AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಡಿಸ್​ ಹಾಸ್ಟೆಲ್​ಗೆ ನುಗ್ಗಿ ಹುಡುಗಿಯರ ಬಟ್ಟೆ ಬಿಚ್ಚಿಸಿ ಡ್ಯಾನ್ಸ್ ಮಾಡಿಸಿದ ಪೊಲೀಸರು, ತನಿಖೆಗೆ ಆದೇಶ

ಈ ಘಟನೆಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಜನರನ್ನು ರಕ್ಷಣೆ ಮಾಡಬೇಕಿರುವ ಪೊಲೀಸರೇ ಈ ರೀತಿ ಮಾಡಿದರೆ ಹೇಗೆ ಎನ್ನುವ ಪ್ರಶ್ನೆಯನ್ನು ಕೇಳಿಕೊಳ್ಳುತ್ತಿದ್ದಾರೆ. 

ಲೇಡಿಸ್​ ಹಾಸ್ಟೆಲ್​ಗೆ ನುಗ್ಗಿ ಹುಡುಗಿಯರ ಬಟ್ಟೆ ಬಿಚ್ಚಿಸಿ ಡ್ಯಾನ್ಸ್ ಮಾಡಿಸಿದ ಪೊಲೀಸರು, ತನಿಖೆಗೆ ಆದೇಶ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Mar 03, 2021 | 6:46 PM

Share

ಹೆಣ್ಣುಮಕ್ಕಳಿಗೆ ತೊಂದರೆ ಉಂಟಾದರೆ ಪೊಲೀಸರು ಅವರನ್ನು ರಕ್ಷಿಸುವ ಕಾರ್ಯ ಮಾಡಬೇಕು. ಆದರೆ, ಮಹಾರಾಷ್ಟ್ರದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಕೆಲಸವಾಗಿದೆ. ರಕ್ಷಣೆ ಮಾಡಬೇಕಿದ್ದ ಪೊಲೀಸರೇ ಸರ್ಕಾರ ನಡೆಸುತ್ತಿರುವ ಲೇಡಿಸ್​ ಹಾಸ್ಟೇಲ್​ಗೆ ನುಗ್ಗಿ, ಹೆಣ್ಣು ಮಕ್ಕಳ ಬಟ್ಟೆ ಬಿಚ್ಚಿಸಿ ಡ್ಯಾನ್ಸ್​ ಮಾಡಿಸಿದ್ದಾರೆ. ಈ ನಾಚಿಕೆಗೇಡಿನ ಕೃತ್ಯಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಮಹಾರಾಷ್ಟ್ರದ ಜಲ್ಗಾಂವ್ ನಗರದಲ್ಲಿ ಲೇಡಿಸ್​ ಹಾಸ್ಟೆಲ್​ ಒಂದಿದೆ. ಇದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ನಡೆಸುತ್ತಿದ್ದಾರೆ. ರಾತ್ರಿ ವೇಳೆ ಪೊಲೀಸರು ಹಾಗೂ ಕೆಲ ವ್ಯಕ್ತಿಗಳು ಹಾಸ್ಟೆಲ್​ ಒಳಗೆ ನುಗ್ಗಿದ್ದಾರೆ. ಎದುರು ಸಿಕ್ಕ ಕೆಲ ಹುಡುಗಿಯರ ಬಟ್ಟೆ ಬಿಚ್ಚಿಸಿದ್ದಾರೆ. ನಂತರ ಅವರ ಬಳಿ ಡ್ಯಾನ್ಸ್​ ಮಾಡಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಕೆಳಮನೆಯಲ್ಲಿ ಚಿಖ್ಲಿ ಕ್ಷೇತ್ರದ ಶಾಸಕಿ ಶ್ವೇತಾ ಮಹಾಲೆ ಈ ವಿಚಾರದ ಬಗ್ಗೆ ಆಕ್ಷೇಪ ಹೊರ ಹಾಕಿದ್ದಾರೆ. ಸ್ಥಳೀಯ ಎನ್​ಜಿಒಗಳು ಕೂಡ ಈ ಬಗ್ಗೆ ಧ್ವನಿ ಎತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

ಪೊಲೀಸರು ಸಹ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ರಾಜ್ಯಕ್ಕೆ ಅವಮಾನ ತಂದಿದೆ. ಮಹಿಳೆಯರಿಗೆ ಭದ್ರತೆ ಒದಗಿಸುವ ಜವಾಬ್ದಾರಿಯುಳ್ಳವರು ಕಿರುಕುಳ ಕೊಡುವವರಾಗಿ ಬದಲಾಗುತ್ತಿದ್ದಾರೆ. ಈ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಶ್ವೇತಾ ಮಹಾಲೆ ಹೇಳಿದ್ದಾರೆ. ಈ ಕುರಿತು ತನಿಖೆ ನಡೆಸಲು ಗೃಹ ಸಚಿವ ಅನಿಲ್ ದೇಶ್​​ಮುಖ್​ ಆದೇಶಿಸಿದ್ದಾರೆ. ಘಟನೆ ತನಿಖೆ ನಡೆಸಲು ರಾಜ್ಯವು 4 ಸದಸ್ಯರ ಸಮಿತಿಯನ್ನು ರಚಿಸಿ ಎರಡು ದಿನಗಳಲ್ಲಿ ವರದಿ ಸಲ್ಲಿಸಲಿದೆ ಎಂದು ದೇಶ್​​ಮುಖ್​ ಹೇಳಿದ್ದಾರೆ.

ಈ ಘಟನೆಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಜನರನ್ನು ರಕ್ಷಣೆ ಮಾಡಬೇಕಿರುವ ಪೊಲೀಸರೇ ಈ ರೀತಿ ಮಾಡಿದರೆ ಹೇಗೆ ಎನ್ನುವ ಪ್ರಶ್ನೆ ಕೇಳಿಬರುತ್ತಿದೆ.

ಇದನ್ನೂ ಓದಿ: ಪಾರದರ್ಶಕ ಬಟ್ಟೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಕ್ಕೆ ಶ್ರೀದೇವಿ ಮಗಳು ಖುಷಿ ಕಪೂರ್ ಟ್ರೋಲ್​

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!