AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಡಿಸ್​ ಹಾಸ್ಟೆಲ್​ಗೆ ನುಗ್ಗಿ ಹುಡುಗಿಯರ ಬಟ್ಟೆ ಬಿಚ್ಚಿಸಿ ಡ್ಯಾನ್ಸ್ ಮಾಡಿಸಿದ ಪೊಲೀಸರು, ತನಿಖೆಗೆ ಆದೇಶ

ಈ ಘಟನೆಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಜನರನ್ನು ರಕ್ಷಣೆ ಮಾಡಬೇಕಿರುವ ಪೊಲೀಸರೇ ಈ ರೀತಿ ಮಾಡಿದರೆ ಹೇಗೆ ಎನ್ನುವ ಪ್ರಶ್ನೆಯನ್ನು ಕೇಳಿಕೊಳ್ಳುತ್ತಿದ್ದಾರೆ. 

ಲೇಡಿಸ್​ ಹಾಸ್ಟೆಲ್​ಗೆ ನುಗ್ಗಿ ಹುಡುಗಿಯರ ಬಟ್ಟೆ ಬಿಚ್ಚಿಸಿ ಡ್ಯಾನ್ಸ್ ಮಾಡಿಸಿದ ಪೊಲೀಸರು, ತನಿಖೆಗೆ ಆದೇಶ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Mar 03, 2021 | 6:46 PM

Share

ಹೆಣ್ಣುಮಕ್ಕಳಿಗೆ ತೊಂದರೆ ಉಂಟಾದರೆ ಪೊಲೀಸರು ಅವರನ್ನು ರಕ್ಷಿಸುವ ಕಾರ್ಯ ಮಾಡಬೇಕು. ಆದರೆ, ಮಹಾರಾಷ್ಟ್ರದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಕೆಲಸವಾಗಿದೆ. ರಕ್ಷಣೆ ಮಾಡಬೇಕಿದ್ದ ಪೊಲೀಸರೇ ಸರ್ಕಾರ ನಡೆಸುತ್ತಿರುವ ಲೇಡಿಸ್​ ಹಾಸ್ಟೇಲ್​ಗೆ ನುಗ್ಗಿ, ಹೆಣ್ಣು ಮಕ್ಕಳ ಬಟ್ಟೆ ಬಿಚ್ಚಿಸಿ ಡ್ಯಾನ್ಸ್​ ಮಾಡಿಸಿದ್ದಾರೆ. ಈ ನಾಚಿಕೆಗೇಡಿನ ಕೃತ್ಯಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಮಹಾರಾಷ್ಟ್ರದ ಜಲ್ಗಾಂವ್ ನಗರದಲ್ಲಿ ಲೇಡಿಸ್​ ಹಾಸ್ಟೆಲ್​ ಒಂದಿದೆ. ಇದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ನಡೆಸುತ್ತಿದ್ದಾರೆ. ರಾತ್ರಿ ವೇಳೆ ಪೊಲೀಸರು ಹಾಗೂ ಕೆಲ ವ್ಯಕ್ತಿಗಳು ಹಾಸ್ಟೆಲ್​ ಒಳಗೆ ನುಗ್ಗಿದ್ದಾರೆ. ಎದುರು ಸಿಕ್ಕ ಕೆಲ ಹುಡುಗಿಯರ ಬಟ್ಟೆ ಬಿಚ್ಚಿಸಿದ್ದಾರೆ. ನಂತರ ಅವರ ಬಳಿ ಡ್ಯಾನ್ಸ್​ ಮಾಡಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಕೆಳಮನೆಯಲ್ಲಿ ಚಿಖ್ಲಿ ಕ್ಷೇತ್ರದ ಶಾಸಕಿ ಶ್ವೇತಾ ಮಹಾಲೆ ಈ ವಿಚಾರದ ಬಗ್ಗೆ ಆಕ್ಷೇಪ ಹೊರ ಹಾಕಿದ್ದಾರೆ. ಸ್ಥಳೀಯ ಎನ್​ಜಿಒಗಳು ಕೂಡ ಈ ಬಗ್ಗೆ ಧ್ವನಿ ಎತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

ಪೊಲೀಸರು ಸಹ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ರಾಜ್ಯಕ್ಕೆ ಅವಮಾನ ತಂದಿದೆ. ಮಹಿಳೆಯರಿಗೆ ಭದ್ರತೆ ಒದಗಿಸುವ ಜವಾಬ್ದಾರಿಯುಳ್ಳವರು ಕಿರುಕುಳ ಕೊಡುವವರಾಗಿ ಬದಲಾಗುತ್ತಿದ್ದಾರೆ. ಈ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಶ್ವೇತಾ ಮಹಾಲೆ ಹೇಳಿದ್ದಾರೆ. ಈ ಕುರಿತು ತನಿಖೆ ನಡೆಸಲು ಗೃಹ ಸಚಿವ ಅನಿಲ್ ದೇಶ್​​ಮುಖ್​ ಆದೇಶಿಸಿದ್ದಾರೆ. ಘಟನೆ ತನಿಖೆ ನಡೆಸಲು ರಾಜ್ಯವು 4 ಸದಸ್ಯರ ಸಮಿತಿಯನ್ನು ರಚಿಸಿ ಎರಡು ದಿನಗಳಲ್ಲಿ ವರದಿ ಸಲ್ಲಿಸಲಿದೆ ಎಂದು ದೇಶ್​​ಮುಖ್​ ಹೇಳಿದ್ದಾರೆ.

ಈ ಘಟನೆಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಜನರನ್ನು ರಕ್ಷಣೆ ಮಾಡಬೇಕಿರುವ ಪೊಲೀಸರೇ ಈ ರೀತಿ ಮಾಡಿದರೆ ಹೇಗೆ ಎನ್ನುವ ಪ್ರಶ್ನೆ ಕೇಳಿಬರುತ್ತಿದೆ.

ಇದನ್ನೂ ಓದಿ: ಪಾರದರ್ಶಕ ಬಟ್ಟೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಕ್ಕೆ ಶ್ರೀದೇವಿ ಮಗಳು ಖುಷಿ ಕಪೂರ್ ಟ್ರೋಲ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ