AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ; ಮಧ್ಯ ಪ್ರವೇಶಿಸಲು ಪ್ರಧಾನಿ ಮೋದಿಗೆ ಸಿಎಂ ಉದ್ಧವ್ ಠಾಕ್ರೆ ಒತ್ತಾಯ

ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ, ಛತ್ರಪತಿ ಶಿವಾಜಿ ಮಹಾರಾಜರನ್ನು ಮಹಾರಾಷ್ಟ್ರ ಮಾತ್ರವಲ್ಲದೆ ದೇಶಾದ್ಯಂತ ಪೂಜಿಸಲಾಗುತ್ತಿದ್ದು, ಅವರಿಗೆ ಮಾಡಿದ ಅವಮಾನವನ್ನು ಸಹಿಸುವುದಿಲ್ಲ. ಈ ಅನಗತ್ಯ ಘಟನೆಯ ಸಂಪೂರ್ಣ ತನಿಖೆ ಅಗತ್ಯವಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ; ಮಧ್ಯ ಪ್ರವೇಶಿಸಲು ಪ್ರಧಾನಿ ಮೋದಿಗೆ ಸಿಎಂ ಉದ್ಧವ್ ಠಾಕ್ರೆ ಒತ್ತಾಯ
ಉದ್ಧವ್ ಠಾಕ್ರೆ
TV9 Web
| Edited By: |

Updated on: Dec 19, 2021 | 12:15 PM

Share

ಮುಂಬೈ: ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಆರೋಪದ ನಂತರ ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇದನ್ನು ವಿರೋಧಿಸಿ ಬೆಳಗಾವಿ, ಮುಂಬೈ, ಕೊಲ್ಲಾಪುರ, ಸಾಂಗ್ಲಿಯಲ್ಲಿ ಪ್ರತಿಭಟನೆಗಳು ನಡೆದಿದ್ದು, ಮಹಾರಾಷ್ಟ್ರದ ಎಲ್ಲ ಪಕ್ಷಗಳ ಮುಖಂಡರು ಕೃತ್ಯವನ್ನು ಖಂಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದಾರೆ. ಹಾಗೇ, ಘಟನೆಗೆ ಕಾರಣರಾದ ಜನರ ವಿರುದ್ಧ ಮತ್ತು ಕರ್ನಾಟಕದಲ್ಲಿ ಮರಾಠಿ ಮಾತನಾಡುವ ಜನರ ಮೇಲಿನ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ, ಛತ್ರಪತಿ ಶಿವಾಜಿ ಮಹಾರಾಜರನ್ನು ಮಹಾರಾಷ್ಟ್ರ ಮಾತ್ರವಲ್ಲದೆ ದೇಶಾದ್ಯಂತ ಪೂಜಿಸಲಾಗುತ್ತಿದ್ದು, ಅವರಿಗೆ ಮಾಡಿದ ಅವಮಾನವನ್ನು ಸಹಿಸುವುದಿಲ್ಲ. ಈ ಅನಗತ್ಯ ಘಟನೆಯ ಸಂಪೂರ್ಣ ತನಿಖೆ ಅಗತ್ಯವಿದೆ. ಬೆಳಗಾವಿಯ ಗಡಿ ಭಾಗದ ಮರಾಠಿ ಭಾಷಿಕ ಜನರು ವರ್ಷಗಳಿಂದ ದೌರ್ಜನ್ಯ ಎದುರಿಸುತ್ತಿದ್ದಾರೆ. ಇದೀಗ ಶಿವಾಜಿ ಪ್ರತಿಮೆಗೆ ಧ್ವಂಸ ಮಾಡಿರುವ ಘಟನೆ ನಡೆದಿದೆ, ಆದರೂ ಕರ್ನಾಟಕ ರಾಜ್ಯ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಉದ್ಧವ್ ಠಾಕ್ರೆ ಕಿಡಿ ಕಾರಿದ್ದಾರೆ.

ಈ ವಾರದ ಆರಂಭದಲ್ಲಿ ಕಾಶಿಯಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಶಕ್ತಿ ಮತ್ತು ಪರಾಕ್ರಮವನ್ನು ಹೊಗಳಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಅವಹೇಳನಕಾರಿ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿದ ಮರಾಠಿ ಮಾತನಾಡುವ ಜನರ ಧ್ವನಿಯನ್ನು ಸ್ಥಳೀಯ ಕರ್ನಾಟಕ ಸರ್ಕಾರ ಹತ್ತಿಕ್ಕುತ್ತಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೆಲವರು ಶಿವಾಜಿ ಮಹಾರಾಜರ ಹೆಸರನ್ನು ರಾಜಕೀಯಕ್ಕೆ ಬಳಸುತ್ತಾರೆ. ಆದರೆ ಅವರಿಗೆ ಅಗೌರವ ತೋರಿದಾಗ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಮರಾಠಿ ಅಭಿಮಾನವನ್ನು ಅವಮಾನಿಸಿದ್ದಕ್ಕಾಗಿ ಅವರು ಬೆಲೆ ತೆರಬೇಕಾಗುತ್ತದೆ ಎಂದು ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್, ಕೇಂದ್ರ ಮತ್ತು ಕರ್ನಾಟಕ ಸರ್ಕಾರವು ಈ ಸಂಪೂರ್ಣ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಹಾಗೇ, ಇಂತಹ ಕೃತ್ಯಗಳು ಪುನರಾವರ್ತನೆಯಾಗದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮಹಾರಾಷ್ಟ್ರದ ಜನರ ಭಾವನೆಗಳಿಗೆ ತೀವ್ರ ಧಕ್ಕೆಯಾಗಿದೆ. ಅದರ ಹಿಂದಿರುವ ಜನರನ್ನು ಮತ್ತು ಅವರನ್ನು ರಕ್ಷಿಸುತ್ತಿರುವವರನ್ನು ಅವರು ಎಂದಿಗೂ ಕ್ಷಮಿಸುವುದಿಲ್ಲ ಎಂದಿದ್ದಾರೆ.

ಇನ್ನು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದವರ ವಿರುದ್ಧ ಕಠಿಣಕ್ರಮ ಕೈಗೊಳ್ಳುತ್ತೇವೆ. ಬೆಳಗಾವಿಯಲ್ಲಿ ಈಗಾಗಲೇ ಕೆಲ ಆರೋಪಿಗಳ ಬಂಧನ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಮೆಗಳನ್ನು ಮಾಡಿರುವುದು ಗೌರವ ಸೂಚಿಸುವುದಕ್ಕಾಗಿ. ಅಂಥ ಮಹಾನ್ ನಾಯಕರನ್ನು ಅಪಮಾನಿಸುವುದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಸದಾಶಿವನಗರದ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿಯೂ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸದಾಶಿವನಗರ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ 7 ಆರೋಪಿಗಳು ಅರೆಸ್ಟ್

ಬೆಂಗಳೂರು: ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ