AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಡಿಸ್​ ಹಾಸ್ಟೆಲ್​ಗೆ ನುಗ್ಗಿ ಹುಡುಗಿಯರ ಬಟ್ಟೆ ಬಿಚ್ಚಿಸಿ ಡ್ಯಾನ್ಸ್ ಮಾಡಿಸಿದ ಪೊಲೀಸರು, ತನಿಖೆಗೆ ಆದೇಶ

ಈ ಘಟನೆಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಜನರನ್ನು ರಕ್ಷಣೆ ಮಾಡಬೇಕಿರುವ ಪೊಲೀಸರೇ ಈ ರೀತಿ ಮಾಡಿದರೆ ಹೇಗೆ ಎನ್ನುವ ಪ್ರಶ್ನೆಯನ್ನು ಕೇಳಿಕೊಳ್ಳುತ್ತಿದ್ದಾರೆ. 

ಲೇಡಿಸ್​ ಹಾಸ್ಟೆಲ್​ಗೆ ನುಗ್ಗಿ ಹುಡುಗಿಯರ ಬಟ್ಟೆ ಬಿಚ್ಚಿಸಿ ಡ್ಯಾನ್ಸ್ ಮಾಡಿಸಿದ ಪೊಲೀಸರು, ತನಿಖೆಗೆ ಆದೇಶ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Mar 03, 2021 | 6:46 PM

Share

ಹೆಣ್ಣುಮಕ್ಕಳಿಗೆ ತೊಂದರೆ ಉಂಟಾದರೆ ಪೊಲೀಸರು ಅವರನ್ನು ರಕ್ಷಿಸುವ ಕಾರ್ಯ ಮಾಡಬೇಕು. ಆದರೆ, ಮಹಾರಾಷ್ಟ್ರದಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದ ಕೆಲಸವಾಗಿದೆ. ರಕ್ಷಣೆ ಮಾಡಬೇಕಿದ್ದ ಪೊಲೀಸರೇ ಸರ್ಕಾರ ನಡೆಸುತ್ತಿರುವ ಲೇಡಿಸ್​ ಹಾಸ್ಟೇಲ್​ಗೆ ನುಗ್ಗಿ, ಹೆಣ್ಣು ಮಕ್ಕಳ ಬಟ್ಟೆ ಬಿಚ್ಚಿಸಿ ಡ್ಯಾನ್ಸ್​ ಮಾಡಿಸಿದ್ದಾರೆ. ಈ ನಾಚಿಕೆಗೇಡಿನ ಕೃತ್ಯಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಮಹಾರಾಷ್ಟ್ರದ ಜಲ್ಗಾಂವ್ ನಗರದಲ್ಲಿ ಲೇಡಿಸ್​ ಹಾಸ್ಟೆಲ್​ ಒಂದಿದೆ. ಇದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ನಡೆಸುತ್ತಿದ್ದಾರೆ. ರಾತ್ರಿ ವೇಳೆ ಪೊಲೀಸರು ಹಾಗೂ ಕೆಲ ವ್ಯಕ್ತಿಗಳು ಹಾಸ್ಟೆಲ್​ ಒಳಗೆ ನುಗ್ಗಿದ್ದಾರೆ. ಎದುರು ಸಿಕ್ಕ ಕೆಲ ಹುಡುಗಿಯರ ಬಟ್ಟೆ ಬಿಚ್ಚಿಸಿದ್ದಾರೆ. ನಂತರ ಅವರ ಬಳಿ ಡ್ಯಾನ್ಸ್​ ಮಾಡಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಕೆಳಮನೆಯಲ್ಲಿ ಚಿಖ್ಲಿ ಕ್ಷೇತ್ರದ ಶಾಸಕಿ ಶ್ವೇತಾ ಮಹಾಲೆ ಈ ವಿಚಾರದ ಬಗ್ಗೆ ಆಕ್ಷೇಪ ಹೊರ ಹಾಕಿದ್ದಾರೆ. ಸ್ಥಳೀಯ ಎನ್​ಜಿಒಗಳು ಕೂಡ ಈ ಬಗ್ಗೆ ಧ್ವನಿ ಎತ್ತಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

ಪೊಲೀಸರು ಸಹ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವುದು ರಾಜ್ಯಕ್ಕೆ ಅವಮಾನ ತಂದಿದೆ. ಮಹಿಳೆಯರಿಗೆ ಭದ್ರತೆ ಒದಗಿಸುವ ಜವಾಬ್ದಾರಿಯುಳ್ಳವರು ಕಿರುಕುಳ ಕೊಡುವವರಾಗಿ ಬದಲಾಗುತ್ತಿದ್ದಾರೆ. ಈ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಶ್ವೇತಾ ಮಹಾಲೆ ಹೇಳಿದ್ದಾರೆ. ಈ ಕುರಿತು ತನಿಖೆ ನಡೆಸಲು ಗೃಹ ಸಚಿವ ಅನಿಲ್ ದೇಶ್​​ಮುಖ್​ ಆದೇಶಿಸಿದ್ದಾರೆ. ಘಟನೆ ತನಿಖೆ ನಡೆಸಲು ರಾಜ್ಯವು 4 ಸದಸ್ಯರ ಸಮಿತಿಯನ್ನು ರಚಿಸಿ ಎರಡು ದಿನಗಳಲ್ಲಿ ವರದಿ ಸಲ್ಲಿಸಲಿದೆ ಎಂದು ದೇಶ್​​ಮುಖ್​ ಹೇಳಿದ್ದಾರೆ.

ಈ ಘಟನೆಗೆ ಸಾರ್ವಜನಿಕ ವಲಯದಲ್ಲೂ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಜನರನ್ನು ರಕ್ಷಣೆ ಮಾಡಬೇಕಿರುವ ಪೊಲೀಸರೇ ಈ ರೀತಿ ಮಾಡಿದರೆ ಹೇಗೆ ಎನ್ನುವ ಪ್ರಶ್ನೆ ಕೇಳಿಬರುತ್ತಿದೆ.

ಇದನ್ನೂ ಓದಿ: ಪಾರದರ್ಶಕ ಬಟ್ಟೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಕ್ಕೆ ಶ್ರೀದೇವಿ ಮಗಳು ಖುಷಿ ಕಪೂರ್ ಟ್ರೋಲ್​

Follow Us
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ