AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ: ಮಹಾರಾಷ್ಟ್ರ ಕಾಂಗ್ರೆಸ್ ಬೆದರಿಕೆ

Fuel Price : ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್, ಮೋದಿ ನಿಲುವು ಹೊಂದಿರುವುದನ್ನು ಖಂಡಿಸಿದ ಪಟೋಲೆ, ಈ ನಟರು ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಇಂಧನ ಏರಿಕೆ ಬೆಲೆಯನ್ನು ಖಂಡಿಸಿದ್ದರು. ಆದರೆ ಈಗ ಮೌನವಹಿಸಿದ್ದಾರೆ ಎಂದು ಗುಡುಗಿದ್ದಾರೆ.

ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ: ಮಹಾರಾಷ್ಟ್ರ ಕಾಂಗ್ರೆಸ್ ಬೆದರಿಕೆ
ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್
ರಶ್ಮಿ ಕಲ್ಲಕಟ್ಟ
|

Updated on: Feb 19, 2021 | 3:41 PM

Share

ಮುಂಬೈ: ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಇಂಧನ ಏರಿಕೆ ಬಗ್ಗೆ ಮೌನ ವಹಿಸಿದ್ದೇಕೆ ಎಂದು ಪ್ರಶ್ನಿಸಿರುವ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಈ ನಟರ ಸಿನಿಮಾಗಳನ್ನು ರಾಜ್ಯದಲ್ಲಿ ತೆರೆ ಕಾಣಲು ಬಿಡುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದಾರೆ.

ಬಚ್ಚನ್ ಮತ್ತು ಅಕ್ಷಯ್ ಕುಮಾರ್, ಮೋದಿ ನಿಲುವು ಹೊಂದಿರುವುದನ್ನು ಖಂಡಿಸಿದ ಪಟೋಲೆ, ಈ ನಟರು ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಇಂಧನ ಏರಿಕೆ ಬೆಲೆಯನ್ನು ಖಂಡಿಸಿದ್ದರು. ಆದರೆ ಈಗ ಮೌನವಹಿಸಿದ್ದಾರೆ. ಬಚ್ಚನ್ ಮತ್ತು ಇತರ ಸೆಲೆಬ್ರಿಟಿಗಳು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಅವಧಿಯಲ್ಲಿ ಅಂದರೆ ಮೇ 24 , 2012ರಂದು ಇಂಧನ ಬೆಲೆ ಬಗ್ಗೆ ಟ್ವೀಟ್ ಮಾಡಿದ್ದರು. ಆದರೆ ಇಂಧನ ಬೆಲೆ ಏರಿಕೆಯಾಗಿ ಸಾರ್ವತ್ರಿಕ ದಾಖಲೆ ಸೃಷ್ಟಿಸಿರುವಾಗ ಇವರೆಲ್ಲರೂ ಸುಮ್ಮನಿದ್ದಾರೆ.

ಯುಪಿಎ ಸರ್ಕಾರ ಪ್ರಜಾಪ್ರಭುತ್ವ ಸರ್ಕಾರವಾಗಿತ್ತು. ಆಗ ಇಂಧನ ಬೆಲೆ ಏರಿಕೆಯಾಗಿದ್ದನ್ನು ಖಂಡಿಸಿ ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದರು. ಈಗ ಪೆಟ್ರೊಲ್ ಬೆಲೆ 100ಕ್ಕೇರಿದೆ. ಈಗ ಅವರು ಮೋದಿ ಸರ್ಕಾರದ ಸರ್ವಾಧಿಕಾರ ಧೋರಣೆ ಬಗ್ಗೆ ಮಾತನಾಡುತ್ತಿಲ್ಲವೇಕೆ? ಎಂದು ಪಟೋಲೆ ಟ್ವೀಟ್ ಮಾಡಿದ್ದಾರೆ.

ಇವರ ಜಾಣಮೌನವನ್ನು ನಾವು ಖಂಡಿಸುತ್ತೇವೆ. ಈ ನಟರ ಯಾವುದೇ ಸಿನಿಮಾಗಳು, ಸಿನಿಮಾ ಚಿತ್ರೀಕಣ ಮಹಾರಾಷ್ಟ್ರದಲ್ಲಿ ನಡೆಯದಂತೆ ನಾವು ತಡೆಯೊಡ್ಡುತ್ತೇವೆ ಎಂದು ಪಟೋಲೆ ಹೇಳಿದ್ದಾರೆ.

ಇದನ್ನೂ ಓದಿ:  Petrol/Diesel Price: ಪೆಟ್ರೋಲ್ ದರ ಸಾರ್ವತ್ರಿಕ ದಾಖಲೆ -31 ಪೈಸೆ ಹೆಚ್ಚಳ, ಇಳಿಕೆಯ ಮಾತೇ ಇಲ್ಲ!

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು