AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮೂಢನಂಬಿಕೆಯಿಂದ ಪ್ರಾಣವೇ ಹೋಯ್ತು: ಭೂತ ಓಡಿಸ್ತೀನಿ ಎಂದು ಥಳಿಸಿದ ತಾಂತ್ರಿಕ, ಬಾಲಕ ಸಾವು

ಮೂಢನಂಬಿಕೆಯಿಂದಾಗಿ ಮುಗ್ಧ ಜೀವ ಬಲಿಯಾಗಿದೆ. ತಾಂತ್ರಿಕರೊಬ್ಬರು ಭೂತ ಓಡಿಸ್ತೀನಿ ಎಂದು ಬಾಲಕನೊಬ್ಬನನ್ನು ಥಳಿಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಈ ಘಟನೆ ನಡೆದಿದೆ.

Crime News: ಮೂಢನಂಬಿಕೆಯಿಂದ ಪ್ರಾಣವೇ ಹೋಯ್ತು: ಭೂತ ಓಡಿಸ್ತೀನಿ ಎಂದು ಥಳಿಸಿದ ತಾಂತ್ರಿಕ, ಬಾಲಕ ಸಾವು
ಮೂಢನಂಬಿಕೆImage Credit source: East India Story
ನಯನಾ ರಾಜೀವ್
|

Updated on: May 24, 2023 | 10:43 AM

Share

ಮೂಢನಂಬಿಕೆಯಿಂದಾಗಿ ಮುಗ್ಧ ಜೀವ ಬಲಿಯಾಗಿದೆ. ತಾಂತ್ರಿಕರೊಬ್ಬರು ಭೂತ ಓಡಿಸ್ತೀನಿ ಎಂದು ಬಾಲಕನೊಬ್ಬನನ್ನು ಥಳಿಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಕವಠೆ ಮಹಾಕಾಲ್‌ನಲ್ಲಿ ಭೂತೋಚ್ಚಾಟನೆಯ ಹೆಸರಿನಲ್ಲಿ 14 ವರ್ಷದ ಬಾಲಕನನ್ನು ತಾಂತ್ರಿಕರೊಬ್ಬರು ತೀವ್ರವಾಗಿ ಥಳಿಸಿದ್ದು, ಇದರಿಂದಾಗಿ ಆತ ಸಾವನ್ನಪ್ಪಿದ್ದಾನೆ. ಘಟನೆಯನ್ನು ಮುಚ್ಚಿ ಹಾಕಲು ಸಾಕಷ್ಟು ಪ್ರಯತ್ನಗಳು ನಡೆದಿದ್ದವು.

ದೂರಿನ ಪ್ರಕಾರ ಜಿಲ್ಲೆಯ ಕವಠೆ ಮಹಾಂಕಲ್ ನಿವಾಸಿ ಆರ್ಯನ್ ದೀಪಕ್ ಲಾಂಜೆ ಎಂಬುವವರಿಗೆ ಹಲವು ದಿನಗಳಿಂದ ಜ್ವರವಿತ್ತು. ಸಾಕಷ್ಟು ಚಿಕಿತ್ಸೆ ನೀಡಿದರೂ ಪರಿಹಾರ ಸಿಗಲಿಲ್ಲ. ನಂತರ ಲಾಂಗ್ಡೆಯವರ ಕುಟುಂಬವು ಕರ್ನಾಟಕದಲ್ಲಿರುವ ಶಿರಗೂರಿನಲ್ಲಿ ತಾಂತ್ರಿಕ ಅಪ್ಪಾಸಾಹೇಬ್ ಕಾಂಬಳೆ ಅವರ ಬಳಿಗೆ ಕರೆದೊಯ್ದರು.

ಭೂತೋಚ್ಛಾಟನೆ ಮಾಡುತ್ತೇನೆ ಎಂದು ಬಾಲಕನಿಗೆ ಥಳಿಸಿದ್ದಾರೆ, ಇದರಿಂದ ಬಾಲಕನಿಗೆ ತೀವ್ರ ಗಾಯಗಳಾಗಿತ್ತು, ನಂತರ ಕುಟುಂಬವು ಅವರನ್ನು ಶಿರಗೂರಿನಿಂದ ಸುಮಾರು 40 ಕಿಮೀ ದೂರದಲ್ಲಿರುವ ಸಾಂಗ್ಲಿ ಜಿಲ್ಲೆಯ ಮೀರಜ್‌ನಲ್ಲಿರುವ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: Belagavi News: ಮನೆ ಮಹಡಿ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸಾವು; ಮುಗ್ಧ ಬಾಲಕಿ ಸಾವಿಗೆ ಯಾರು ಹೊಣೆ?

ಈ ಘಟನೆಯ ನಂತರ ಮೂಢನಂಬಿಕೆ ನಿರ್ಮೂಲನಾ ಸಮಿತಿಯ ಕಾರ್ಯಕರ್ತರು ಈ ವಿಷಯ ತಿಳಿದ ಅವರು ಮೃತರ ಕುಟುಂಬಸ್ಥರನ್ನು ಹಾಗೂ ಅಂದಿನ ಸಹಾಯಕ ಪೊಲೀಸ್ ನಿರೀಕ್ಷಕ ಜಿತೇಂದ್ರ ಶಹಾನೆ ಅವರನ್ನು ಕವಠೆ ಮಹಾಂಕಲ್ ಪೊಲೀಸ್ ಠಾಣೆಯಲ್ಲಿ ಭೇಟಿಯಾಗಿ ದೂರು ದಾಖಲಿಸಿದ್ದಾರೆ.

ಈಗ ಕರ್ನಾಟಕ ಪೊಲೀಸರು ತನಿಖೆ ನಡೆಸಲಿದ್ದಾರೆ. ಕರ್ನಾಟಕದಲ್ಲಿ ಮೂಢನಂಬಿಕೆ ವಿರೋಧಿ ಕಾನೂನು ಇಲ್ಲ, ಇಂತಹ ಪರಿಸ್ಥಿತಿಯಲ್ಲಿ, ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ತಾಂತ್ರಿಕನ ವಿರುದ್ಧ ಝೀರೋ ಎಫ್‌ಐಆರ್ ದಾಖಲಿಸಲಾಗಿದೆ.

ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ