AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಡಿಸ್​ ಹಾಸ್ಟೆಲ್​ಗೆ ನುಗ್ಗಿ ಹುಡುಗಿಯರ ಬಟ್ಟೆ ಬಿಚ್ಚಿಸಿ ಡ್ಯಾನ್ಸ್ ಮಾಡಿಸಿದ ಪೊಲೀಸರು, ತನಿಖೆಗೆ ಆದೇಶ

ಈ ಘಟನೆಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಜನರನ್ನು ರಕ್ಷಣೆ ಮಾಡಬೇಕಿರುವ ಪೊಲೀಸರೇ ಈ ರೀತಿ ಮಾಡಿದರೆ ಹೇಗೆ ಎನ್ನುವ ಪ್ರಶ್ನೆಯನ್ನು ಕೇಳಿಕೊಳ್ಳುತ್ತಿದ್ದಾರೆ. 

ಲೇಡಿಸ್​ ಹಾಸ್ಟೆಲ್​ಗೆ ನುಗ್ಗಿ ಹುಡುಗಿಯರ ಬಟ್ಟೆ ಬಿಚ್ಚಿಸಿ ಡ್ಯಾನ್ಸ್ ಮಾಡಿಸಿದ ಪೊಲೀಸರು, ತನಿಖೆಗೆ ಆದೇಶ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Mar 03, 2021 | 6:46 PM

Share

ಹೆಣ್ಣುಮಕ್ಕಳಿಗೆ ತೊಂದರೆ ಉಂಟಾದರೆ ಪೊಲೀಸರು ಅವರನ್ನು ರಕ್ಷಿಸುವ ಕಾರ್ಯ ಮಾಡಬೇಕು. ಆದರೆ, ಮಹಾರಾಷ್ಟ್ರದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಕೆಲಸವಾಗಿದೆ. ರಕ್ಷಣೆ ಮಾಡಬೇಕಿದ್ದ ಪೊಲೀಸರೇ ಸರ್ಕಾರ ನಡೆಸುತ್ತಿರುವ ಲೇಡಿಸ್​ ಹಾಸ್ಟೇಲ್​ಗೆ ನುಗ್ಗಿ, ಹೆಣ್ಣು ಮಕ್ಕಳ ಬಟ್ಟೆ ಬಿಚ್ಚಿಸಿ ಡ್ಯಾನ್ಸ್​ ಮಾಡಿಸಿದ್ದಾರೆ. ಈ ನಾಚಿಕೆಗೇಡಿನ ಕೃತ್ಯಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಮಹಾರಾಷ್ಟ್ರದ ಜಲ್ಗಾಂವ್ ನಗರದಲ್ಲಿ ಲೇಡಿಸ್​ ಹಾಸ್ಟೆಲ್​ ಒಂದಿದೆ. ಇದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ನಡೆಸುತ್ತಿದ್ದಾರೆ. ರಾತ್ರಿ ವೇಳೆ ಪೊಲೀಸರು ಹಾಗೂ ಕೆಲ ವ್ಯಕ್ತಿಗಳು ಹಾಸ್ಟೆಲ್​ ಒಳಗೆ ನುಗ್ಗಿದ್ದಾರೆ. ಎದುರು ಸಿಕ್ಕ ಕೆಲ ಹುಡುಗಿಯರ ಬಟ್ಟೆ ಬಿಚ್ಚಿಸಿದ್ದಾರೆ. ನಂತರ ಅವರ ಬಳಿ ಡ್ಯಾನ್ಸ್​ ಮಾಡಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಕೆಳಮನೆಯಲ್ಲಿ ಚಿಖ್ಲಿ ಕ್ಷೇತ್ರದ ಶಾಸಕಿ ಶ್ವೇತಾ ಮಹಾಲೆ ಈ ವಿಚಾರದ ಬಗ್ಗೆ ಆಕ್ಷೇಪ ಹೊರ ಹಾಕಿದ್ದಾರೆ. ಸ್ಥಳೀಯ ಎನ್​ಜಿಒಗಳು ಕೂಡ ಈ ಬಗ್ಗೆ ಧ್ವನಿ ಎತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

ಪೊಲೀಸರು ಸಹ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ರಾಜ್ಯಕ್ಕೆ ಅವಮಾನ ತಂದಿದೆ. ಮಹಿಳೆಯರಿಗೆ ಭದ್ರತೆ ಒದಗಿಸುವ ಜವಾಬ್ದಾರಿಯುಳ್ಳವರು ಕಿರುಕುಳ ಕೊಡುವವರಾಗಿ ಬದಲಾಗುತ್ತಿದ್ದಾರೆ. ಈ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಶ್ವೇತಾ ಮಹಾಲೆ ಹೇಳಿದ್ದಾರೆ. ಈ ಕುರಿತು ತನಿಖೆ ನಡೆಸಲು ಗೃಹ ಸಚಿವ ಅನಿಲ್ ದೇಶ್​​ಮುಖ್​ ಆದೇಶಿಸಿದ್ದಾರೆ. ಘಟನೆ ತನಿಖೆ ನಡೆಸಲು ರಾಜ್ಯವು 4 ಸದಸ್ಯರ ಸಮಿತಿಯನ್ನು ರಚಿಸಿ ಎರಡು ದಿನಗಳಲ್ಲಿ ವರದಿ ಸಲ್ಲಿಸಲಿದೆ ಎಂದು ದೇಶ್​​ಮುಖ್​ ಹೇಳಿದ್ದಾರೆ.

ಈ ಘಟನೆಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಜನರನ್ನು ರಕ್ಷಣೆ ಮಾಡಬೇಕಿರುವ ಪೊಲೀಸರೇ ಈ ರೀತಿ ಮಾಡಿದರೆ ಹೇಗೆ ಎನ್ನುವ ಪ್ರಶ್ನೆ ಕೇಳಿಬರುತ್ತಿದೆ.

ಇದನ್ನೂ ಓದಿ: ಪಾರದರ್ಶಕ ಬಟ್ಟೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಕ್ಕೆ ಶ್ರೀದೇವಿ ಮಗಳು ಖುಷಿ ಕಪೂರ್ ಟ್ರೋಲ್​

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ