AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ: ಮಹಾರಾಷ್ಟ್ರ ಕಾಂಗ್ರೆಸ್ ಬೆದರಿಕೆ

Fuel Price : ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್, ಮೋದಿ ನಿಲುವು ಹೊಂದಿರುವುದನ್ನು ಖಂಡಿಸಿದ ಪಟೋಲೆ, ಈ ನಟರು ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಇಂಧನ ಏರಿಕೆ ಬೆಲೆಯನ್ನು ಖಂಡಿಸಿದ್ದರು. ಆದರೆ ಈಗ ಮೌನವಹಿಸಿದ್ದಾರೆ ಎಂದು ಗುಡುಗಿದ್ದಾರೆ.

ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸಿನಿಮಾ ಪ್ರದರ್ಶನಕ್ಕೆ ತಡೆ: ಮಹಾರಾಷ್ಟ್ರ ಕಾಂಗ್ರೆಸ್ ಬೆದರಿಕೆ
ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್
ರಶ್ಮಿ ಕಲ್ಲಕಟ್ಟ
|

Updated on: Feb 19, 2021 | 3:41 PM

Share

ಮುಂಬೈ: ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಮತ್ತು ಅಕ್ಷಯ್ ಕುಮಾರ್ ಇಂಧನ ಏರಿಕೆ ಬಗ್ಗೆ ಮೌನ ವಹಿಸಿದ್ದೇಕೆ ಎಂದು ಪ್ರಶ್ನಿಸಿರುವ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಈ ನಟರ ಸಿನಿಮಾಗಳನ್ನು ರಾಜ್ಯದಲ್ಲಿ ತೆರೆ ಕಾಣಲು ಬಿಡುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದಾರೆ.

ಬಚ್ಚನ್ ಮತ್ತು ಅಕ್ಷಯ್ ಕುಮಾರ್, ಮೋದಿ ನಿಲುವು ಹೊಂದಿರುವುದನ್ನು ಖಂಡಿಸಿದ ಪಟೋಲೆ, ಈ ನಟರು ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಇಂಧನ ಏರಿಕೆ ಬೆಲೆಯನ್ನು ಖಂಡಿಸಿದ್ದರು. ಆದರೆ ಈಗ ಮೌನವಹಿಸಿದ್ದಾರೆ. ಬಚ್ಚನ್ ಮತ್ತು ಇತರ ಸೆಲೆಬ್ರಿಟಿಗಳು ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಅವಧಿಯಲ್ಲಿ ಅಂದರೆ ಮೇ 24 , 2012ರಂದು ಇಂಧನ ಬೆಲೆ ಬಗ್ಗೆ ಟ್ವೀಟ್ ಮಾಡಿದ್ದರು. ಆದರೆ ಇಂಧನ ಬೆಲೆ ಏರಿಕೆಯಾಗಿ ಸಾರ್ವತ್ರಿಕ ದಾಖಲೆ ಸೃಷ್ಟಿಸಿರುವಾಗ ಇವರೆಲ್ಲರೂ ಸುಮ್ಮನಿದ್ದಾರೆ.

ಯುಪಿಎ ಸರ್ಕಾರ ಪ್ರಜಾಪ್ರಭುತ್ವ ಸರ್ಕಾರವಾಗಿತ್ತು. ಆಗ ಇಂಧನ ಬೆಲೆ ಏರಿಕೆಯಾಗಿದ್ದನ್ನು ಖಂಡಿಸಿ ಅಮಿತಾಬ್ ಬಚ್ಚನ್, ಅಕ್ಷಯ್ ಕುಮಾರ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಟ್ವೀಟ್ ಮಾಡಿದ್ದರು. ಈಗ ಪೆಟ್ರೊಲ್ ಬೆಲೆ 100ಕ್ಕೇರಿದೆ. ಈಗ ಅವರು ಮೋದಿ ಸರ್ಕಾರದ ಸರ್ವಾಧಿಕಾರ ಧೋರಣೆ ಬಗ್ಗೆ ಮಾತನಾಡುತ್ತಿಲ್ಲವೇಕೆ? ಎಂದು ಪಟೋಲೆ ಟ್ವೀಟ್ ಮಾಡಿದ್ದಾರೆ.

ಇವರ ಜಾಣಮೌನವನ್ನು ನಾವು ಖಂಡಿಸುತ್ತೇವೆ. ಈ ನಟರ ಯಾವುದೇ ಸಿನಿಮಾಗಳು, ಸಿನಿಮಾ ಚಿತ್ರೀಕಣ ಮಹಾರಾಷ್ಟ್ರದಲ್ಲಿ ನಡೆಯದಂತೆ ನಾವು ತಡೆಯೊಡ್ಡುತ್ತೇವೆ ಎಂದು ಪಟೋಲೆ ಹೇಳಿದ್ದಾರೆ.

ಇದನ್ನೂ ಓದಿ:  Petrol/Diesel Price: ಪೆಟ್ರೋಲ್ ದರ ಸಾರ್ವತ್ರಿಕ ದಾಖಲೆ -31 ಪೈಸೆ ಹೆಚ್ಚಳ, ಇಳಿಕೆಯ ಮಾತೇ ಇಲ್ಲ!

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?