AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ: ಮಹಾರಾಷ್ಟ್ರ ಕಾಂಗ್ರೆಸ್ ಬೆದರಿಕೆ

Fuel Price : ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್, ಮೋದಿ ನಿಲುವು ಹೊಂದಿರುವುದನ್ನು ಖಂಡಿಸಿದ ಪಟೋಲೆ, ಈ ನಟರು ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಇಂಧನ ಏರಿಕೆ ಬೆಲೆಯನ್ನು ಖಂಡಿಸಿದ್ದರು. ಆದರೆ ಈಗ ಮೌನವಹಿಸಿದ್ದಾರೆ ಎಂದು ಗುಡುಗಿದ್ದಾರೆ.

ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ: ಮಹಾರಾಷ್ಟ್ರ ಕಾಂಗ್ರೆಸ್ ಬೆದರಿಕೆ
ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 19, 2021 | 3:41 PM

Share

ಮುಂಬೈ: ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಇಂಧನ ಏರಿಕೆ ಬಗ್ಗೆ ಮೌನ ವಹಿಸಿದ್ದೇಕೆ ಎಂದು ಪ್ರಶ್ನಿಸಿರುವ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಈ ನಟರ ಸಿನಿಮಾಗಳನ್ನು ರಾಜ್ಯದಲ್ಲಿ ತೆರೆ ಕಾಣಲು ಬಿಡುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದಾರೆ.

ಬಚ್ಚನ್ ಮತ್ತು ಅಕ್ಷಯ್ ಕುಮಾರ್, ಮೋದಿ ನಿಲುವು ಹೊಂದಿರುವುದನ್ನು ಖಂಡಿಸಿದ ಪಟೋಲೆ, ಈ ನಟರು ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಇಂಧನ ಏರಿಕೆ ಬೆಲೆಯನ್ನು ಖಂಡಿಸಿದ್ದರು. ಆದರೆ ಈಗ ಮೌನವಹಿಸಿದ್ದಾರೆ. ಬಚ್ಚನ್ ಮತ್ತು ಇತರ ಸೆಲೆಬ್ರಿಟಿಗಳು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಅವಧಿಯಲ್ಲಿ ಅಂದರೆ ಮೇ 24 , 2012ರಂದು ಇಂಧನ ಬೆಲೆ ಬಗ್ಗೆ ಟ್ವೀಟ್ ಮಾಡಿದ್ದರು. ಆದರೆ ಇಂಧನ ಬೆಲೆ ಏರಿಕೆಯಾಗಿ ಸಾರ್ವತ್ರಿಕ ದಾಖಲೆ ಸೃಷ್ಟಿಸಿರುವಾಗ ಇವರೆಲ್ಲರೂ ಸುಮ್ಮನಿದ್ದಾರೆ.

ಯುಪಿಎ ಸರ್ಕಾರ ಪ್ರಜಾಪ್ರಭುತ್ವ ಸರ್ಕಾರವಾಗಿತ್ತು. ಆಗ ಇಂಧನ ಬೆಲೆ ಏರಿಕೆಯಾಗಿದ್ದನ್ನು ಖಂಡಿಸಿ ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದರು. ಈಗ ಪೆಟ್ರೊಲ್ ಬೆಲೆ 100ಕ್ಕೇರಿದೆ. ಈಗ ಅವರು ಮೋದಿ ಸರ್ಕಾರದ ಸರ್ವಾಧಿಕಾರ ಧೋರಣೆ ಬಗ್ಗೆ ಮಾತನಾಡುತ್ತಿಲ್ಲವೇಕೆ? ಎಂದು ಪಟೋಲೆ ಟ್ವೀಟ್ ಮಾಡಿದ್ದಾರೆ.

ಇವರ ಜಾಣಮೌನವನ್ನು ನಾವು ಖಂಡಿಸುತ್ತೇವೆ. ಈ ನಟರ ಯಾವುದೇ ಸಿನಿಮಾಗಳು, ಸಿನಿಮಾ ಚಿತ್ರೀಕಣ ಮಹಾರಾಷ್ಟ್ರದಲ್ಲಿ ನಡೆಯದಂತೆ ನಾವು ತಡೆಯೊಡ್ಡುತ್ತೇವೆ ಎಂದು ಪಟೋಲೆ ಹೇಳಿದ್ದಾರೆ.

ಇದನ್ನೂ ಓದಿ:  Petrol/Diesel Price: ಪೆಟ್ರೋಲ್ ದರ ಸಾರ್ವತ್ರಿಕ ದಾಖಲೆ -31 ಪೈಸೆ ಹೆಚ್ಚಳ, ಇಳಿಕೆಯ ಮಾತೇ ಇಲ್ಲ!

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ