಕಂಪ್ಲೇಂಟ್ ಮಾಡಿದ್ದಾರೆ. ನಾವು ಹೆಸರು ರಿಜಿಸ್ಟರ್ ಮಾಡಿರುತ್ತೇವೆ. ಆದರೆ ನಮ್ಮ ಅಪಾಯಿಂಟ್​ಮೆಂಟ್ ಮಿಸ್ ಆಗಿರುತ್ತದೆ. ಆದಾಗ್ಯೂ ನೀವು ಲಸಿಕೆ ಪಡೆದಿದ್ದೀರಿ ಎಂದು ನೋಟಿಫಿಕೇಶನ್ ಬರುತ್ತದೆ ಎಂದು ಹಲವರು ಹೇಳಿದ್ದಾರೆ. ಹಲವು ದೂರುಗಳು ಬಂದ ಬಳಿಕ ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ 4 ಡಿಜಿಟ್​ಗಳ ಒಂದು ಸೆಕ್ಯೂರಿಟಿ ಕೋಡ್​ನ ಫೀಚರ್​​ನ್ನು ಕೊವಿನ್​ ಪೋರ್ಟಲ್​​ನಲ್ಲಿ ಅಳವಡಿಸಿದೆ. ಹಾಗೇ ಈ ಸೆಕ್ಯೂರಿಟಿ ಕೋಡ್​ನಿಂದಾಗಿ ಆನ್​ಲೈನ್​ನಲ್ಲಿ ಹೆಸರು ನೋಂದಣಿ ಮಾಡಿಕೊಳ್ಳುವ, ಅಪಾಯಿಂಟ್​ಮೆಂಟ್ ಪಡೆಯುವ ವಿಧಾನಗಳಲ್ಲಿ ದೋಷ ಕಂಡುಬರುವ ಪ್ರಮಾಣ ತುಂಬ ಕಡಿಮೆ ಆಗಲಿದೆ ಎಂದೂ ಹೇಳಿಕೊಂಡಿದೆ.

ಸದ್ಯ ದೇಶದ ಎಲ್ಲ ಕಡೆಗಳಲ್ಲೂ ಅನ್ವಯ ಆಗುವಂತೆ ಕೇಂದ್ರ ಸರ್ಕಾರ ಒಂದೇ ಆ್ಯಪ್​ನ್ನು ಬಳಕೆಗೆ ನೀಡಿದ್ದು, ಇದೀಗ ಮಹಾರಾಷ್ಟ್ರ ಮುಖ್ಯಮಂತ್ರಿ ತಾವು ಪ್ರತ್ಯೇಕ ಆ್ಯಪ್ ಬಳಸುತ್ತಿದ್ದೇವೆ ಎಂದು ಹೇಳುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅತಿಹೆಚ್ಚಾಗಿದ್ದು, ದೇಶದಲ್ಲಿ ಒಂದು ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಶೇ.71.81ರಷ್ಟು ಮಹಾರಾಷ್ಟ್ರದಿಂದಲೇ ವರದಿಯಾಗುತ್ತಿದೆ.

ಇದನ್ನೂ ಓದಿ: ಅಮೇರಿಕಾದ ಹ್ಯಾರಿಸ್​ಬರ್ಗ್ ವಿಶ್ವವಿದ್ಯಾಲಯ ಜತೆ ಕರ್ನಾಟಕ ವಿಶ್ವವಿದ್ಯಾಲಯದ ಒಪ್ಪಂದ; ವರ್ಚುವಲ್ ಮೂಲಕ ಸಹಿ

‘ಇನ್ನು 3-4ತಿಂಗಳಲ್ಲಿ ಎಲ್ಲ ನಾಗರಿಕರಿಗೂ ಲಸಿಕೆ ಕೊಟ್ಟು ಮುಗಿಯಬೇಕು.. ’-ಉತ್ತರ ಪ್ರದೇಶ ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?