AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai Covid Cases: ಮುಂಬೈನಲ್ಲಿ ಕೊರೊನಾ ಕೇಸ್ ಹೆಚ್ಚಳ; ಜ. 31ರವರೆಗೆ ಶಾಲೆಗಳು ಬಂದ್

ಮುಂಬೈನಲ್ಲಿ ಜನವರಿ 31ರವರೆಗೆ ಮಹಾರಾಷ್ಟ್ರದಲ್ಲಿ 1ರಿಂದ 9ನೇ ತರಗತಿಯವರೆಗೆ ಶಾಲೆಗಳನ್ನು ಮುಚ್ಚಲಾಗುವುದು. 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಕೊರೊನಾ ಲಸಿಕೆ ಹಾಕಲು ಮಾತ್ರ ಶಾಲೆಗಳಿಗೆ ಕರೆಸಲಾಗುವುದು ಎಂದು ಬಿಎಂಸಿ ತಿಳಿಸಿದೆ.

Mumbai Covid Cases: ಮುಂಬೈನಲ್ಲಿ ಕೊರೊನಾ ಕೇಸ್ ಹೆಚ್ಚಳ; ಜ. 31ರವರೆಗೆ ಶಾಲೆಗಳು ಬಂದ್
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 03, 2022 | 7:11 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಕೇಸುಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಸಚಿವ ಸಂಪುಟದಲ್ಲೂ ಹಲವು ಸಚಿವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ ಕೊವಿಡ್​-19 ಪ್ರಕರಣಗಳ ಭಾರೀ ಏರಿಕೆಯ ದೃಷ್ಟಿಯಿಂದ ಮುಂಬೈನಲ್ಲಿ ಜನವರಿ 31ರವರೆಗೆ ಮಹಾರಾಷ್ಟ್ರದಲ್ಲಿ 1ರಿಂದ 9ನೇ ತರಗತಿಯವರೆಗೆ ಶಾಲೆಗಳನ್ನು ಮುಚ್ಚಲಾಗುವುದು. 10 ಮತ್ತು 12ನೇ ತರಗತಿಗಳಿಗೆ ನಿಗದಿಪಡಿಸಿದಂತೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತದೆ.

15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳನ್ನು ಕೊರೊನಾವೈರಸ್ ಲಸಿಕೆ ಹಾಕಲು ಮಾತ್ರ ಶಾಲೆಗಳಿಗೆ ಕರೆಸಲಾಗುವುದು ಎಂದು ಬಿಎಂಸಿ ತಿಳಿಸಿದೆ. ಮುಂಬೈನಲ್ಲಿ 8,063 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದೆ. ಕೊವಿಡ್ ಸಾಂಕ್ರಾಮಿಕ ರೋಗದಿಂದಾಗಿ 20 ತಿಂಗಳುಗಳಿಗಿಂತ ಹೆಚ್ಚು ಕಾಲ ಮಹಾರಾಷ್ಟ್ರದಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಬಳಿಕ 1ರಿಂದ 7 ನೇ ತರಗತಿಗಳಿಗೆ ಡಿಸೆಂಬರ್ 15ರಂದು ಮುಂಬೈನಲ್ಲಿ ಶಾಲೆಯನ್ನು ಪುನಃ ತೆರೆಯಲಾಗಿತ್ತು. ಆದರೆ, ಇದೀಗ ಒಮಿಕ್ರಾನ್ ಕೇಸುಗಳು ಹೆಚ್ಚಾಗುತ್ತಿರುವುದರಿಂದ ಮತ್ತೆ ಶಾಲೆಯನ್ನು ಮುಚ್ಚಲಾಗಿದೆ.

ಮಹಾರಾಷ್ಟ್ರದಲ್ಲಿ 50 ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ಸಂಖ್ಯೆಯನ್ನು 510 ಕ್ಕೆ ತಲುಪಿದೆ. ಹೊಸ ಪ್ರಕರಣಗಳಲ್ಲಿ, 36 ಪುಣೆ ನಗರದಲ್ಲಿ, ಎಂಟು ಪಿಂಪ್ರಿ ಚಿಂಚ್‌ವಾಡ್‌ನಿಂದ ಮತ್ತು ಪುಣೆ ಗ್ರಾಮಾಂತರ ಮತ್ತು ಸಾಂಗ್ಲಿ ಜಿಲ್ಲೆಗಳಿಂದ ತಲಾ ಎರಡು ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ, ರಾಜ್ಯದಲ್ಲಿ 66,99,868 ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಭಾನುವಾರ 11,877 ದಾಖಲಾಗಿವೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಪ್ರಸ್ತುತ ಪ್ರವೃತ್ತಿಯನ್ನು ಆಧರಿಸಿ, ಜನವರಿ ಮೂರನೇ ವಾರದ ವೇಳೆಗೆ ನಾವು ಸುಮಾರು ಎರಡು ಲಕ್ಷ ಸಕ್ರಿಯ ಪ್ರಕರಣಗಳನ್ನು ತಲುಪುವ ನಿರೀಕ್ಷೆಯಿದೆ.

ಇದನ್ನೂ ಓದಿ: Omicron: ಒಮಿಕ್ರಾನ್ ಮೊದಲು ಪತ್ತೆಯಾದ ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ಹೊಸ ಕೇಸುಗಳ ಸಂಖ್ಯೆ ಕುಸಿತ

Covid Vaccine: ಕರ್ನಾಟಕದಲ್ಲಿರುವ 31 ಲಕ್ಷ ಮಕ್ಕಳಿಗೆ ಕೊವಿಡ್ ಲಸಿಕೆ ಪಡೆಯಲು ಅರ್ಹತೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ